LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನಸ್ತಾಪ ಯಾಕೆ ಗೊತ್ತಾ – ಕ್ರೇಜಿಸ್ಟಾರ್ ಮನದಾಳ

ನಾದಬ್ರಹ್ಮ ಹಂಸಲೇಖ (Hamsalekha) ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾದ ಘೋಷಣೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಹಂಸಲೇಖ ಅವರ ಆಪ್ತ ಗೆಳೆಯರು, ನಿರ್ದೇಶಕರು ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಆಗಮಿಸಿ ಶುಭಾಶಯ ಕೋರಿದ್ದಾರೆ. ಜೊತೆಗೆ ಹಂಸಲೇಖ ಹಾಗೂ ಕ್ರೇಜಿಸ್ಟಾರ್ ನಡುವಿನ ಸ್ನೇಹ ಹಾಗೂ ಮನಸ್ತಾಪದ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ ನಟ ರವಿಚಂದ್ರನ್. ಹಂಸಲೇಖ ಹುಟ್ಟುಹಬ್ಬದ ವೇದಿಕೆ ಮೇಲೆ ಕ್ರೇಜಿಸ್ಟಾರ್ ಮಾತಾಡಿದ ಮಾತುಗಳು ಕನ್ನಡ ಸಿನಿಮಾ ಅಭಿಮಾನಿಗಳ ಹುಬ್ಬೇರಿಸುವಂತೆ ಮಾಡಿದೆ, ನಮ್ಮಿಬ್ಬರ ಸ್ನೇಹ ದೂರಾಗಿದ್ದಕ್ಕೆ ಕಾರಣವಿಲ್ಲ. ಯಾವತ್ತೂ ಜಗಳ ಮಾಡಿ ದೂರಾಗಲಿಲ್ಲ. ಹೇಗೆ ಸೇರಿದ್ದೇವೋ ಹಾಗೆ ದೂರಾದೆವು. ನಾನು ಪೆನ್ನು ಪೇಪರ್ ಹಿಡಿಬೇಕು ಅಂತಾ ಇತ್ತೋ ಏನೋ ಹೀಗಾಗಿ ನಾವು ದೂರವಾಗಿದ್ದಿರಬಹುದು. ಈಗ ನನ್ನ ಜಾಗಕ್ಕೆ ರಾಜು (ಹಂಸಲೇಖ) ಬಂದಿದ್ದಾರೆ. ನಾನು ಹೃದಯ ಆದ್ರೆ ನೀವು ನಮ್ಮ ಹಾರ್ಟ್ ಬೀಟ್” ಎಂದು ಹಂಸಲೇಖ ಬರ್ತ್ ಡೇ ದಿನ ಕ್ರೇಜಿಸ್ಟಾರ್ ಮನಬಿಚ್ಚಿ ಮಾತಾಡಿದ್ದಾರೆ. ಅದೆಷ್ಟೋ ವರ್ಷಗಳಿಂದ ತಮ್ಮ ಮನಸ್ಸಲ್ಲಿದ್ದ, ಮುಕ್ತವಾಗಿ ಹೇಳಬೇಕೆಂದುಕೊಂಡಿದ್ದ ಮನದಾಳದ ಇಂಗಿತವನ್ನ ತೋಡಿಕೊಂಡಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್ ಸ್ನೇಹ ಹಾಗೂ ಅವರು ಸಪೋರ್ಟ್ ಮಾಡಿದ ಬಗೆಯನ್ನ ಹಂಸಲೇಖ ಎಳೆಎಳೆಯಾಗಿ ವಿವರಿಸಿದರು. ಈಗಲೂ ಕ್ರೇಜಿಸ್ಟಾರ್ 10 ಕೆಜಿ ತೂಕ ಕಡಿಮೆ ಮಾಡಿ ನಿಂತರೆ, ಸ್ಪುರದೃಪಿ ನಟರು. ಅತೀ ಹೆಚ್ಚು ಲೇಡಿ ಅಭಿಮಾನಿಗಳು ಇರುವ ಇರುವ ಏಕೈಕ ನಟ ಅದು ಕ್ರೇಜಿಸ್ಟಾರ್ ಎಂದು ಗುಣಗಾನ ಮಾಡಿದರು. ಅಲ್ಲದೇ ಎಂಜಿ ರೋಡ್ ಕಡೆ ತಿರುಗಿಕೊಂಡಿದ್ದ ಪ್ರೇಕ್ಷಕರನ್ನು ಗಾಂಧಿನಗರಕ್ಕೆ ಕರೆದಕೊಂಡು ಬಂದವರು ರವಿಚಂದ್ರನ್. ನನ್ನ ಜೀವನದ ಫಸ್ಟ್ ಪಾಸಿಟಿವ್ ಪರ್ಸಾನಾಲಿಟಿ ರವಿಚಂದ್ರನ್ ಎಂದು ಕೊಂಡಾಡಿದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ