ರಾಹುಲ್ ಗಾಂಧಿ ಹೇಳಿಕೆಯಲ್ಲಿ ಯಾವುದೇ ಗಂಭೀರತೆ ಇಲ್ಲ, ಏಕೆಂದರೆ ಅವರದೇ ಪಕ್ಷದವರು ರಾಹುಲ್ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಬೇರೆಯವರು ಹೇಗೆ ಅವರನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.
ಚುನಾವಣಾ ಪ್ರಕ್ರಿಯೆ ಗರಿಗೆದರಿದಂತೆ ಕಾಂಗ್ರೆಸ್ ಪಕ್ಷದ ಸುಳಿವೇ ಇಲ್ಲ. ಈ ಬೆಳವಣಿಗೆಗೆ ರಾಹುಲ್ ಅವರೇ ಕಾರಣ. ಕಾಂಗ್ರೆಸ್ ಪಕ್ಷವನ್ನಾಗಲಿ ಅಥವಾ ಚುನಾವಣೆಯನ್ನಾಗಲಿ ರಾಹುಲ್ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು ಎಂದರು.
ಜೆ.ಪಿ ನಡ್ಡಾ ಅವರೊಂದಿಗೆ ಜಬಲ್ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯಾದವ್, ಇಂದೋರ್ ಹಾಗೂ ಉಜ್ಜಯಿನಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಲಿದ್ದಾರೆ.