LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಕಾಡು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸ್ವಚ್ಛತಾ ಅಭಿಯಾನ




ಬೆಂಗಳೂರು : ಹಿಂದೂ ಜನಜಾಗೃತಿ ಸಮಿತಿಯು ಕಳೆದ 23 ವರ್ಷಗಳಿಂದ ಸಮಾಜದಲ್ಲಿನ ಹಿಂದೂಗಳಿಗೆ ಧರ್ಮಜಾಗೃತಿ ಮತ್ತು ಧರ್ಮಶಿಕ್ಷಣವನ್ನು ಉಚಿತವಾಗಿ ನೀಡುತ್ತಾ ಬಂದಿದೆ. ಹಾಗೆಯೇ ಅದರ ಒಂದು ಭಾಗವಾಗಿ ಬೆಂಗಳೂರಿನ ವಡೆಯರಹಳ್ಳಿಯಲ್ಲಿ ಧರ್ಮಶಿಕ್ಷಣ ವರ್ಗವನ್ನು ಪ್ರಾರಂಭಿಸಿ ಅಲ್ಲಿಯ ಉದ್ಭವ ಶ್ರೀ ಕಾಡು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ಥಳೀಯ ಧರ್ಮಪ್ರೇಮಿಗಳಿಗೆ ದೇವಸ್ಥಾನದ ಮಹತ್ವ, ದೇವಸ್ಥಾನದ ಪಾವಿತ್ರ್ಯವನ್ನು ಉಳಿಸುವಲ್ಲಿ ನಮ್ಮೆಲ್ಲರ ಪಾತ್ರ ಹಾಗೂ ದೇವಸ್ಥಾನಕ್ಕೆ ಹೋಗುವಾಗ ನಾವೆಲ್ಲರೂ ಯಾವ ಭಾವವನ್ನು ಇಟ್ಟುಕೊಂಡು ಹೋಗಬೇಕು, ಹಾಗೆಯೇ ದೇವಸ್ಥಾನದ ದರ್ಶನವನ್ನು ಯೋಗ್ಯ ರೀತಿಯಲ್ಲಿ ಹೇಗೆ ಪಡೆಯಬೇಕು, ಈ ಎಲ್ಲಾ ವಿಷಯದ ಕುರಿತು ಮಾಹಿತಿ ಮತ್ತು ಸಾಮೂಹಿಕವಾಗಿ ದೇವರ ನಾಮಜಪವನ್ನು ಮಾಡಿಸಲಾಯಿತು. ಮತ್ತು ಅಲ್ಲಿಯ ಜನರು ಮರದ ಬುಡ ಮತ್ತು ಬೀದಿಗಳಲ್ಲಿ ಇಟ್ಟ ದೇವರ ಫೋಟೋಗಳನ್ನು ಸ್ವಚ್ಛ ಮಾಡಿ ಶಾಸ್ತ್ರೀಯ ಪದ್ಧತಿಯಲ್ಲಿ ಅಗ್ನಿಗೆ ಸಮರ್ಪಿಸಲಾಯಿತು.


ಈ ಸಮಯದಲ್ಲಿ ಸೇವಾ ಕನ್ನಡಿಗರು ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ. ಲಕ್ಷ್ಮಣ್,ಶ್ರೀ. ಶಶಿ ಕುಮಾರ್, ಶ್ರೀ. ಸೋಮಶೇಖರ್ ಚಿಕ್ ಮಠ್, ಶ್ರೀ. ನಂದೀಶ್, ರಾಯಲ್ ಟೌನ್ ಶಿಪ್ ನ ಶ್ರೀ. ದೇವರಾಜ್ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಸೌ ಭವ್ಯ ಗೌಡ, ಶ್ರೀ ನೀಲೇಶ್ವರ ಮುಂತಾದ ಕಾರ್ಯಕರ್ತರು ಸೇರಿ 50ಕ್ಕಿಂತ ಅಧಿಕ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.


ಶ್ರೀ. ಮೋಹನ್ ಗೌಡ, ರಾಜ್ಯ ವಕ್ತಾರರು,

ಹಿಂದೂ ಜನಜಾಗೃತಿ ಸಮಿತಿ ಕರ್ನಾಟಕ

ಸಂಪರ್ಕ : 7204082609






Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ