LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಅಭಿನಯ ಸರಸ್ವತಿ ಸರೋಜಾದೇವಿ ಅಸ್ತಂಗತ…!

ಬೆ0ಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತಿಯಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ಅವರು ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಬಾರದ ಲೋಕಕ್ಕೆ ತೆರಳಿದ್ದಾರೆ.
ಜನವರಿ 7, 1938 ರಲ್ಲಿ ಜನಿಸಿದ ಬಿ. ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಲ್ಲೇಶ್ವರದ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು ಎಂದು ತಿಳಿಬಂದಿದ್ದು, ಮೃತದೇಹವನ್ನು ಆಸ್ಪತ್ರೆಯ ಸಮೀಪದ ನಿವಾಸದಲ್ಲಿ ಇರಿಸಲಾಗಿದ್ದು ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ.

ಈಗಾಗಲೇ ಹಲವಾರು ಗಣ್ಯರು ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಬೆಳಿಗ್ಗೆ ಹಿರಿಯ ನಟರುಗಳಾದ ಉಪೇಂದ್ರ ಹಾಗೂ ಜಗ್ಗೇಶ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಎನ್ನಲಾಗಿದೆ.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.
ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

ಕನ್ನಡದ ಮೇರು ನಟ ಡಾ. ರಾಜ್‌ಕುಮಾರ್ ಅವರೊಂದಿಗೆ ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್‌ಮಾಸ್ಟರ್, ಪಂಚರತ್ನ, ಲಕ್ಷಿಸರಸ್ವತಿ, ಚಿಂತಾಮಣಿ, ಭೂಕೈಲಾಸ, ಅಣ್ಣತಂಗಿ, ಜಗಜ್ಯೋತಿ ಬಸವೇಶ್ವರ, ದೇವಸುಂದರಿ, ವಿಜಯನಗರದ ವೀರಪುತ್ರ, ಮಲ್ಲಮ್ಮನ ಪವಾಡ, ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ, ಪೂರ್ಣಿಮಾ, ಗೃಹಿಣಿ, ಪಾಪಪುಣ್ಯ, ಸಹಧರ್ಮಿಣಿ, ಶ್ರೀನಿವಾಸಕಲ್ಯಾಣ, ಚಾಮುಂಡೇಶ್ವರಿ ಮಹಿಮೆ, ಚಿರಂಜೀವಿ, ಶನಿಪ್ರಭಾವ ಇತ್ಯಾದಿ ಹಲವು ಚಿತ್ರಗಳಲ್ಲಿ ನಟಿಸಿರುವ ಹೆಮ್ಮೆ ಬಿ.ಸರೋಜಾ ದೇವಿ ಅವರದು...
ಅಂತೆಯೇ, ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿರುವರು. ಹಿಂದಿಯಲ್ಲಿ ಕೂಡಾ ಬಿ. ಸರೋಜಾದೇವಿ ಅವರು ನಟಸಿದ್ದು, ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್, ಮತ್ತು ಸುನೀಲ್ ದತ್ ಅವರೊಂದಿಗೆ ನಟಿಸಿರುವರು.

 

 
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ