ಬೆಂಗಳೂರು : ಜಯನಗರದ (Jayanagara Mutt) ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ (Sri Subudheendra Thirtha) ಆದೇಶದಂತೆ ಗುರುವಾರ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು, ಅನ್ನದಾನ (annadana) ಸೇವೆಗಳು ಹಾಗೂ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಲತಾ ಕೆ. ಶಂಕರ್ ಅವರ ನಿರ್ದೇಶನದಲ್ಲಿ ಕಲಾಮಾಯೆ ನೃತ್ಯ ಶಾಲೆಯ ಸುಮಾರು 20 ಮಕ್ಕಳಿಂದ ಭರತನಾಟ್ಯ ಪ್ರದರ್ಶನ ಜರುಗಿದವು. ಈ ಎಲ್ಲಾ ಕಾರ್ಯಕ್ರಮಗಳೂ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ನಡೆದವು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.