LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಹಿನಶೆಟ್ಟಿ ಕೇಂದ್ರ ಸಂಘದ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಬಿ.ಲಿಂಗೇಶ್ವರ್ ನಾಮಪತ್ರ

 

ಕುರುಹಿನಶೆಟ್ಟಿ ಸಮುದಾಯ ಸಂಘಟನೆ, ನೂತನ ಕಟ್ಟಡ ನಿರ್ಮಾಣ, ಸಮುದಾಯವನ್ನು ಮುಖ್ಯವಾಹಿನಿಗೆ ತರಲು ನನ್ನ ಹೋರಾಟ-ಬಿ.ಲಿಂಗೇಶ್ವರ್

ವಿ.ವಿ.ಪುರಂ: ಕುರುಹಿನಶೆಟ್ಟಿ ಕೇಂದ್ರ ಸಂಘ(ರಿ)2025ನೇ ಚುನಾವಣೆಯಲ್ಲಿ ಅಧ್ಯಕ್ಷೀಯ ಅಭ್ಯರ್ಥಿ ಶ್ರೀ ಬಿ.ಲಿಂಗೇಶ್ವರ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ.

ಅಧ್ಯಕ್ಷೀಯ ಅಭ್ಯರ್ಥಿಯಾದ ಬಿ.ಲಿಂಗೇಶ್ವರರವರು ಚನಾವಣೆಯಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದರು, ಸಮಾಜದ ಮುಖಂಡರಾದ ಜಿ.ಸೋಮಣ್ಣರವರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀಮತಿ ರೂಪಲಿಂಗೇಶ್ವರ್ ಮತ್ತು ರಾಜ್ಯಾದ್ಯಂತ ಕುರುಹಿನಶೆಟ್ಟಿ ಸಮುದಾಯದವರು, ಕಾರ್ಯಕರ್ತರು, ಅಭಿಮಾನಿಗಳು ಶ್ರೀ ಬಿ.ಲಿಂಗೇಶ್ವರರವರ ಅಭಿಮಾನಿಗಳು, ಸ್ನೇಹಿತರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷೀಯ ಅಭ್ಯರ್ಥಿ ಬಿ.ಲಿಂಗೇಶ್ವರ್ ರವರು ಮಾತನಾಡಿ ರಾಜ್ಯದಲ್ಲಿ ಕುರುಹಿನಶೆಟ್ಟಿ ಸಮಾಜದವರು 15ಲಕ್ಷಕ್ಕೂ ಹೆಚ್ಚು ಜನರು ಇದ್ದಾರೆ ಹಂಚಿಹೋಗಿರುವ ನಮ್ಮ ಸಮಾಜವನ್ನು ಒಗ್ಗೂಡಿಸುವ ಸಂಘಟನೆ ಮಾಡಲಾಗುತ್ತದೆ.



ಪಾರದರ್ಶಕ ಆಡಳಿತ ಮತ್ತು ಸಮಾಜದ ಏಳಿಗೆಗಾಗಿ ಮತ್ತು ನೂತನ ಕಟ್ಟಡ ನಿರ್ಮಾಣ ಮಾಡಲು ಕಾರ್ಯಯೋಜನೆ ರೂಪಿಸಲಾಗುವುದು.

ನೇಕಾರ ಕುಲಕಸಬು ಆಗಿದೆ, ನೇಕಾರ ಉದ್ಯಮ ನಶಿಸಿ ಹೋಗುತ್ತಿದೆ, ನೇಕಾರಿಕೆಗೆ ಪ್ರೋತ್ಸಹ, ಸಹಕಾರ ನೀಡಬೇಕು ಈ ಉದ್ಯಮದಲ್ಲಿ ನಮ್ಮ ಸಮಾಜ ಯುವಕರು ಮುಂದೆ ಬರಬೇಕು ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೊತೆಯಲ್ಲಿ ಸಮನ್ವಯ ಸಾಧಿಸಿ ಕುರುಹಿನ ಶೆಟ್ಟಿ ಸಮುದಾಯ ಅಭಿವೃದ್ದಿಗೆ ಶ್ರಮವಹಿಸಲಾಗುವುದು.

ಶಿಕ್ಷಣ ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿ ಕುರುಹಿನ ಶೆಟ್ಟಿ ಸಮುದಾಯಕ್ಕೆ ಹೆಚ್ಚಿನ ಅವಕಾಶಕ್ಕೆ ಕೊಡಿಸಲು ಹೋರಾಟ ಮಾಡಲಾಗುವುದು.

ಹೋರಾಟ ನಿತ್ಯ ನಿರಂತರ ಕುರುಹಿನಶೆಟ್ಟಿ ಸಮಾಜ ಮುಖ್ಯವಾಹಿನಿಗೆ ಬರಬೇಕು ಎಂಬ ಉದ್ದೇಶ ನನ್ನದು.

ರಾಜ್ಯಾದ್ಯಂತ ನಮ್ಮ ತಂಡಕ್ಕೆ ಉತ್ತಮ ಬೆಂಬಲವಿದೆ ಮತ್ತು ಈ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಹೇಳಿದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ