LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

14-7-2025ರ ಸೋಮವಾರದಂದು ಲೋಕಾರ್ಪಣೆಗೊಳ್ಳಲಿರುವ ಸಿಗಂದೂರಿನ ಪ್ರತಿಷ್ಠಿತ ಕೇಬಲ್ ಸೇತುವೆ

ಬೆಂಗಳೂರು,ಜು.13; ರಾಜ್ಯದ ಅತಿದೊಡ್ಡ ಕೇಬಲ್ ಸೇತುವೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಸಿಗಂಧೂರು ಕೇಬಲ್ ಸೇತುವೆಯನ್ನು ನಾಳೆ ಲೋಕಾರ್ಪಣೆಗೊಳಿಸಲಾಗುತ್ತಿದೆ.


ಸುಮಾರು 423 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ದೇಶದಲ್ಲಿ 2ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆಯಾದ ಅಂಬಾರಗೋಡ್ಲು- ಕಳಸವಳ್ಳಿ- ಸಿಗಂಧೂರು ಸಂಪರ್ಕ ಸೇತುವೆಯನ್ನು ನಿರ್ಮಿಸಲಾಗಿದೆ.


ಈ ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿ ಪಕ್ಷ ಆರ್. ಅಶೋಕ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.


ಶರಾವತಿ ಹಿನ್ನೀರು ಪ್ರದೇಶದಲ್ಲಿರುವ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ತೆರಳುವ ಭಕ್ತರು ಈ ಮೊದಲು ಶರಾವತಿ ಹಿನ್ನೀರಿನಲ್ಲಿ ಬಾರ್ಜ್ ನಲ್ಲಿ ಪ್ರಯಾಣಿಸಬೇಕಿತ್ತು. ಇದೀಗ ಸೇತುವೆ ನಿರ್ಮಾಣದಿಂದ ಭಕ್ತರಿಗೆ ಹಾಗೂ ಅಂಬಾರಗೋಡ್ಲು- ಕಳಸವಳ್ಳಿ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ಈ ಸೇತುವೆ ನಿರ್ಮಾಣದಿಂದ ಈ ಪ್ರದೇಶದ ಜನರ ಆರು ದಶಕಗಳ ಕನಸು ನನಸಾದಂತಾಗಿದೆ.


ಶರಾವತಿ ನದಿಯ ಹಿನ್ನೀರಿನ ಮೇಲೆ ನಿರ್ಮಾಣವಾಗಿರುವುದರಿಂದ, ಸ್ಥಳೀಯರಿಗೆ ಸಂಪರ್ಕದ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ್ದಾಗಿದೆ. ಆರ್ಥಿಕತೆ ದೃಷ್ಟಿಯಿಂದ ಹಲವಾರು ಜನರಿಗೆ ಇದರಿಂದ ಪ್ರಯೋಜನವಾಗಲಿದೆ. ಈ ಸೇತುವೆ ಸಾಗರ ತಾಲೂಕಿನ ಜನರಿಗೆ ಪಕ್ಕದ ಊರುಗಳಿಗೆ ತೆರಳಲು ಸುಗಮ ಸಂಪರ್ಕ ಸೇತುವೆಯಾಗಿ ಸೇವೆಗೆ ಒದಗಲಿದೆ.
2019ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 450 ಕೋಟಿ ರೂಪಾಯಿ ವೆಚ್ಚದ ಈ ಕಾಮಗಾರಿಗೆ ಚಾಲನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಸೇತುವೆ ದೇಶದಲ್ಲೇ ಎರಡನೇ ಅತಿದೊಡ್ಡ ಕೇಬಲ್ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2.24 ಕಿಲೋಮೀಟರ್ ಉದ್ದ ಮತ್ತು 16 ಮೀಟರ್ ಅಗಲವಿರುವ ಈ ಸೇತುವೆ 740 ಮೀಟರ್ ಕೇಬಲ್‍ಗಳ ಆಧಾರದ ಮೇಲೆ ನಿರ್ಮಾಣಗೊಂಡಿದೆ.
ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಸಂಪರ್ಕ ಕಲ್ಪಿಸಲಿರುವ ಈ ಸೇತುವೆ, ಸ್ಥಳೀಯರಿಗೆ ಹಲವಾರು ರೀತಿಯ ಸೌಕರ್ಯವಾಗಲಿದೆ.
ಸೇತುವೆಯ ಉದ್ದ: 2,125 ಮೀಟರ್ (2.1 ಕಿಲೋಮೀಟರ್), ಅಗಲ: 16 ಮೀಟರ್, ಕೇಬಲ್ ಎತ್ತರ: 38.5 ಮೀಟರ್, ಪಾದಚಾರಿ ಮಾರ್ಗ: 2 X 1.5 ಮೀಟರ್ , ಸಂಪರ್ಕ ರಸ್ತೆ: 1.05 ಕಿಮೀ ರಿಂದ 3 ಕಿಮೀ ವರೆಗೆ ಇರುತ್ತದೆ., ಸೇತುವೆಯ ತಳಪಾಯ: 164 ಫೈಲ್ ಗಳು (ಭದ್ರವಾದ ನಿರ್ಮಾಣ) ಹಾಗೂ ಉಕ್ಕಿನ ಕೇಬಲ್ ಉದ್ದ: 470 ಮೀಟರ್
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ