LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 2025-26 ನೇ ಸಾಲಿನ ಲಲಿತಕಲಾ ಅಕಾಡೆಮಿಯ ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಲಲಿತಕಲಾ ಅಕಾಡೆಮಿಯು 2025ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ಚಿತ್ರಕಲೆಗೆ ಸಂಬಂಧಿಸಿದ ಕನ್ನಡ ಪುಸ್ತಕಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಪ್ರತಿ ಪ್ರಕಾರದಲ್ಲಿ ತೀರ್ಪುಗಾರರು ಆಯ್ಕೆ ಮಾಡುವ 01 ಪುಸ್ತಕಕ್ಕೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಪುಸ್ತಕಗಳು 2024 ಜನವರಿ 01 ರಿಂದ 2024ರ ಡಿಸೆಂಬರ್ 31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಪುಸ್ತಕಗಳಾಗಿರಬೇಕು. ಪುಸ್ತಕದ ತಾಂತ್ರಿಕ ಪುಟದಲ್ಲಿ ಪ್ರಥಮ ಮುದ್ರಣ 2024 ಎಂದು ಮುದ್ರಿತವಾಗಿರಬೇಕು.
2024ನೇ ಸಾಲಿನ ಚಿತ್ರಕಲೆಗೆ ಸಂಬಂಧಿಸಿದ ಪ್ರಕಟಿತ ಅತ್ಯುತ್ತಮ ಪುಸ್ತಕಕ್ಕೆ ಬಹುಮಾನದ ಮೊತ್ತ ರೂ. 25,000/- ಗಳನ್ನು ನೀಡಲಾಗುವುದು.
ಪುಸ್ತಕ ಬಹುಮಾನಕ್ಕೆ ಕಳುಹಿಸುವ ಪುಸ್ತಕವು ಪುನರ್ ಮುದ್ರಣವಾಗಿರಬಾರದು, ಮೊದಲ ಆವೃತ್ತಿಯಲ್ಲಿ ಪ್ರಕಟಗೊಂಡಿರಬೇಕು. ಪುಸ್ತಕ ಬಹುಮಾನಕ್ಕೆ ಕಳುಹಿಸುವ ಪುಸ್ತಕಗಳು ಯಾವುದೇ ತರಗತಿಗಳಿಗೆ ಹಾಗೂ ವಿಶ್ವವಿದ್ಯಾಲಯದ ಪಠ್ಯಪುಸ್ತಕವಾಗಿರಬಾರದು.
ಪುಸ್ತಕವು ಲೇಖಕರ ಸ್ವಂತ ರಚನೆಯಾಗಿರಬೇಕು. ಸಂಪಾದಿತ ಕೃತಿಯಾಗಿರಬಾರದು. ಹಾಗೂ ಪುಸ್ತಕವನ್ನು 2025ನೇ ಆಗಸ್ಟ್ 30 ರ ಒಳಗಾಗಿ ಅಕಾಡೆಮಿಗೆ ತಲುಪಿಸಬೇಕು.
ಪುಸ್ತಕ ಬಹುಮಾನಕ್ಕೆ ಆಯ್ಕೆಯಾದ ಪುಸ್ತಕದ ಲೇಖಕರಿಗೆ ಈ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಪರಿಗಣಿಸಲು ಕನಿಷ್ಠ 03 ಜನ ಲೇಖಕರು ಸ್ಪರ್ಧೆಯಲ್ಲಿ ಭಾಗವಹಿಸಬೇಕು.
ಒಂದೇ ಪ್ರಕಾರದಲ್ಲಿ ಎರಡು ಬಾರಿ ಪುಸ್ತಕ ಬಹುಮಾನ ಪಡೆದವರ ಪುಸ್ತಕಗಳನ್ನು ಅದೇ ಪ್ರಕಾರದಲ್ಲಿ ಮತ್ತೆ ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.
ವಿವಿಧ ಸರ್ಕಾರಿ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಪುಸ್ತಕ ಪ್ರಾಧಿಕಾರ. ಇತರೆ ಎಲ್ಲಾ ಅಕಾಡೆಮಿಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇನ್ನೂ ಮುಂತಾದ ಅನುದಾನ ಸಂಸ್ಥೆಗಳಿಂದ ಅನುದಾನ ಪಡೆದು ತಾವೇ ಪ್ರಕಟಿಸಿದ ಅಥವಾ ಅಂತಹ ಸಂಸ್ಥೆಗಳಿಂದ ಬರೆಸಿ ಪ್ರಕಟಿಸಿದ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ.
ಲಲಿತಕಲೆಗೆ ಸಂಬಂಧಪಟ್ಟ ಸಾಂಪ್ರದಾಯಿಕ, ಸಮಕಾಲೀನ, ಚಿತ್ರ. ಭಿತ್ತಿ ಚಿತ್ರಕಲೆ, ಗ್ರಾಫಿಕ್ಸ್ ಯಾವುದೇ ಪ್ರಕಾರದ ಲಲಿತಕಲೆಗೆ ಸಂಬಂಧಪಟ್ಟದ್ದಾಗಿರಬೇಕು. ಶೈಕ್ಷಣಿಕ ಅಧ್ಯಯನಕ್ಕಾಗಿ ಪಿ.ಹೆಚ್.ಡಿ. ಡಿ.ಲಿಟ್, ಪ್ರಬಂಧ ಅಥವಾ ಅಧ್ಯಯನಕ್ಕಾಗಿ ಮಾಡಿದಂತಹ ಪುಸ್ತಕಗಳನ್ನು ಪರಿಗಣಿಸಲಾಗುವುದಿಲ್ಲ.
ಕೃತಿ, ಪುಸ್ತಕವು ಕನಿಷ್ಠ 100 ಪುಟಗಳಿಗೂ ಹೆಚ್ಚಿನ ಪುಟಗಳನ್ನು ಹೊಂದಿರತಕ್ಕದ್ದು. ಒಬ್ಬ ಲೇಖಕರು ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿ ಬಹುಮಾನ ಪಡೆದ ನಂತರ ಆ ಲೇಖಕರು ಮತ್ತೆ 2 ವರ್ಷಗಳವರೆಗೆ ಅಕಾಡೆಮಿಯಿಂದ ಬಹುಮಾನ ಪಡೆಯುವಂತಿಲ್ಲ.
ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವ ಲೇಖಕರು ತಾವು ಕಳುಹಿಸುವ ಪುಸ್ತಕದ 4 ಪ್ರತಿಗಳನ್ನು ಉಚಿತವಾಗಿ ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಕಡ್ಡಾಯವಾಗಿ ನೀಡಬೇಕು. ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕನ್ನಡ ಭಾμÉಯ ಪುಸ್ತಕಗಳನ್ನು ಮಾತ್ರ ಪರಿಗಣಿಸಲಾಗುವುದು. ತೀರ್ಪುಗಾರರು ಆಯ್ಕೆ ಮಾಡಿದ ಒಂದು ಪುಸ್ತಕಕ್ಕೆ ಬಹುಮಾನ ನೀಡಲಾಗುವುದು.
ಅಕಾಡೆಮಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಸ್ವೀಕೃತವಾದ ಪುಸ್ತಕಗಳನ್ನು 03 ಮಂದಿ ವಿಷಯ ತಜ್ಞರಿಗೆ ಕಳುಹಿಸಿಕೊಟ್ಟು, ಅವರು ಶಿಫಾರಸ್ಸು ಮಾಡಿದ ಪುಸ್ತಕಗಳನ್ನು ಅಕಾಡೆಮಿಯ ಸಭೆಯಲ್ಲಿ ಮಂಡಿಸಿ. ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಕಾಡೆಮಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.
ಪುಸ್ತಕ ಬಹುಮಾನಕ್ಕೆ ಕಳುಹಿಸುವ ಪುಸ್ತಕಗಳು 2025ನೇ ಆಗಸ್ಟ್ 30 ರ ಒಳಗಾಗಿ (ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ) ಖುದ್ದಾಗಿ ಅಥವಾ ಅಂಚೆ ಮೂಲಕ ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಸಲ್ಲಿಸಬಹುದಾಗಿದೆ.
ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-580 002 ಇವರಿಗೆ ಕಳುಹಿಸಿ ಕೊಡಬೇಕು. ಹಾಗೂ ಪುಸ್ತಕದ ಮೇಲೆ ಮತ್ತು ಪುಸ್ತಕದ ಶೀರ್ಷಿಕೆ ಪುಟದಲ್ಲಿ ಯಾವ ಚಿತ್ರಕಲಾ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ನಮೂದಿಸಿರಬೇಕು ಎಂದು ಲಲಿತ ಕಲೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ