ಸಮಸ್ಯೆಗಳಿರುವುದು ನಿಜ ಎಂದ ಬಿ.ವೈ.ವಿಜಯೇಂದ್ರ
ಬೆಂಗಳೂರು: ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುವುದು ನಿಜ, ಅದನ್ನು ಹಿರಿಯರೂ ನಮ್ಮ ಮಾರ್ಗದರ್ಶಕರಾಗಿರುವ ಪ್ರಲ್ಹಾದ್ ಜೋಷಿಯವರು ಬಗೆಹರಿಸಲಿದ್ದಾರೆ ಎಂದು ಬಿ ವೈ ವಿಜಯೇಂದ್ರ ಹೇಳಿದರು, ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಕ್ಷದ ಅಂತರಿಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದು ಶೀಘ್ರದಲ್ಲೇ ಎಲ್ಲವೂ ಸರಿಹೋಗಲಿದೆ ಎಂದರು,
ನಾನೂ ಕೂಡಾ ಹಿಂದಿನ ಸಭೆಯಲ್ಲಿ ಅವರಿಗೆ ಸಣ್ಣಪುಟ್ಟ ಗೊಂದಲಗಳನ್ನು ಬಗೆಹರಿಸಲು ಮನವಿ ಮಾಡಿದ್ದೆ, ಜೆಲ್ಲೆಗಳಲ್ಲಿನ ಸಮಸ್ಯೆಗಳ ಬಗ್ಗೆಯೂ ಸಹ ನಾವು ಚರ್ಚಿಸಲಿದ್ದೇವೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು,