LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ

Bengaluru : ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಟಸಾರ್ವಭೌಮ ಡಾ.ರಾಜ್ ಕುಮಾರ್ (Dr. Rajkumar Birthday) ರವರ 97 ನೇ ಜನ್ಮದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು ಮಾನ್ಯ ಇಂಧನ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ (K.J. Geroge) ರವರು ಕಲ್ಯಾಣನಗರದಲ್ಲಿ ಸುಸಜ್ಜಿತವಾಗಿ ಸುಂದರವಾಗಿ, ಬಯಲು ರಂಗಮಂದಿರ ಸಹಿತ ನವೀಕರಣಕೊಂಡಿರುವ ಡಾ.ರಾಜ್ ಕುಮಾರ್ ಉದ್ಯಾನವನವನ್ನು ಸಾರ್ವಜನಿಕರ ಸೇವೆಗಾಗಿ ಜನಾರ್ಪಣೆಗೊಳಿಸಿದರು .ಇದೇ ಸಂಧರ್ಭದಲ್ಲಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಡಾ.ರಾಜ್ ಕುಮಾರ್ ರವರ ಜೀವನ ಸಾಧನೆಯನ್ನು ಕುರಿತಾದ ಪುಸ್ತಕಗಳನ್ನು ಖರೀದಿಸಿ ಮನೆ- ಮನೆಗೂ ಡಾ.ರಾಜ್ ಕುಮಾರ್ ಎಂಬ ಶೀರ್ಷಿಕೆಯಡಿಯಲ್ಲಿ ನೂರಾರು ಪುಸ್ತಕಗಳನ್ನು ಜನರಿಗೆ ಉಚಿತವಾಗಿ ವಿತರಿಸುವ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಧರ್ಮದರ್ಶಿ ಶ್ರೀ ಪಿ.ಬಾಬು , ಬಿ.ಡಿ.ಎ ಸದಸ್ಯರಾದ ಬಿ.ಎನ್.ಆರ್.ಅಮರ್ ನಾಥ್, ಸರ್ವಜ್ಞ ನಗರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪಾ.ಮುರುಳೀಧರ್ ವಾರ್ಡ್ ಅಧ್ಯಕ್ಷರುಗಳಾದ ಪ್ರೇಮಾವತಿ.ಬಿ  ರಾಜಾ, ಕಸಾಪ ಮಹಿಳಾ ಸದಸ್ಯರಾದ ಕವಿತಾ ರವೀಂದ್ರ, ರತ್ನಗೋಪಾಲ್ ಕವಿ ಸರ್ವಜ್ಞ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕಮಲೇಶ್ ಓಂ ಶಕ್ತಿ ರಾಜು ಪತ್ರಕರ್ತರಾದ ರಮೇಶ್ ಮುಂತಾದ  ಸ್ಥಳೀಯ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವರ್ಧಮಾನ ಕಳಸೂರು ರವರು ಉಪಸ್ಥಿತರಿದ್ದರು.
ಉದ್ಘಾಟನೆ ಮಾಡುತ್ತಾ ಸಚಿವರಾದ ಜಾರ್ಜ್ ರವರು ನಿಮ್ಮದೇ ಉದ್ಯಾನವನ ಇದನ್ನು ನೀವೆಲ್ಲ ಆರೋಗ್ಯಕರವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು. ಸಚಿವರು ವಿಶೇಷ ಚೇತನರಿಗೆ ವೀಲ್ ಚೇರ್ ವಿತರಣೆ ಮಾಡಿದರು.
ಧರ್ಮದರ್ಶಿಗಳಾದ ಬಾಬು ಮತ್ತು ಪ್ರೇಮಾವತಿ ರವರು ತಮ್ಮ ಸಂಸ್ಥೆಯ ಪರವಾಗಿ ವಿದ್ಯಾರ್ಥಿಗಳಿಗೆ ಆಟೋಪಕರಣಗಳನ್ನು ವಿತರಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಪಾ. ಮುರಳಿಧರ್ ಅವರು ಸರ್ವರನ್ನು ಸ್ವಾಗತಿಸಿದರು ಓಂ ಶಕ್ತಿ ರಾಜರವರು ಕೊನೆಯಲ್ಲಿ ವಂದನಾರ್ಪಣೆಗಳನ್ನು ಸಲ್ಲಿಸಿದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ