LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲ್ತುಳಿತ ಘಟನೆ : ಪ್ರತ್ಯಕ್ಷ ಸಾಕ್ಷಿಗಳು ಹೇಳಿಕೆ ಸಲ್ಲಿಸಲು ಡಿ.ಸಿ. ಕರೆ

ಬೆಂಗಳೂರು ನಗರ ಜಿಲ್ಲೆ ಜೂನ್ 26 (ಕರ್ನಾಟಕ ವಾರ್ತೆ): ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ಆರ್.ಸಿ.ಬಿ ಕ್ರಿಕೆಟ್ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯ ಕುರಿತು ಸರ್ಕಾರದ ಆದೇಶದ ಮೇರೆಗೆ ವಿಚಾರಣಾಧಿಕಾರಿಗಳಾದ ಬೆಂಗಳೂರು ನಗರ ಜಿಲ್ಲಾದಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ.ಜಿ ಅವರು ಸಮಗ್ರವಾದ ವಿಚಾರಣೆಯನ್ನು ನಡೆಸುತ್ತಿರುತ್ತಾರೆ.


ಈ ಘಟನೆಗೆ ಸಂಬಂಧಿಸಿದ ಮಾಹಿತಿ ಅಥವಾ ಪ್ರತ್ಯಕ್ಷವಾಗಿ ನೋಡಿದ ಸಾರ್ವಜನಿಕರು/ ಮಾಧ್ಯಮದವರು ವಿಚಾರಣಾಧಿಕಾರಿಗಳ ಸಮಕ್ಷಮದಲ್ಲಿ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ.


ತಮ್ಮ ಹೇಳಿಕೆಯನ್ನು ದಾಖಲಿಸಲು ಇಚ್ಛಿಸುವವರು ಜೂನ್ 27, ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ, ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ,  ಕೆ.ಜಿ.ರಸ್ತೆ, ಬೆಂಗಳೂರು-09 ಇಲ್ಲಿ ತಮ್ಮ ಲಿಖಿತ ರೂಪದ ಪ್ರಮಾಣಿತ ಅಫಿಡವಿಟ್ ನ ಎರಡು ಪ್ರತಿಗಳೊಂದಿಗೆ ಖುದ್ದು ಹಾಜರಾಗಿ ಹೇಳಿಕೆಯನ್ನು ದಾಖಲಿಸಬಹುದಾಗಿದೆ ಎಂದು ವಿಚಾರಣಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ