ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಬೆಂಗಳೂರಿನ ಶಾಕಾಂಬರಿನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ಸುಶ್ರಾವ್ಯ ಆಚಾರ್ಯ ಅವರು ದೇವರನಾಮಗಳನ್ನು ಪ್ರಸ್ತುತ ಪಡಿಸಿದರು
. ಇವರ ಗಾಯನಕ್ಕೆ ಶ್ರೀ ಆದಿತ್ಯ ಸತ್ಯನಾರಾಯಣ ಪಿಟೀಲು ವಾದನದಲ್ಲಿ ಹಾಗೂ ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಂದನಾರ್ಪಣೆ ಮಾಡಿದರು.