LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗದಿಂದ ಸದೃಢ ಆರೋಗ್ಯ ನಿರ್ಮಾಣ: ಡಾ. ಜಾವಿದ ಜಮಾದಾರ

ವಿಜಯಪುರ- ಮನುಷ್ಯನಿಗೆ ಮಾನಸಿಕ ನೆಮ್ಮದಿಯನ್ನು ನೀಡುವ ಅಪೂರ್ವ ಶಕ್ತಿ ಯೋಗಕ್ಕಿದೆ ಮಾನವ ಸಂಕುಲವನ್ನು ರಕ್ಷಿಸುವಲ್ಲಿ ಯೋಗ ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಯೋಗಾಭ್ಯಾಸವನ್ನು ರೂಢಿಸಿಕೊಳ್ಳುವುದರಿಂದ ಆರೋಗ್ಯ ರಕ್ಷಣೆ ಹಾಗೂ ರೋಗಗನ್ನು ನಿಯಂತ್ರಿಸಬಹುದು ಎಂದು ರಾಷ್ಟ ಯುವ ಪ್ರಶಸ್ತಿ ಪುರಸ್ಕೃತ ಡಾ. ಜಾವೀದ ಜಮಾದಾರ ಅಭಿಪ್ರಾಯಪಟ್ಟರು.

ನಗರದ ವಿಶ್ವವಿಖ್ಯಾತ ಗೋಲಗುಮ್ಮಜ ಆವರಣದಲ್ಲಿ ಕೇಂದ್ರ ಸಂಸ್ಕೃತಿ ಮಂತ್ರಾಲಯ, ಭಾರತೀಯ ಪುರಾತತ್ವ ಇಲಾಖೆ, ನವದೆಹಲಿ, ಹಾಗೂ ಭಾರತೀಯ ಪುರಾತತ್ವ ಸಂರಕ್ಷಣೆ ಧಾರವಾಡ ವಲಯ ಇವರ ಸಂಯುಕ್ತ ಆಶ್ರಯದಲ್ಲಿ 11ನೇ ಅಂತರರಾಷ್ಟಿಯ ಯೋಗ ದಿನಾಚರಣೆಯನ್ನು ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಸಂಘಟಿಸಲಾಗಿತ್ತು.

ಯೋಗವು ಇಂದು ಅನಿವಾರ್ಯವಾಗಿ ಒತ್ತಡದ ಬದುಕಿಗೆ ನೆಮ್ಮದಿ ಜೀವನ ನಡೆಸಲು ಯೋಗವು ಒಂದು ದಿವ್ಯ ರೀತಿಯ ಔಷಧ. ಯೋಗವನ್ನು ನಿತ್ಯವು ಮಾಡುವುದರಿಂದ ಆರೋಗ್ಯಕರ ಸದೃಢ ಮನಸ್ಸು ಸಂಪಾದಿಸಲು ಸಾಧ್ಯ. ಪಾಚೀಮಾತ್ಯ ರಾಷ್ಟçಗಳಲ್ಲಿ ಯೋಗ ಮತ್ತು ಸಂಸ್ಕೃತಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ನಮ್ಮ ದೇಶದಲ್ಲಿಯೂ ಯೋಗ ಇತ್ತೀಚಿನ ದಿನಗಳಲ್ಲಿ ವೇಗವಾಗಿ ಪ್ರವರ್ದಮಾನಕ್ಕೆ ಬರುತ್ತಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಸಂಸ್ಕೃತಿ ಮೌಲ್ಯ ಗಳಿಸಿಕೊಳ್ಳದೆ ಇದ್ದಲ್ಲಿ ವಿದ್ಯೆಗೆ ಯಾವುದೇ ಗೌರವ ಸಿಗುವದಿಲ್ಲ. ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಯೋಗ ಕಲಿಯುವದರಿಂದ ಉತ್ತಮ ಆರೋಗ್ಯ ಸಾಧ್ಯ ಕಲಿಕೆ ಜೊತೆಗೆ ವಿದ್ಯಾರ್ಥಿಗಳು ಪಠ್ಯೆತರ ಚಟುವಟಿಕೆಗಳ ಕಡೆಗೆ ಗಮನ ನೀಡಬೇಕೆಂದರು. ಸದೃಢ ವ್ಯಕ್ತಿ, ಸದೃಢ ಸಮಾಜ, ಸದೃಢ ರಾಷ್ಟç ಪರಿಕಲ್ಪನೆಯೊಂದಿಗೆ ಆರೋಗ್ಯವಂತ ಜೀವನಕ್ಕಾಗಿ ಯೋಗಾಭ್ಯಾಸವನ್ನು ದೈನಂದಿನ ಕಾರ್ಯವಾಗಬೇಕೆಂದರು.

ಕಾರ್ಯಕ್ರಮದಲ್ಲಿ ಭಾರತೀಯ ಪುರಾತತ್ವ ಸಂರಕ್ಷಣೆ ಸಹಾಯಕ ಅಧಿಕಾರಿ ಎಂ.ವಿ. ವಿಜಯಕುಮಾರ ಮಾತನಾಡಿ ರಾಷ್ಟದ 189 ಐತಿಹಾಸಿಕ ಪಾರಂಪರಿಕ ಸ್ಥಳಗಳಲ್ಲಿ ಹಾಗೂ ಧಾರವಾಡ ವಲಯದ ಬದಾಮಿ, ಪಟ್ಟದಕಲ್ಲು, ಐಹೊಳ್ಳೆ, ಗೋಲಗುಮ್ಮಜದಲ್ಲಿ ಅಂತರರಾಷ್ಟಿಯ 11ನೇ ಯೋಗ ದಿನಾಚರಣೆಯನ್ನು ಆಯೋಜನೆ ಮಾಡಲಾಗಿದೆ. ನಮ್ಮ ಪಾರಂಪರಿಕ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವ ಜೊತೆಗೆ ಯುವ ಸಮುದಾಯದಲ್ಲಿ ಯೋಗದ ಮಹತ್ವವನ್ನು ತಿಳಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸಮಾರಂಭದ ಅದ್ಯಕ್ಷತೆಯನ್ನು ವಹಿಸಿ ಉಪ ಅಧೀಕ್ಷಕ ಪುರಾತತ್ವ ಅಭಿಯಂತರರು ಭಾರತೀಯ ಪುರಾತತ್ವ ಸಂರಕ್ಷಣಾ ಧಾರವಾಡ ವಲಯ ಎನ್.ಬಿ.ಡಿ. ಕೆಂಪೇಗೌಡ ಮಾತನಾಡಿ ಯೋಗ, ಕ್ಷೇಮ ಮತ್ತು ಪರಿಸರ ಸಾಮರಸ್ಯವನ್ನು ಉತ್ತೇಜಿಸುವಲ್ಲಿ ಯೋಗದ ಪ್ರಮುಖ ಪಾತ್ರವನ್ನು ಎತ್ತಿ ತೋರಿಸುತ್ತದೆ. ಹಾಗೂ ದೈಹಿಕ, ಮಾನಸಿಕ ಮತ್ತು ಅಧ್ಯಾತ್ಮಿಕ ಆರೊಗ್ಯವನ್ನು ಹೆಚ್ಚಿಸಲು ಲಕ್ಷಾಂತರ ಜನರು ಯೋಗಾಭ್ಯಾಸದಲ್ಲಿ ಒಂದುಗೂಡಿಸಿ ಈ ಯೋಗವು ಹೆಚ್ಚಿನ ನಮ್ಯತೆ, ಶಕ್ತಿ ಸಮತೋಲನ ಮತ್ತು ಒತ್ತಡ ಸೇರಿದಂತೆ ವ್ಯಾಪಕ ಶ್ರೇಣಿಯ ದೈಹಿಕ ಮತ್ತು ಮಾನಸಿಕ ಪ್ರಯೋಜನಗಳನ್ನು ನೀಡುತ್ತದೆ. ಅದಕ್ಕಾಗಿ ನಾವು ಯೋಗಕ್ಕೆ ಶರಣಾಗಬೇಕು. ಇಂದಿನ ವೇಗದ ವ್ಯವಸ್ಥೆಯಲ್ಲಿ ಮನುಷ್ಯನ ದೇಹ ಮತ್ತು ಮನಸ್ಸಿನ ಮೇಲೆ ಸಾಕಷ್ಟು ಒತ್ತಡ ಬೀಳುತ್ತಿದೆ. ಅಂತಹ ಒತ್ತಡದಿಂದ ಮುಕ್ತರಾಗಲು ಯೋಗ ಒಂದೇ ಮಾರ್ಗ ಎಂದರು.

ಯೋಗ ಗುರುಗಳಾದ ಸುರೇಶ ಬಿ. ಆನಂದಿ ಅವರು ಯೋಗದ ವಿವಿಧ ಆಯಾಮಗಳ ತರಬೇತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಇವರ ಸಂಭಾಷಣೆಯ ನೇರ ಪ್ರಸಾರವನ್ನು ಪರದೆಯ ಮೇಲೆ ಬಿತ್ತರಿಸಲಾಗಿತ್ತು. ಕುಮಾರಿ ಶಿಫಾ ಯೋಗದ ಮಹತ್ವ ಕುರಿತು ಉಪನ್ಯಾಸ ನೀಡಿದರು. ನಗರದ 20 ಕಾಲೇಜುಗಳಿಂದ ಅಪಾರ ಸಂಖ್ಯೆಯ ಎನ್.ಎಸ್.ಎಸ್. ಸ್ವಯಂ ಸೇವಕರು ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಹಾಗೂ ವಿಶ್ವವಿಖ್ಯಾತ ಗೋಲಗುಮ್ಮಜ ವಿಕ್ಷಣೆಯನ್ನು 11ನೇ ಯೋಗ ದಿನಾಚರಣೆಯ ಅಂಗವಾಗಿ ಉಚಿತ ಪ್ರವೇಶ ಇಡಲಾಗಿದೆ. ಅನೇಕ ಪ್ರವಾಸಿಗರು ಇದರ ಲಾಭವನ್ನು ಪಡೆದರು.
ಕಾರ್ಯಕ್ರಮದ ಮೊದಲಿಗೆ ಸುರೇಶ ಬಿರಾದಾರ ಸ್ವಾಗತಿಸಿದರು ಅಮರದೀಪ ವಂದಿಸಿದರು. ಪ್ರೊ. ರಾಜು ಕಪಾಳೆ ನಿರೂಪಿಸಿದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ