LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

RSS ಚಟುವಟಿಕೆಗಳನ್ನು ನಿಷೇಧಿಸುವ ಯತ್ನ ಖಂಡನೀಯ – ಹಿಂದೂ ಜನಜಾಗೃತಿ ಸಮಿತಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳನ್ನು ನಿಷೇಧಿಸುವ ಯತ್ನ ಖಂಡನೀಯ – ಹಿಂದೂ ಜನಜಾಗೃತಿ ಸಮಿತಿ


ಹಿಂದೂ ಜನಜಾಗೃತಿ ಸಮಿತಿ (Hindu Jana Jagruthi Samithi) ಯು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಪ್ರಿಯಾಂಕ ಖರ್ಗೆ (Priyanka Kharge) ಯವರು ಮಾನ್ಯ ಮುಖ್ಯಮಂತ್ರಿಯವರಿಗೆ ಕಳುಹಿಸಿರುವ ಪತ್ರವನ್ನು ತೀವ್ರವಾಗಿ ಖಂಡಿಸುತ್ತದೆ. RSS ಸಂಘದ ಚಟುವಟಿಕೆಗಳನ್ನು ಸರ್ಕಾರಿ ಶಾಲೆ (Government Schools) ಗಳು, ಅನುದಾನಿತ ಶಾಲೆಗಳು, ಮೈದಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ನಿಷೇಧಿಸಬೇಕೆಂದು ಹೇಳಿರುವುದು ಸಂಪೂರ್ಣ ಖಂಡನೀಯವಾಗಿದೆ.


ಪ್ರತಿಷ್ಠಿತ ಸಂಸ್ಥೆಯಾಗಿರುವ RSS ದೇಶಾದ್ಯಂತ ವಿವಿಧ ಸ್ವಯಂಸೇವಕರ ಮೂಲಕ ಪ್ರಕೃತಿ ವಿಕೋಪ ಮತ್ತು ದುರಂತಗಳ ಸಂದರ್ಭದಲ್ಲಿ ಪ್ರಥಮವಾಗಿ ಸಹಾಯ ಕಾರ್ಯವನ್ನು ಮಾಡುತ್ತದೆ. ಇದನ್ನು ಪರಿಗಣಿಸಿ, 1963 ರಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಆಗಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು RSS ಗೆ ಗಣವೇಶಧಾರಿಗಳಾಗಿ ಭಾಗವಹಿಸಲು ಆಹ್ವಾನ ನೀಡಿದ್ದರು. ಹಾಗೆಯೇ, 2024 ರಲ್ಲಿ ಕೇಂದ್ರ ಸರ್ಕಾರವು RSS ಅನ್ನು ಸಾಮಾಜಿಕ ಸಂಘಟನೆ ಎಂದು ಪರಿಗಣಿಸಿ, ಕಾಂಗ್ರೆಸ್ ಪಕ್ಷದ ಆಡಳಿತವು ಹಿಂದೆ ಹಾಕಿದ್ದ ನಿಷೇಧವನ್ನು ತೆಗೆದು, ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸಬಹುದೆಂದು ಆದೇಶ ಹೊರಡಿಸಿದೆ. ಇಂತಹ ರಾಷ್ಟ್ರ ಪ್ರೇಮವನ್ನು ಬೆಳಸುವ ಸಂಘಟನೆಯ ಚಟುವಟಿಕೆಗಳನ್ನು ನಿಷೇಧ ಮಾಡುವುದು ಖಂಡನೀಯ


ವಾಸ್ತವದಲ್ಲಿ, ದೇಶದಲ್ಲಿ ವಿಭಜನೆ ಮತ್ತು ದ್ವೇಷ ಬಿತ್ತುವ ಕಾರ್ಯವನ್ನು ಕಾಂಗ್ರೆಸ್ ಪಕ್ಷವೇ ಮಾಡುತ್ತಿದೆ. ಕರ್ನಾಟಕದಲ್ಲಿ ಜಾತಿ ಸಮೀಕ್ಷೆಗಳನ್ನು ನಡೆಸಿ ಸಮಾಜವನ್ನು ವಿಭಜಿಸುವುದು, ಅಂತಾರಾಷ್ಟ್ರೀಯ ಭಯೋತ್ಪಾದಕ ಜಾಕೀರ್ ನಾಯ್ಕ್ ಸೇರಿದಂತೆ PFI, SDPI ಮುಂತಾದ ವಿಭಜಕ ಶಕ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಪ್ರಕ್ರಿಯೆಯಾಗಿದೆ. ಈ ಹಿನ್ನೆಲೆಯಲ್ಲಿ, ಸಂಘದ ಚಟುವಟಿಕೆಯನ್ನು ನಿಷೇಧಿಸುವ ಯತ್ನವು ಹಿಂದೂ ಧರ್ಮವನ್ನು ನಿಷೇಧಿಸುವ ಷಡ್ಯಂತ್ರದ ಭಾಗವಾಗಿದೆ.

ಹಿಂದೂ ಜನಜಾಗೃತಿ ಸಮಿತಿ ಈ ನಿಷೇಧದ ಯತ್ನವನ್ನು ತೀವ್ರವಾಗಿ ಖಂಡಿಸುತ್ತದೆ.

ಶ್ರೀ ಮೋಹನ ಗೌಡ

ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ



Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ