ಕೇಂದ್ರ ಸಚಿವರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರಿ ಶೋಭಾ ಕರಂದ್ಲಾಜೆ ಅವರು ಮತ್ತಿಕೆರೆ ಬಿಬಿಎಂಪಿ ವಾರ್ಡ್ 36 ರಲ್ಲಿ, ಮಾಜಿ ಉಪ ಮುಖ್ಯ ಮಂತ್ರಿಗಳು ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಸಿ. ಎನ್. ಅಶ್ವಥನಾರಾಯಣ, ಮಾಜಿ ಪಾಲಿಕೆ ಸದಸ್ಯರುಗಳಾದ ಮುನಿಸ್ವಾಮಿಗೌಡರು, ಎಂ. ಸಿ. ಜಯಪ್ರಕಾಶ್ ರವರೊಂದಿಗೆ ವಾರ್ಡಿನ ಪ್ರಮುಖರಾದ ಮುನಿರಾಜಯ್ಯ (ಅಯ್ಯು) ಹಾಗೂ ನರಸಿಂಹರಾಜು ಕುಟುಂಬದವರನ್ನು ಭೇಟಿ ಮಾಡಿ ಬೆಂಬಲ ಕೋರಿದ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷ ಕೆ. ವರದರಾಜು, ಸ್ಥಳೀಯ ಬಿಜೆಪಿ ಮುಖಂಡರುಗಳಾದ ಸತ್ಯನಾರಾಯಣ (ನಾಣಿ) ಹಾಗೂ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮತಯಾಚನೆ
By -
March 31, 2024
0