ಪ್ರವಾಸೋದ್ಯಮದ ಸಮಗ್ರ ಬೆಳವಣಿಗೆಗೆ ಒತ್ತಾಸೆಯಾಗಿ ನಿಲ್ಲುವುದು ಸರ್ಕಾರದ ಗುರಿ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ

VK NEWS
By -
0

ಬೆಂಗಳೂರು, ಫೆಬ್ರವರಿ 27 (ಕರ್ನಾಟಕ ವಾರ್ತೆ): ಪ್ರವಾಸೋದ್ಯಮದ ಸಮಗ್ರ ಬೆಳವಣಿಗೆಗೆ ಒತ್ತಾಸೆಯಾಗಿ ನಿಲ್ಲುವುದು ಸರ್ಕಾರದ ಗುರಿಯಾಗಿದ್ದು, ಅದರ ಪೈಕಿ ಎಕ್ಸ ಪೋ ಒಂದು ಬಹುಮುಖ್ಯವಾದ ಚಟುವಟಿಕೆಯಾಗಿದೆ. ಕೆಲವೇ ಕೆಲವು ರಾಜ್ಯಗಳು ಈ ಮಾದರಿಯ ಬಿ2ಬಿ ಸಮಾವೇಶಗಳನ್ನು ದೇಶದಲ್ಲಿ ಆಯೋಜನೆ ಮಾಡುತ್ತಿದ್ದು, ಅದರಲ್ಲಿ ನಮ್ಮ ರಾಜ್ಯವು ಒಂದಾಗಿದೆ. ನಮ್ಮ ಈ ಕ್ರಮಕ್ಕೆ ಕೇಂದ್ರ ಸರ್ಕಾರವು ಬೆಂಬಲ ನೀಡಿದ್ದು, ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಈ ಸಮಾವೇಶದಲ್ಲಿ ಭಾಗವಹಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.

 ಇಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಕರ್ನಾಟಕ ಟೂರಿಸಮ್ ಸೊಸೈಟಿಯ ಸಹಯೋಗದೊಂದಿಗೆ ಬೆಂಗಳೂರಿನ ತುಮಕೂರು ರಸ್ತೆ, ಮಂಜುನಾಥನಗರದ ಬಿ.ಐ.ಇ.ಸಿ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವ್ಯವಹಾರಿಕ (ಬಿಸಿನೆಸ್) (ಬಿ2ಬಿ) ಸಭೆಗಳ ಉದ್ಘಾಟನೆ ಮಾಡಿ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವಕ್ಕೆ ರಾಜ್ಯದ ಅದ್ಭುತ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ದೃಷ್ಟಿಯಿಂದ ಫೆಬ್ರವರಿ 27 ಮತ್ತು 28 ರಂದು 2 ದಿನಗಳ ಕಾಲ ವ್ಯವಹಾರಿಕ ಸಭೆಗಳು ಹಮ್ಮಿಕೊಳ್ಳಲಾಗಿದೆ. ಈ ಸಭೆಗಳಲ್ಲಿ ಪಾರದರ್ಶಕ ಸ್ಪರ್ಧಾತ್ಮಕ ಪ್ರಕ್ರಿಯೆ ಮೂಲಕ ದೇಶಿ, ವಿದೇಶಿ ಖರೀದಿದಾರರನ್ನು ಆಯ್ಕೆ ಮಾಡಲಾಗಿದೆ. 36 ದೇಶಗಳ 300 ಜನರ ಸಂದರ್ಶನ ನಡೆಸಿ, ಸುಮಾರು 110 ಕ್ಕೂ ಹೆಚ್ಚು ವಿದೇಶಿ ಖರೀದಿದಾರರು, ಏಜೆಂಟ್ ಗಳು ಮತ್ತು 15ಕ್ಕೂ ಹೆಚ್ಚು ವಿದೇಶಿ ಟ್ರಾವೆಲ್ ಮಾಧ್ಯಮದವರನ್ನು ಆಯ್ಕೆ ಮಾಡಲಾಗಿರುತ್ತದೆ. ಅಲ್ಲದೇ 858 ಕ್ಕೂ ಹೆಚ್ಚು ದೇಶಿಯ ಖರೀದಿದಾರರ ಸಂದರ್ಶನ ನಡೆಸಿ, ಸುಮಾರು 235 ಕ್ಕೂ ಹೆಚ್ಚು ದೇಶಿಯ ಖರೀದಿದಾರರು ಮತ್ತು 20ಕ್ಕೂ ಹೆಚ್ಚು ದೇಶಿ ಟ್ರಾವೆಲ್ ಮಾಧ್ಯಮದವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಪ್ರವಾಸೋದ್ಯಮ ವಲಯದ ಎಲ್ಲಾ ಭಾಗಿದಾರರನ್ನು ಒಂದೇ ಸೂರಿನಡಿ ಕರೆತಂದು ಈ ವಲಯದ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಿ ಮಾರ್ಗೋಪಾಯಗಳನ್ನು ಪಡೆಯುವ ಉದ್ದೇಶ ಹೊಂದಲಾಗಿದೆ. ಹೋಟೆಲ್ ಉದ್ಯಮಿದಾರರು, ಟ್ರಾವಲ್ ಏಜೆನ್ಸಿಗಳು, ಹೋಂಸ್ಟೇ ಮಾಲೀಕರು, ಕೃಷಿ ಪ್ರವಾಸೋದ್ಯಮದ ಪ್ರವರ್ತಕರು, ಪ್ರವಾಸಿ ಮಾರ್ಗದರ್ಶಿಗಳು, ಮಹಿಳಾ ಉದ್ಯಮಿದಾರರು ಈ ವಲಯಕ್ಕೆ ಸಂಬಂಧಪಟ್ಟವರೆಲ್ಲರೂ ಈ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.
ಈ ಸಮಾವೇಶದಲ್ಲಿ ನಮ್ಮ ರಾಜ್ಯದಲ್ಲಿ ಅಸಂಖ್ಯಾತ ಪ್ರವಾಸಿ ತಾಣಗಳು, ಸ್ಮಾರಕಗಳು ಇವೆ. 25 ಸಾವಿರಕ್ಕೂ ಹೆಚ್ಚು ಅರಕ್ಷಿತ ಸ್ಮಾರಕಗಳಿದ್ದು, ಅವುಗಳಲ್ಲಿ 800 ಕ್ಕೂ ಹೆಚ್ಚು ಸ್ಮಾರಕಗಳನ್ನು ರಕ್ಷಿತ ಸ್ಮಾರಕಗಳಾಗಿ ಘೋಷಿಸಲಾಗಿದೆ. ಮುಂದಿನ ಪೀಳಿಗೆಗೆ ಇವುಗಳ ಮಹತ್ವವನ್ನು ತಿಳಿಸಲು ಹಾಗೂ ಅವುಗಳ ಸಂರಕ್ಷಣೆಯ ಮಹತ್ವವನ್ನು ತಿಳಿಸುವ ಮಹಾತ್ಕಾರ್ಯಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ನಮ್ಮ ಕಲೆ, ಸಂಸ್ಕøತಿ, ಪರಂಪರೆ, ಇತಿಹಾಸ, ಕರಕುಶಲ ಉತ್ಪನ್ನಗಳು, ಪಾಕ ಪದ್ಧತಿ, ನೃತ್ಯ ಪ್ರಕಾರಗಳು, ಜೀವನ ಶೈಲಿ, ಅತಿಥಿ ಸತ್ಕಾರ ಇತ್ಯಾದಿಗಳನ್ನು ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಗುವುದು ಎಂದರು.
ಮಾರಾಟಗಾರರು ಮತ್ತು ಖರೀದಿದಾರರ ನಡುವೆ ಸಂಪರ್ಕ ಸೇತುವೆಯಾಗಿ ಪ್ರವಾಸೋದ್ಯಮ ಇಲಾಖೆಯು ಎಕ್ಸ ಪೋ ಮೂಲಕ ಕೆಲಸ ಮಾಡುತ್ತಿದೆ. 3 ದಿನಗಳಲ್ಲಿ ಸರಿ ಸುಮಾರು 16,000 ಬ್ಯುಸಿನೆಸ್ ಮೀಟಿಂಗ್ ಗಳು ನಡೆಯಲಿವೆ. ಭಾಗವಹಿಸುವ ಪ್ರತಿ ಭಾಗಿದಾರನು ಕಡ್ಡಾಯವಾಗಿ 40 ಮೀಟಿಂಗ್ ಗಳನ್ನು 2 ದಿನಗಳಲ್ಲಿ ನಮ್ಮ ಭಾಗಿದಾರರೊಂದಿಗೆ ಮಾಡುವಂತೆ ವ್ಯವಸ್ಥೆ ಮಾಡಲಾಗಿರುತ್ತದೆ. ನಮ್ಮ ರಾಜ್ಯದ ಶ್ರೀಮಂತ ಕಲೆ, ಸಂಸ್ಕøತಿಯನ್ನು ಬಿಂಬಿಸುವಂತಹ ಸಾಂಸ್ಕøತಿಕ ಕಾರ್ಯಕ್ರಮಗಳು, ನಮ್ಮ ಆಹಾರ ಶೈಲಿಯ ಪರಿಚಯ, ನೆಟ್ವಕಿರ್ಂಗ್ ಮೀಟಿಂಗ್ ಗಳು, ಫ್ರಿ ಮತ್ತು ಪೋಸ್ಟ್  ಎಫ್‍ಎಎಮ್ ಟೂರ್ ಗಳು ನಡೆಯಲಿವೆ.

ವಿದೇಶಿ ಏಜೆಂಟ್‍ಗಳಿಗೆ ಕಡ್ಡಾಯವಾಗಿ ಕರ್ನಾಟಕ ಹೆರಿಟೇಜ್ ಡಿಸ್ಕವರಿ, ಕರ್ನಾಟಕದ ಅತ್ಯುತ್ತಮ, ಕರಾವಳಿ ಕರ್ನಾಟಕ, ವನ್ಯಜೀವಿ ಹಾಗೂ ಬೆಟ್ಟಗಳು ಮತ್ತು ರಾಯಲ್ ಮೈಸೂರು ಹೆರಿಟೇಜ್‍ನ 5 ದಿನಗಳ ಪ್ರವಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. 30 ಜನರ 5 ತಂಡಗಳನ್ನಾಗಿ ವಿಂಗಡಿಸಿ, ಈ ಪ್ರವಾಸದಲ್ಲಿ ಭಾಗವಹಿಸಿದವರೆಲ್ಲರೂ ನಮ್ಮ ರಾಜ್ಯದ ಸಂಸ್ಕøತಿಗೆ ಕಲೆಗೆ ಮಾರು ಹೋಗಿದ್ದಾರೆ ಎಂದರು.

ನಮ್ಮ ರಾಜ್ಯದ ಎಲ್ಲಾ ಭಾಗದ 150ಕ್ಕೂ ಹೆಚ್ಚು ಭಾಗಿದಾರರು (ಹೋಟೆಲ್, ರೆಸಾರ್ಟ್, ಹೋಂ ಸ್ಟೇ, ಟ್ರಾವೆಲ್ ಆಪರೇಟರ್ ಗಳು, ಕೃಷಿ ಪ್ರವಾಸೋದ್ಯಮ ಭಾಗಿದಾರರು) ಭಾಗವಹಿಸಿದ್ದು, ಎಲ್ಲರಿಗೂ ತಮ್ಮ ತಮ್ಮ ಉತ್ಪನ್ನಗಳ ಪ್ರದರ್ಶನಕ್ಕಾಗಿ ಮಳಿಗೆ ವ್ಯವಸ್ಥೆ ಮಾಡಲಾಗಿದೆ. ಅಷ್ಟೇ ಅಲ್ಲದೇ, ಕಾವೇರಿ ಹ್ಯಾಂಡಿಕ್ರಾಪ್ಟ್, ಕೆಎಸ್‍ಐಸಿ, ಕಾಫೀ ಮಂಡಳಿ, ಕೆಎಸ್‍ಡಿ ಎಲ್, ಕೆಎಂಎಫ್ ಮಳಿಗೆಗಳನ್ನು ತೆರೆಯಲಾಗಿದೆ. ನಮ್ಮ ರಾಜ್ಯದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ, ಪುರಾತತ್ವ, ವಸ್ತು ಸಂಗ್ರಹಾಲಯಗಳು, ಪರಂಪರೆ ಇಲಾಖೆ, ಸುವರ್ಣ ರಥ, ಪ್ರವಾಸೋದ್ಯಮ ಇಲಾಖೆ ಮಳಿಗೆಗಳನ್ನು ತೆರೆಯಲಾಗಿದೆ.

ರೋಸ್ ವುಡ್ ಇನ್ ಲೇ ಕಾವೀರ್ಂಗ್, ಸಂಡೂರು ಕಸೂತಿ, ಬಿದ್ರಿ ಮುಂತಾದ ಕಲೆಗಳ ಚಟುವಟಿಕೆಗಳ ಪ್ರದರ್ಶನ, ದೇಶಿ ಮತ್ತು ವಿದೇಶಿ ಪ್ರವಾಸಿಗರನ್ನು ನಿಯಮಿತವಾಗಿ ಈ ಸಮಾವೇಶದ ಮೂಲಕ ರಾಜ್ಯಕ್ಕೆ ಸೆಳೆಯುವುದು ಮತ್ತು ಈ ಸಮಾವೇಶದಲ್ಲಿ ಭಾಗವಹಿಸುವ ಟ್ರಾವೆಲ್ ಅಪರೇಟರ್‍ಗಳು ನಮ್ಮ ರಾಜ್ಯದ ಪ್ರಚಾರ ರಾಯಭಾರಿಗಳಾಗಿ ತಮ್ಮ ತಮ್ಮ ದೇಶದ ಪ್ರವಾಸಿಗರನ್ನು ನಮ್ಮ ರಾಜ್ಯಕ್ಕೆ ನಿಯಮಿತವಾಗಿ ಕಳುಹಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆ ಮೂಲಕ ರಾಜ್ಯಕ್ಕೆ ಅದಾಯ ಬರುತ್ತದೆ. ಮುಂದಿನ 3-4 ವರ್ಷಗಳಲ್ಲಿ ಅಂದಾಜು 2,750 ಕೋಟಿ ಆದಾಯ ರಾಜ್ಯಕ್ಕೆ ಬರುವ ನಿರೀಕ್ಷೆಯಿದೆ. ಆದಾಯದ ಜೊತೆಗೆ ಆರ್ಥಿಕ ಚಟುವಟಿಕೆಗಳು ಗರಿಗೆದರಿ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ. ಕುಶಲ, ಅರೆಕುಶಲ ಯುವಕ ಯುವತಿಯರಿಗೆ ತಮ್ಮ ತಮ್ಮ ಸ್ಥಳಗಳಲ್ಲಿ ಉದ್ಯೋಗಗಳು ದೊರೆಯಲಿದ್ದು, ದೊಡ್ಡ ನಗರಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ವಿವಿಧ ವಲಯಗಳ ಜೊತೆಗೆ ಪ್ರವಾಸೋದ್ಯಮ ಬೆಳವಣಿಗೆ ಹೊಂದಲಿದೆ ಎಂದು ಅವರು ತಿಳಿಸಿದರು.


ಈ  ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಂ.ನಾಗರಾಜು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಸಲ್ಮಾ ಕೆ.ಫಹೀಮ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ  ಡಾ.ಕೆ.ವಿ. ರಾಜೇಂದ್ರ ರವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Post a Comment

0Comments

Post a Comment (0)