LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ವಿಷ್ಣುವರ್ಧನ್ ಹೃದಯವಂತ ನಟ:.200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿರುವರು

ಚಾಮರಾಜನಗರ: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ರವರ ಜೀವಮಾನ ಸಾಧನೆಗಾಗಿ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿರುವುದು ಕನ್ನಡಿಗರಿಗೆ ಬಹುದಿನದ ಕನಸು ನನಸಾಗಿದೆ. ಕರ್ನಾಟಕ ಸರ್ಕಾರಕ್ಕೆ ವಿಶೇಷವಾಗಿ ಧನ್ಯವಾದಗಳು ಹಾಗು ಅಭಿನಂದನೆಗಳನ್ನು ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರು ,ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಉಪಾಧ್ಯಕ್ಷರಾದ ಜೈಹಿಂದ್ ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದ್ದಾರೆ.

ಡಾ.ವಿಷ್ಣುವರ್ಧನ್ ಕನ್ನಡದ ಹೆಮ್ಮೆಯ ಹೃದಯವಂತ ನಟ.200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿ ಕನ್ನಡ ಸಂಸ್ಕೃತಿ ,ಪರಂಪರೆ, ಐತಿಹಾಸಿಕ ,ಸಾಮಾಜಿಕ ಹಾಗೂ ವಿವಿಧ ರೀತಿಯ ಶೈಲಿಯ ನಾಯಕ ನಟನಾಗಿ ಕನ್ನಡಿಗರ ಮನದಲ್ಲಿ ಸದಾ ಕಾಲ ಹಸಿರಾಗಿ ಉಳಿದಿರುವ ವಿಷ್ಣುವರ್ಧನ್ ರವರಿಗೆ ಕರ್ನಾಟಕದ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ಅತ್ಯಂತ ಸಮಯೋಚಿತವಾಗಿದೆ. ವಿಷ್ಣುವರ್ಧನ್ ರವರ 75ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕೋಟ್ಯಾಂತರ ಕನ್ನಡಿಗ ಅಭಿಮಾನಿಗಳಿಗೆ ಪ್ರಶಸ್ತಿ ಸಂದಿರುವುದು ಬಹಳ ಸಂತೋಷವನ್ನು ತಂದಿದೆ .ದೃಢ ನಿರ್ಧಾರವನ್ನು ಕೈಗೊಂಡ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಸರ್ವರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.
ವಿಷ್ಣುವರ್ಧನ್ ಒಬ್ಬ ಮಾನವೀಯ ಮೌಲ್ಯದ ಶ್ರೇಷ್ಠ ನಟ. ವಿಷ್ಣುವರ್ಧನ್ ರವರ ಚಲನಚಿತ್ರಗಳು ಕೋಟ್ಯಾಂತರ ಜನರ ಮನಸ್ಸಿಗೆ ನೆಮ್ಮದಿಯನ್ನು ಹಾಗೂ ಒಳ್ಳೆಯ ಸಂದೇಶವನ್ನು ನೀಡಿರುವ ಚಿತ್ರಗಳಾಗಿವೆ ಎಂದು ಋಗ್ವೇದಿ ಹರ್ಷ ವ್ಯಕ್ತಪಡಿಸಿ , ಬಹುಭಾಷಾ ನಟಿ ಬಿ ಸರೋಜಾ ದೇವಿಯವರಿಗೂ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಅಭಿನಂದನೆಯನ್ನು ತಿಳಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ