LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಳಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

 

ಬೆಂಗಳೂರು: ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ವಿಷಯದಲ್ಲಿ ವಿಳಂಬ ನೀತಿ ಅನುಸರಿಸಿ ದಲಿತ ಸಮುದಾಯಗಳನ್ನು ವಂಚಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.
ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೀದಿ ಬೀದಿಗಳಲ್ಲಿ ಹೋರಾಟ ನಡೆಯುತ್ತಿದೆ. ಬಿಜೆಪಿ ಸರಕಾರವು ಈಗಾಗಲೇ 4 ಭಾಗಗಳಾಗಿ (ಎ, ಬಿ, ಸಿ, ಡಿ) ವಿಂಗಡಿಸಿ ಎ ಗುಂಪಿಗೆ ಶೇ 6, ಬಿ- ಶೇ5.5, ಸಿ- 4.5 ಮತ್ತು ಡಿ ಗುಂಪಿಗೆ ಶೇ 1 ರಷ್ಟು ಮೀಸಲಾತಿ ಕೊಟ್ಟಿತ್ತು ಎಂದು ವಿವರಿಸಿದರು.
ಇದನ್ನು ಕಾಂಗ್ರೆಸ್ ಸರಕಾರ ಒಪ್ಪದೇ ಕೋರ್ಟಿನ ಆದೇಶ ಬಂದು ಒಂದು ವರ್ಷವಾದರೂ ಇದುವರೆಗೂ ಮೀನಾಮೇಷ ಎಣಿಸುತ್ತಿದೆ. ಇದರಿಂದ ಬೀದಿರಂಪ ಆಗುವ ಸಂದರ್ಭ ಹೆಚ್ಚಾಗಿದೆ. ಸೌಮ್ಯವಾಗಿ ಇರುತ್ತಿದ್ದ ಪರಿಶಿಷ್ಟ ಜಾತಿಗಳು ಆಕ್ರೋಶದಿಂದ ಬೀದಿಗೆ ಬಂದು ಹೋರಾಟ ಮಾಡುವ ಪರಿಸ್ಥಿತಿಯನ್ನು ಕಾಂಗ್ರೆಸ್ ಸರಕಾರ ಇವತ್ತು ಹುಟ್ಟು ಹಾಕಿದೆ ಎಂದು ಆಕ್ಷೇಪಿಸಿದರು.
ನಾಗಮೋಹನ್‍ದಾಸ್ ಆಯೋಗ ರಚಿಸಿ 5 ಗುಂಪು ಮಾಡಿದ್ದಾರೆ. ಕೆಲವು ಗುಂಪಿಗೆ ಹೆಚ್ಚಿನ ಆದ್ಯತೆ ಕೊಡುವ ರೀತಿ ಛಲವಾದಿ ಸಮುದಾಯದ ಕೆಲವು ಜಾತಿಗಳನ್ನು ಮಾದಿಗ ಸಮುದಾಯಕ್ಕೆ ಸೇರಿಸಿದ್ದಾರೆ. ಇನ್ನೂ ಕೆಲವು ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ- ಈ ಜಾತಿಗಳು ಜಾತಿಗಳಲ್ಲ; ಅದರ ಮೂಲ ಜಾತಿ ಛಲವಾದಿ ಸಮುದಾಯದ್ದು. ಈ ಜಾತಿ ಗಣತಿಯೇ ಸರಿ ಇಲ್ಲ ಎಂದು ಟೀಕಿಸಿದರು. ಶೇ 60-65 ಗಣತಿ ಆಗಿದೆ; ಮುಂದುವರೆದು ಮಾಡಲಾಗಿಲ್ಲ ಎಂದು ಎಲ್ಲ ಪತ್ರಿಕೆ, ಮಾಧ್ಯಮಗಳಲ್ಲಿ ಬಂದಿದೆ ಎಂದರು.
ಈ ರೀತಿ ಗಣತಿಯಿಂದ ಸರಿಯಾದ ದತ್ತಾಂಶ ಸಿಗುವುದಿಲ್ಲ; ಹಿಂದೆ ಮಾಧುಸ್ವಾಮಿ ಸಂಪುಟ ಉಪ ಸಮಿತಿ ಜಾರಿ ಮಾಡಿದ್ದನ್ನೇ ಮುಂದುವರೆಸಬಹುದಿತ್ತು. ತಪ್ಪು ಮಾಹಿತಿ ಕೊಟ್ಟು ಬಲಗೈ ಸಮುದಾಯಕ್ಕೆ ಸಂಪೂರ್ಣ ಅನ್ಯಾಯ ಮಾಡಲಾಗಿದೆ. ಎಡಗೈ ಸಮುದಾಯಕ್ಕೆ- ಸ್ಪøಶ್ಯ ಸಮುದಾಯಕ್ಕೆ ಎಷ್ಟು ಬೇಕಾದರೂ ಕೊಡಿ. ಆದರೆ, 5 ಗುಂಪು ಮಾಡಿದ್ದು ದೊಡ್ಡ ತಪ್ಪು ಎಂದು ಟೀಕಿಸಿದರು. ಪರಿಶಿಷ್ಟ ಜಾತಿಗಳ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಜಾತಿ, ಪರೆಯನ್, ಪರೆಯ ಮತ್ತು ಮುಂಡಾಳ, ಮೊಗೇರ- ಇವೆಲ್ಲವೂ ಬಲಗೈ ಸಮುದಾಯದಲ್ಲಿ ಬರಬೇಕಿತ್ತು ಎಂದು ವಿಶ್ಲೇಷಿಸಿದರು.
ಅವುಗಳನ್ನು ತಪ್ಪಿಸಿ ಬೇರೆ ಕಡೆ ಹಾಕಿ ಅವರಿಗೆ ಬರಬೇಕಾದ ಅಂಶಗಳನ್ನು ಮೋಸ ಮಾಡಲಾಗಿದೆ. ಇದು ಅವೈಜ್ಞಾನಿಕ ವರದಿ ಎಂದು ಆಕ್ಷೇಪಿಸಿದರು. ಒಂದು ವರ್ಷದಿಂದ ನೇಮಕಾತಿ, ಬಡ್ತಿ ಆಗುತ್ತಿಲ್ಲ. ಅನೇಕ ಯುವಕರು ಬೀದಿ ಬೀದಿ ಸುತ್ತುವಂತಾಗಿದೆ. ಬೇಗನೆ ಒಳಮೀಸಲಾತಿ ಕೊಡಬೇಕು ಮತ್ತು ಛಲವಾದಿ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿದರು. ಇದರಲ್ಲಿ ಮೋಸ, ವಂಚನೆ ಆದರೆ ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

 
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ