ಡಿ.ಕೆ.ಶಿ.ಗೆ ಎಚ್.ಡಿ.ಕೆ. ಹಿತವಚನ

VK NEWS
By -
0

 

ಬೆಂಗಳೂರು, ಜುಲೈ 22:  ಮಂಡ್ಯ ಸಂಸದ, ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿದ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಕುರಿತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದರು. ಇದಕ್ಕೆ ಎಚ್. ಡಿ. ಕುಮಾರಸ್ವಾಮಿ ಸೋಮವಾರ ಹಿತ ವಚನ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಕುಮಾರಸ್ವಾಮಿ, 'ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಲೇವಡಿ ಮಾಡಿದ್ದರು!' ಎಂದು ಹೇಳಿದ್ದಾರೆ.

'ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರಕಾರವನ್ನೂ ಟೀಕಿಸಿಲ್ಲ. ಆದರೂ, ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ 40ಕ್ಕೂ ಹೆಚ್ಚು ವೀರಯೋಧರು ರಕ್ಷಣಾ ಕಾರ್ಯಕ್ಕೆ ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಬಗ್ಗೆ ಅವರೇ ಉತ್ತರಿಸಬೇಕು' ಎಂದು ಹೇಳಿದ್ದಾರೆ.

 'ಮಿಲಿಟರಿಯನ್ನು ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು. ಅವರೊಬ್ಬರೇ ಬಂದು ಏನು ಮಾಡುತ್ತಾರೆ ಎಂದು ಲಘುವಾಗಿ ಮಾತನಾಡಿದ್ದರು!!. ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ' ಎಂದು ತಿಳಿಸಿದ್ದಾರೆ.

'ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ.. ಇಷ್ಟು ಸರಳ ಸಾಮರಸ್ಯ ತತ್ತ್ವವೂ ಡಿಸಿಎಂ ಆಗಿರುವ ವ್ಯಕ್ತಿಗೆ ತಿಳಿದಿಲ್ಲ ಎಂದರೆ, ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ' ಎಂದು ಪೋಸ್ಟ್ ಹಾಕಿದ್ದು, #ನಮ್ಮಸೇನೆ_ನಮ್ಮಹೆಮ್ಮೆ ಎಂಬ ಹ್ಯಾಷ್ಟ್ಯಾಗ್ ಬಳಕೆ ಮಾಡಿದ್ದಾರೆ.

 ಶಿರೂರು ಘಟನಾ ಸ್ಥಳಕ್ಕೆ ಎಚ್‌. ಡಿ. ಕುಮಾರಸ್ವಾಮಿ ಭೇಟಿ ನೀಡಿದ ಕುರಿತು ಮಾತನಾಡಿದ್ದ ಡಿ. ಕೆ. ಶಿವಕುಮಾರ್, "ಅಂಕೋಲಾಕ್ಕೆ ಹೋಗಿರುವ ಎಚ್. ಡಿ. ಕುಮಾರಸ್ವಾಮಿ ಮಳೆ ಹಾನಿ ಸರಿಪಡಿಸಲು ಎಲ್ಲಿ ಫೀಲ್ಡ್ಗೆ ಇಳಿದಿದ್ದಾರೆ. ಅವರೇನು ಮಿಲಿಟರಿ ತಂದು ಕಾರ್ಯಾಚರಣೆ ಮಾಡಿಸಿದ್ದಾರಾ?" ಎಂದು ಪ್ರಶ್ನಿಸಿದ್ದರು.

Post a Comment

0Comments

Post a Comment (0)