LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

6.90 ಕೋಟಿ ರೂ. ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 02 (ಕರ್ನಾಟಕ ವಾರ್ತೆ):  ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 6.90  ಕೋಟಿ ಅಂದಾಜು ಮೌಲ್ಯದ ಒಟ್ಟು ಎಕರೆ 3 ಎಕರೆ 0.05  ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.


ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ  ಒತ್ತುವರಿಯಾಗಿದ್ದ ಸರ್ಕಾರಿ ತೋಪು, ಖರಾಬು ಕಲ್ಲುಬೆಟ್ಟ, ಸರ್ಕಾರಿ ಕೆರೆ, ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.


ಆನೇಕಲ್‍ ತಾಲ್ಲೂಕಿನ  ಕಸಬಾ  ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ  ಸ.ನಂ. 11 ರ ಸರ್ಕಾರಿ ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.23 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ  0.25 ಲಕ್ಷಗಳಾಗಿರುತ್ತದೆ.


ಬೆಂಗಳೂರು ಉತ್ತರ ತಾಲ್ಲೂಕಿನ  ದಾಸನಪುರ ಹೋಬಳಿಯ ಗೊಲ್ಲರಪಾಳ್ಯ ಗ್ರಾಮದ ಸ.ನಂ 28 ರ  ಖರಾಬು ಕಲ್ಲುಬೆಟ್ಟ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ  0.50 ಲಕ್ಷಗಳಾಗಿರುತ್ತದೆ.


ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಕಾಕೋಳು ಗ್ರಾಮದ ಸ.ನಂ 44ರ ಸರ್ಕಾರಿ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2 ಎಕರೆ 0.02 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ  6.15  ಕೋಟಿಗಳಾಗಿರುತ್ತದೆ.


ಇದೇ ಸಂದರ್ಭದಲ್ಲಿ  ವಿವಿಧ ತಾಲ್ಲೂಕಿನ ತಹಶೀಲ್ದಾರ್  ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ