LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ನಿವ್ಸ್‌ ಸ್ಪೋರ್ಟ್ಸ್ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನಾ ಸಮಾರಂಭ

ಬೆಂಗಳೂರು, ನವೆಂಬರ್ 2025: ಕ್ರೀಡಾ ಗಾಯಾಳುಗಳ ಚಿಕಿತ್ಸೆಗಾಗಿ ಅತ್ಯಾಧುನಿಕ ವ್ಯವಸ್ಥೆಯುಳ್ಳ 'ಡಾ. ನಿವ್ಸ್‌ ಸ್ಪೋರ್ಟ್ಸ್ ಫಿಸಿಯೋಥೆರಪಿ ಕ್ಲಿನಿಕ್'  (Physiotherapy Clinic) ಉದ್ಘಾಟನಾ ಸಮಾರಂಭವು (Inauguration) ಇದೇ ನವೆಂಬರ್‌ 10 ಸೋಮವಾರದಂದು ಸಂಜೆ 5.00 ಗಂಟೆಗೆ MCECHS ಲೇಔಟ್ನಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ (Rajeshwari Gayakwad) ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲು ಮತ್ತು ಕ್ಲಿನಿಕ್‌ನ ಸೌಲಭ್ಯಗಳನ್ನು ವೀಕ್ಷಿಸಲು ನಿವಾಸಿಗಳು, ಕ್ರೀಡಾಪಟುಗಳು, ಫಿಟ್‌ನೆಸ್ ಉತ್ಸಾಹಿಗಳು ಹಾಗೂ ಮಾಧ್ಯಮ ಮಿತ್ರರನ್ನು ಆದರದಿಂದ ಆಹ್ವಾನಿಸುತ್ತಿದ್ದೇವೆ.



ಡಾ. ನಿವೇದಾ ದಿಲೀಪ್ (ಡಾ. ನಿವ್) ಅವರು ಈ ಕ್ಲಿನಿಕ್ ಅನ್ನು ಸ್ಥಾಪಿಸಿದ್ದಾರೆ. ನಿವೇದಾ ಅವರು ಭಾರತೀಯ ರೈಲ್ವೇ ಮಹಿಳಾ ಕ್ರಿಕೆಟ್ ತಂಡ ಮತ್ತು ಬಿಸಿಸಿಐ ಮಟ್ಟದಲ್ಲಿ ರಣಜಿ ಟ್ರೋಫಿಯಲ್ಲಿ ಅಸ್ಸಾಂ ಮಹಿಳಾ ಕ್ರಿಕೆಟ್ ತಂಡ ಸೇರಿದಂತೆ ಗಣ್ಯ ತಂಡಗಳೊಂದಿಗೆ ಕೆಲಸ ಮಾಡಿದ ಅನುಭವಿ ಕ್ರೀಡಾ ಫಿಸಿಯೋಥೆರಪಿಸ್ಟ್ ಆಗಿದ್ದಾರೆ.


ಕ್ರೀಡಾಳುಗಳಿಗೆ ಪುನರ್ವಸತಿ ಮತ್ತು ಕಾರ್ಯಕ್ಷಮತೆಯಲ್ಲಿ ಚೇತರಿಕೆ ಕಂಡುಕೊಳ್ಳುವ ಕಾರ್ಯಕ್ರಮಗಳನ್ನು ನೀಡುವುದು ಕ್ಲಿನಿಕ್‌ನ ಗುರಿಯಾಗಿದೆ. ನಮ್ಮ ಗುರಿ ಕೇವಲ ನೋವು ನಿವಾರಣೆಯಲ್ಲ, ಬದಲಿಗೆ ಕ್ರೀಡಾಪಟುಗಳು ಇನ್ನಷ್ಟು ಬಲಿಷ್ಠವಾಗಿ ಚೇತರಿಸಿಕೊಳ್ಳಲು ಮತ್ತು ಅವರ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುವುದು ಎಂದು ಡಾ. ನಿವ್ ಹೇಳಿದ್ದಾರೆ.


ಈ ಕ್ಲಿನಿಕ್ ಪ್ರತಿ ಕ್ರೀಡಾಪಟುವಿನ ಅಗತ್ಯಗಳಿಗೆ ಅನುಗುಣವಾಗಿ ಡ್ರೈ ನೀಡ್ಲಿಂಗ್, ಕಪ್ಪಿಂಗ್ ಥೆರಪಿ, ಮ್ಯಾನುಯಲ್ ಥೆರಪಿ, ಮಯೋಫೇಶಿಯಲ್ ರಿಲೀಸ್, ಕಿನಿಸಿಯಾಲಜಿ ಟೇಪಿಂಗ್ ಮತ್ತು ಶಸ್ತ್ರಚಿಕಿತ್ಸೆಯ ನಂತರದ ಪುನರ್ವಸತಿ ಸೇರಿದಂತೆ ಹಲವಾರು ಚಿಕಿತ್ಸೆಗಳನ್ನು ಒದಗಿಸುತ್ತದೆ. ಪವರ್‌ಲಿಫ್ಟರ್‌, ಕ್ರಿಕೆಟಿಗರು, ಓಟಗಾರರು ಚೇತರಿಕೆ ಜೊತೆಗೆ ಕಾರ್ಯಕ್ಷಮತೆಯಲ್ಲಿ ಅಭಿವೃದ್ಧಿ ಹೊಂದಲು ವೃತ್ತಿಪರ ಮಾರ್ಗದರ್ಶನವನ್ನು ಬಯಸುವ ವ್ಯಕ್ತಿಗಳಿಗೆ ಸೇವೆ ಸಲ್ಲಿಸಲು ಸಿದ್ಧವಿದೆ ಎನ್ನುತ್ತಾರೆ ಕ್ಲಿನಿಕ್‌ ನ ಸ್ಥಾಪಕರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ