LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಯನಗರ: ಗುರುರಾಯರ 354ನೇ ಆರಾಧನಾ ಮಹೋತ್ಸವಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ

ಬೆಂಗಳೂರು : 'ಕಲಿಯುಗ ಕಾಮಧೇನು ' ಶ್ರೀ ರಾಘವೇಂದ್ರ ಗುರುಸಾರ್ವಭೌಮರ 354ನೇ ಆರಾಧನಾ ಸಪ್ತರಾತ್ರೋತ್ಸವದ ಮಹೋತ್ಸವವನ್ನು ಅತ್ಯಂತ ಸಂಭ್ರಮ ವೈಭವದಿಂದ ಆಚರಿಸಲು ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಗ್ರಹದ ಮೇರೆಗೆ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಶ್ರೀಮಠದ ಸಿಬ್ಬಂದಿಗಳ ಸ್ವಯಂ ಸೇವಕರ ಮತ್ತು ಭಕ್ತರ ಸಹಕಾರದೊಂದಿಗೆ ನೆರವೇರಲಿದೆ.

ಇತ್ತೀಚೆಗೆ ಸ್ವಯಂ ಸೇವಕರ ಸಭೆಯಲ್ಲಿ ವಿಶೇಷ ಮಾಹಿತಿಗಳನ್ನು ಚರ್ಚಿಸಲಾಗಿ ಒಂದು ವಾರಗಳ ಕಾಲ ನಡೆಯುವ ಸಪ್ತರಾತ್ರೋತ್ಸವ "ಆರಾಧನಾ" ಮಹೋತ್ಸವಕ್ಕೆ ಸಹಸ್ರಾರು ಭಕ್ತರು ಸನ್ನಿಧಿಗೆ ಆಗಮಿಸುವುದರಿಂದ ಪೋಲಿಸ್ ಬಂದೋ ಬಸ್ತ್ ವ್ಯವಸ್ಥೆಗಾಗಿ ಕೋರಲಾಗಿದೆ ಹಾಗೂ ಭಕ್ತರಿಗಾಗಿ ಗುರು ರಾಯರ ದರ್ಶನ ಪಡೆಯಲು ಮತ್ತು ಪ್ರಸಾದವನ್ನು ಸ್ವೀಕರಿಸಲು ಅಚ್ಚುಕಟ್ಟಾದ (ಕ್ಯೂ ಸಿಸ್ಟಮ್ಸ್ )ಸಾಲಾಗಿ ಬರಲು ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಹಾಗೂ ಗುರುರಾಯರ ಸೇವೆಗಾಗಿ ಭಕ್ತರೊಬ್ಬರ ಸಹಕಾರದಿಂದ ಹೊರಬಾಗಿಲಿನ ಮುಂಭಾಗದ ದ್ವಾರದ ಬಲಭಾಗದಲ್ಲಿ ಎಲ್ ಇ ಡಿ ಬಿಗ್ ಸ್ಕ್ರೀನ್ ನಲ್ಲಿ ಗುರುರಾಯರ ದರ್ಶನ ಪಡೆಯಲು ಭಕ್ತರಿಗಾಗಿ ಅಳವಡಿಸಲಾಗುತ್ತಿದೆ ಎಂದು ಆರ್ ಕೆ ವಾದಿಂದ್ರಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಈ ಆರಾಧನಾ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ವಿವರಗಳು ಈ ರೀತಿ ಇವೆ :
ಧಾರ್ಮಿಕ ಕಾರ್ಯಕ್ರಮಗಳು : ಪೇಜಾವರ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರಿಂದ ಆಗಸ್ಟ್ 6 ರಿಂದ 8ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ "ಶ್ರೀಮದ್ರಾಮಾಯಣ" ಪ್ರವಚನ. ಆಗಸ್ಟ್ 8 ರಂದು ಸಂಜೆ 6:30ಕ್ಕೆ ಶ್ರೀಪಾದಂಗಳವರಿಂದ "ಆರಾಧನಾ" ಸಪ್ತರಾತ್ರೋತ್ಸವದ "ಉದ್ಘಾಟನೆ", ಗೋಪೂಜೆ ಶ್ರೀ ಲಕ್ಷ್ಮೀ ಪೂಜೆ, ಧನ ಧಾನ್ಯ ಪೂಜೆ ನೆರವೇರಲಿದೆ.
ಆಗಸ್ಟ್ 9 ರಂದು ಬೆಳಿಗ್ಗೆ 6ಕ್ಕೆ ಋಗ್ವೇದ, ಯಜುರ್ವೇದ ಹಾಗೂ ನೂತನ ಉಪಾಕರ್ಮ ನಂತರ ಹುಣ್ಣಿಮೆಯ ಪ್ರಯುಕ್ತ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು : (ಪ್ರತಿದಿನ ಸಂಜೆ 7-00ಕ್ಕೆ) ಆಗಸ್ಟ್ 9- ಶ್ರೀ ಜಯತೀರ್ಥ ತಾಸಗಾಂವ್ ಮತ್ತು ಸಂಗಡಿಗರಿಂದ "ದಾಸವಾಣಿ", ಆಗಸ್ಟ್ 10-ಕು|| ದಿವ್ಯಶ್ರೀ ರಂಗನಾಥನ್ ಮತ್ತು ಸಂಗಡಿಗರಿಂದ "ಸ್ಯಾಕ್ಸೋಫೋನ್ ವಾದನ", ಆಗಸ್ಟ್ 11-ಶ್ರೀಮತಿ ದೀಪಾ ಕಾಸರವಳ್ಳಿ ಮತ್ತು ಸಂಗಡಿಗರಿಂದ "ದಾಸ ತರಂಗಿಣಿ", ಆಗಸ್ಟ್ 12-ಮೈಸೂರಿನ ಶ್ರೀಮತಿ ರಮಾಮಣಿ ಗುರುಪ್ರಸಾದ್ ಮತ್ತು ಸಂಗಡಿಗರಿಂದ "ದಾಸಝೇಂಕಾರ", ಆಗಸ್ಟ್ 13-ಡಾ|| ರಾಯಚೂರು ಶೇಷಗಿರಿದಾಸ್ ಮತ್ತು ಸಂಗಡಿಗರಿಂದ "ದಾಸಲಹರಿ", ಆಗಸ್ಟ್ 14-ಪ್ರಭಾತ್ ಆರ್ಟ್ಸ್ ಇಂಟರ್ನ್ಯಾಷನಲ್ ನ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ". ವಿಶೇಷವಾಗಿ
ರಾಜಬೀದಿ ಉತ್ಸವ : ಆಗಸ್ಟ್ 12, ಬೆಳಗ್ಗೆ 8-00ಕ್ಕೆ ಜಯನಗರದ ರಾಜಬೀದಿಯಲ್ಲಿ ಶ್ರೀ ಗುರುರಾಜರ ಮಹಾರಥೋತ್ಸವವೂ ನೆರವೇರಲಿದೆ ಎಂದು ಶ್ರೀ ನಂದಕಿಶೋರ ಆಚಾರ್ಯರು ತಿಳಿಸಿದ್ದಾರೆ. ಈ ಆರಾಧನಾ ಸಂದರ್ಭದಲ್ಲಿ ಗುರುರಾಯರ ಸೇವೆಯಲ್ಲಿ ಭಾಗವಹಿಸುವಂತಹ ಭಕ್ತರು ಶ್ರೀಮಠದ ಆನ್ಲೈನ್ ಈ ವಾಟ್ಸಪ್ 9449133929 ನಂಬರ್ ಮುಖಾಂತರ ಸೇವೆ ಸಲ್ಲಿಸಿ ರಾಯರ ಶೇಷ ವಸ್ತ್ರ ಫಲ ಮಂತ್ರಾಕ್ಷತೆಯನ್ನು ಸ್ವೀಕರಿಸಿ ರಾಯರ ಪೂಜೆಯಲ್ಲಿ ಭಾಗವಹಿಸಿ ಗುರುರಾಯರ ಮಹಾರಥೋತ್ಸವ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾಗಬಹುದು,
ಹೆಚ್ಚಿನ ಮಾಹಿತಿಗಾಗಿ : 080-22443962, 080-29754444, 9945429129, 9449133929,8660349906

VK DIGITAL NEWS:

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ