ನೀರಿನ ಅಭಾವ: ಬೆಂಗ್ಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಐಪಿಎಲ್‌ ಪಂದ್ಯ ಸ್ಥಳಾಂತರ...?

VK NEWS
By -
0

ಪ್ರತಿ ನಿತ್ಯ ನಿರ‍್ವಹಣೆಗೂ ಸಾವಿರಾರು ಲೀಟರ್‌ ನೀರು ಬೇಕೇ ಬೇಕು. ಮತ್ತೊಂದೆಡೆ ನಗರದಲ್ಲಿ ನೀರಿನ ಅಭಾವವಾಗಿ ಸರಬರಾಜು ವ್ಯತ್ಯಯವಾಗುತ್ತಿದೆ. ಜನರು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಸಂರ‍್ಭದಲ್ಲಿ ಹೆಚ್ಚು ನೀರು ಬಳಸುವ ಐಪಿಎಲ್‌ ಪಂದ್ಯಗಳನ್ನು ನಡೆಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಾರ‍್ವಜನಿಕ ವಲಯದಿಂದ ಕೇಳಿ ಬಂದಿದೆ. 


ಬೆಂಗಳೂರು(ಮಾ.12): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ಪಂದ್ಯ ನಡೆಸಲು ಸುಮಾರು 60 ಸಾವಿರದಿಂದ 70 ಸಾವಿರ ಲೀಟರ್‌ ನೀರು ಬೇಕಾಗುತ್ತದೆ. ಕಾತುರದಿಂದ ಕಾಯುತ್ತಿರುವ ಕ್ರಿಕೆಟ್ ಅಭಿಮಾನಗಳು ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಮೇಲೂ ನೀರಿನ ಅಭಾವದ ಕರಿಛಾಯೆ ಬಿದ್ದಿದೆ. ಮಾ.25ರಿಂದ ಏ.2ರ ವರೆಗೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ 3 ಪಂದ್ಯಗಳು ನಿಗದಿಯಾಗಿದ್ದು, ಈ ಪಂದ್ಯಗಳನ್ನು ಸ್ಥಳಾಂತರ ಮಾಡಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ನಿರ‍್ಧಾರ ತೆಗೆದುಕೊಳ್ಳುವುದಾಗಿ ಕೆಎಸ್ ಸಿಎ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

 ಒಂದು ಪಂದ್ಯ ನಡೆಸಲು ಸುಮಾರು 60,000 ದಿಂದ 70,000 ಲೀ.ನೀರು ಬೇಕಾಗುತ್ತದೆ. ಪ್ರತಿ ನಿತ್ಯ ನರ‍್ವಹಣೆಗೂ ಸಾವಿರಾರು ಲೀಟರ್‌ ನೀರು ಬೇಕೇ ಬೇಕು. ಮತ್ತೊಂದೆಡೆ ನಗರದಲ್ಲಿ ನೀರಿನ ಅಭಾವವಾಗಿ ಸರಬರಾಜು ವ್ಯತ್ಯಯವಾಗುತ್ತಿದೆ. ಜನರು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಸಂರ‍್ಭದಲ್ಲಿ ಹೆಚ್ಚು ನೀರು ಬಳಸುವ ಐಪಿಎಲ್‌ ಪಂದ್ಯಗಳನ್ನು ನಡೆಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸರ‍್ವಜನಿಕ ವಲಯದಿಂದ ಕೇಳಿ ಬಂದಿದೆ. ಆದರೆ, ಕ್ರೀಡಾಂಗಣವೂ ಜಲಮಂಡಳಿ ನೀರಿನ ಮೇಲೆ ಹೆಚ್ಚು ಅವಲಂಬಿತವಾಗಿಲ್ಲ. ಕೊಳಚೆ ನೀರು ಶುದ್ದೀಕರಣ ಪ್ಲಾಂಟ್ ಅಳವಡಿಸಿಕೊಳ್ಳಲಾಗಿದೆ. ಕ್ರೀಡಾಂಗಣದ ಹುಲ್ಲು ಹಾಸು ಬೆಳೆಸುವುದು ಸೇರಿದಂತೆ ಒಟ್ಟಾರೆ ಕ್ರೀಡಾಂಗಣದ ನಿರ‍್ವಹಣೆಗೆ ಶುದ್ದೀಕರಿಸಿದ ನೀರು ಬಳಕೆ ಮಾಡಲಾಗುತ್ತದೆ. ಹೀಗಾಗಿ, ಪಂದ್ಯಗಳ ಆಯೋಜನೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎನ್ನುವ ವಾದವು ಕೆಎಸ್‌ಸಿಎ ವಲಯದಿಂದ ಕೇಳಿ ಬಂದಿದೆ.

ಪಂದ್ಯಗಳನ್ನು ನಿಗದಿಯಂತೆ ನಡೆಸಬೇಕೋ ಅಥವಾ ಸ್ಥಳಾಂತರಿ ಸಬೇಕೋ ಎಂಬ ಬಗ್ಗೆ ಈವರೆಗೆ ತರ‍್ಮಾನ ತೆಗೆದುಕೊಂಡಿಲ್ಲ. ಸಮಿತಿಯ ಸದಸ್ಯರೊಂದಿಗೆ ಶೀಘ್ರದಲ್ಲೇ ಸಭೆ ನಡೆಸಿ ಸೂಕ್ತ ತರ‍್ಮಾನವನ್ನು ತೆಗೆದುಕೊಳ್ಳುತ್ತೇವೆ ಎಂದು ಕೆಎಸ್‌ಸಿಎ ಸಿಇಒ ಶುಭೇಂದು ಘೋಷ್ ತಿಳಿಸಿದರು.

Post a Comment

0Comments

Post a Comment (0)