LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ : ಹಳೆಯ ವಿದ್ಯಾರ್ಥಿ ನಾಗೇಶ್

ಶಿಡ್ಲಘಟ್ಟ : ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಹೆಚ್ಚು ವಿದ್ಯಾವಂತರಾಗಿರುತ್ತಾರೆ. ನಾವು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ನಮಗೆ ಅವರಿಗಿಂತ ಕಡಿಮೆ ವಿದ್ಯಾಭ್ಯಾಸ ಎಂದು ಯಾವತ್ತೂ ಹೋಲಿಕೆ ಮಾಡಿಕೊಳ್ಳಬಾರದು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳೆ ಅನೇಕ ಸರ್ಕಾರಿ ಹುದ್ದೆಗಳನ್ನು ಪಡೆದು ಉನ್ನತ ಸ್ಥಾನದಲ್ಲಿ ಇರುತ್ತಾರೆ ಎಂದು ಬೀರಪ್ಪನಹಳ್ಳಿಯ ಹಳೆಯ ವಿದ್ಯಾರ್ಥಿ ನಾಗೇಶ್ ಅವರು ಅಭಿಪ್ರಾಯಪಟ್ಟರು.

ತಾಲೂಕಿನ ವೈ ಹುಣಸೇನಹಳ್ಳಿ ಗೇಟ್ ಬಳಿ ಇರುವ ಕದಿರಿನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬೀರಪ್ಪನಹಳ್ಳಿಯ ಹಳೆಯ ವಿದ್ಯಾರ್ಥಿ ನಾಗೇಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಲೇಖನ ಸಾಮಗ್ರಿ ವಿತರಸಿ ಮಾತನಾಡಿದರು.



ಇಂದಿನ ಮಕ್ಕಳು ದೃಢಸಂಕಲ್ಪ ಮಾಡಿ ನಿಖರವಾದ ಗುರಿಯನ್ನು ಹೊಂದಿ ವಿದ್ಯೆಯನ್ನು ಕಲಿಯಲೇ ಬೇಕೆಂಬ ಛಲವನ್ನ ಹೊಂದಿದ್ದರೆ ನಾವು ಎಲ್ಲಿ ಓದಿದರೂ ನಮ್ಮ ಛಲವನ್ನ ಸಾಧಿಸುವತ್ತ ಗಮನ ಹರಿಸಬೇಕು. ಇವತ್ತು ನಾನು ಈ ಹಂತಕ್ಕೆ ಬೆಳೆ ಬೇಕಾದರೆ ನನ್ನ ಕುಟುಂಬ ತೀರ ಬಡತನದಲ್ಲಿತ್ತು ಅಂದು ನಾನು ಸುಮಾರು ಮೂರು ಕಿಲೋಮೀಟರ್ ದೂರ ನಡೆದುಕೊಂಡು ಶಾಲೆಗೆ ಬರುತ್ತಿದ್ದೆ ಮತ್ತು ಹೋಗುತ್ತಿದ್ದೆ. ನನ್ನ ಬಡತನವನ್ನು ಮೆಟ್ಟಿ ನಿಂತು ನನ್ನ ಗುರಿಯನ್ನು ತಲುಪಿದ್ದೇನೆ. ನಾನು ಒಂದನೇ ತರಗತಿಯಿಂದ ನಾಟಕೋತರ ಪದವಿಯವರೆಗೂ ಸರ್ಕಾರಿ ಶಾಲೆಯಲ್ಲಿ ಓದಿ ಬೆಳೆದು ಇಂದು ಸಾಫ್ಟ್ ವೇರ್ ಇಂಜಿನಿಯರಿಂಗ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ ನಾನು ಸುಮಾರು ದೇಶಗಳ ಜನರ ಸಂಪರ್ಕವನ್ನು ಪಡೆದು ಸಾಫ್ಟ್ ವೇರ್ ಇಂಜಿನಿಯರಿಂಗ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ ಅದೇ ರೀತಿ ಮುಂದಿನ ದಿನಗಳಲ್ಲಿ ನೀವು ಸಹ ನಿಮ್ಮ ಆಲೋಚನಾ ಶಕ್ತಿಯನ್ನು ಬಳಸಿಕೊಂಡು ನಿಮ್ಮ ಏಕಾಗ್ರತೆಯನ್ನ ಗ್ರಹಿಸಿ ಉನ್ನತ ಮಟ್ಟದ ಹುದ್ದೆಯನ್ನು ಅಲಂಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮುಖ್ಯಶಿಕ್ಷಕಿ ಹಂಸವೇಣಿ ಮಾತನಾಡಿ, ನಮ್ಮೂರಿನ ಶಾಲೆಯ ಮಕ್ಕಳ ಶೈಕ್ಷಣಿಕ ಜೀವನಕ್ಕೆ ಸಹಾಯ ಮಾಡುವ ಉದ್ದೇಶದಿಂದ ಹಳೇ ವಿದ್ಯಾರ್ಥಿ ನಾಗೇಶ್ ತನ್ನ ಹುಟ್ಟು ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪುಸ್ತಕ, ಇತರ ಓದಿನ ಪರಿಕರಗಳನ್ನು ನೀಡಿರುವುದು ನಿಜಕ್ಕೂ ಶ್ಲಾಘನೀಯ. ಮಕ್ಕಳು ಇದನ್ನು ಬಳಸಿಕೊಂಡು ಚೆನ್ನಾಗಿ ಓದಿ ಸಾಧನೆ ಮಾಡಬೇಕು. ನಂತರ, ತಾವೂ ಮುಂದೆ ಬಡ ಮಕ್ಕಳ ಓದಿಗೆ ಸಹಾಯ ಮಾಡಬೇಕೆಂದು ಕಿವಿಮಾತು ಹೇಳಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ನಾಗೇಶ್ ಹಾಗೂ ಅವರ ತಾಯಿ ರುಕ್ಮಿಣಿಯಮ್ಮ ಲೇಖನ ಸಾಮಗ್ರಿ ಹಾಗೂ ಸಿಹಿ ಹಂಚಿದರು.

ಈ ಸಂದರ್ಭದಲ್ಲಿ ನಾಗೇಶ್ ಅವರ ತಾಯಿ ರುಕ್ಮಿಣಿಯಮ್ಮ, ಶಿಕ್ಷಕಿಯರಾದ ಕುಸುಮ,ಮಾಲಾಶ್ರೀ,ಗಾಯತ್ರಿ ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಶಿಡ್ಲಘಟ್ಟ

VK NEWS DIGITAL : HEADLINES :

[embed]https://www.youtube.com/watch?v=sJMQomGNI4A[/embed]
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ