LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ದೇಶವನ್ನು ಪ್ರತಿಯೊಬ್ಬ ಪ್ರಜೆಯು ಪ್ರೀತಿಸುತ್ತಾನೆ. ಪ್ರೀತಿಸಲೇಬೇಕು







ಬೆಂಗಳೂರಿನ ಬಹುತೇಕ ಮಳಿಗೆಗಳು ಸೇರಿದಂತೆ ವ್ಯಾಪಕ ಕೇಂದ್ರಗಳು ಸೇಲ್ ಗಳ  ಪೈಪೋಟಿಯಲ್ಲಿ ತೊಡಗಿವೆ.  ದೊಡ್ಡ ದೊಡ್ಡ  ಮಾಲ್ ಗಳು ನವವಧುವಿನಂತೆ ಕಂಗೊಳಿಸುತ್ತ ಶೃಂಗಾರಗೊಂಡಿವೆ. ಒಂದು ಕೊಂಡರೆ ಇನ್ನೊಂದು ಉಚಿತ ಅಷ್ಟು ರಿಯಾಯಿತಿ ಇಷ್ಟು ರಿಯಾಯಿತಿ ಅದು ಕೊಂಡರೆ ಇದು ಪ್ರೀ..  ಎಂಬ ಟಿವಿ ಜಾಯಿರಾತು  ಮತ್ತು ಬ್ಯಾನರ್ ಗಳಿಂದ  ಪ್ರಚಾರವಾಗುತ್ತಿವೆ. ಸ್ವಾತಂತ್ರ್ಯ ದಿನಾಚರಣೆ ಮತ್ತು  ಗೌರಿ ಗಣೇಶ ಹಬ್ಬದ ಸಡಗರ. ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ನಾವು ಆಚರಿಸುತ್ತೇವೆ.

ನಾವೆಲ್ಲರೂ ಭಾರತೀಯರು ಎಂದು ಜಾತಿ, ಮತ,  ಭೇದವಿಲ್ಲದೆ ಸಂಭ್ರಮಿಸುವ ದಿನವಿದು 78 ವಸಂತಗಳನ್ನು ಪೂರೈಸಿ 79ನೇ ಸ್ವಾತಂತ್ರೋತ್ಸವವನ್ನು ಆಚರಿಸುತ್ತಿದ್ದೇವೆ.  ಈ ದಿನಾಚರಣೆಯ ದಿನದಂತ ದೇಶಭಕ್ತಿಯ ಹಾಡುಗಳು ಭಾಷಣಗಳು ಕಲೆ ಸಂಸ್ಕೃತಿ ಮತ್ತು ಸಾಂಸ್ಕೃತಿಕ  ಪರಂಪರೆಯನ್ನು ಸಾರುವ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯುತ್ತವೆ. ನಾವೆಲ್ಲರೂ ಭಾರತೀಯರು ಧರ್ಮ,  ಜಾತಿ ಭಾಷೆ ಕುಲಗೋತ್ರ ಬಡವ,  ಶ್ರೀಮಂತರು,  ವಿದ್ಯಾವಂತ,  ಅವಿದ್ಯಾವಂತ    ಎಂಬ ಭೇದವಿಲ್ಲದೇ ನಮ್ಮ ಭಾರತ ದೇಶವನ್ನು ಪ್ರತಿಯೊಬ್ಬ ಪ್ರಜೆಯು ಪ್ರೀತಿಸುತ್ತಾನೆ. ಪ್ರೀತಿಸಲೇಬೇಕು,  ಏಕೆಂದರೆ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣಗಳನ್ನೇ ಬಲಿದಾನ ಮಾಡಿದ್ದಾರೆ.

ಸ್ವಾತಂತ್ರ್ಯನಂತರ ನಾವು ಸಾಕಷ್ಟು ಪ್ರಗತಿಯನ್ನು ಸಾಧಿಸಿದ್ದೇವೆ. ಕೃಷಿ ವಿದ್ಯೆ,  ಆರೋಗ್ಯ,  ಕೖೆಗಾರಿಕೆ, ಕಲೆ, ಸಂಸ್ಕೃತಿ,  ವಿಜ್ಞಾನ,  ತಂತ್ರಜ್ಞಾನ, ಸಿನಿಮಾ, ಕ್ರೀಡೆ ಇತ್ಯಾದಿ ರಂಗದಲ್ಲಿ ನಮ್ಮ ದೇಶ ಮುಂದುವರೆದೆ ರಾಷ್ಟ್ರಗಳ ಶ್ರೇಣಿಯಲ್ಲಿ ಇದೆ. ಪ್ರಗತಿ ಪಥದಲ್ಲಿರುವ ಈ ದೇಶದ ಪ್ರಗತಿ ನಮ್ಮ ಪ್ರಗತಿ ಎಂಬ ಭಾವನೆ ಸದಾ ನಮ್ಮಲ್ಲಿರಬೇಕು.  " ಸತ್ಯಮೇವ ಜಯತೇ" ಇದು ನಮ್ಮ ರಾಷ್ಟ್ರೀಯ ದ್ಯೇಯವಾಕ್ಯ,  ಈ ದ್ಯೇಯವಾಕ್ಯದ ಪರಿಪಾಲನೆ ಎಷ್ಟಾಗುತ್ತಿದೆ. ಎಲ್ಲ ಕಡೆ ಸುಳ್ಳು ವ್ಯಾಪಿಸಿಕೊಂಡು ಬಿಟ್ಟಿದೆ.  ವಂಚೆನೆ,  ಮೋಸ ಲಂಚ ಇಲ್ಲದೇ ಇಂದು ಯಾವ ವ್ಯವಹಾರಗಳು ಕೂಡಾ ನಡೆಯುತ್ತಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹಿಳೆಯರು ಕೂಡ ಹೋರಾಡಿದ್ದಾರೆ.  ದೇಶವನ್ನು ಗೌರವಿಸುವ ನಾವು ಮಹಿಳೆಯರನ್ನು ಗೌರವಿಸಬೇಕು. ತಾಯಿ ಎಂಬ ಗೌರವ, ಮಗಳೆಂಬ ವಾತ್ಸಲ್ಯ. ಅತ್ತೆ ಎಂಬ ಅಭಿಯಾನ.  ಸೊಸೆ ಎಂಬ ಪ್ರೀತಿ ಸಹೋದರ ಸಹೋದರಿಯರ ಪ್ರೀತಿ ಭಾಂದವ್ಯ. ನಾವೆಲ್ಲರೂ ಒಂದೇ ನಮ್ಮೆಲ್ಲರ ಸೃಷ್ಟಿಕರ್ತನು ಒಬ್ಬನೆ ಆಗಿರುವಾಗ ನಾವೆಲ್ಲರೂ ಒಂದೇ ಸಹೋದರ ಸಹೋದರಿಯಾಗಿ ಒಂದೇ ದೇಶದ ನಿವಾಸಿಗಳಾಗಿ ಜಾತಿ ಮತ ಧರ್ಮ ಭಾಷೆ ಭೇದವಿಲ್ಲದೇ ನಾವು ಭಾರತೀಯರು ಎಂಬ ಒಗ್ಗಟ್ಟು ಹಾಗು ಏಕತೆಯನ್ನು ಪ್ರದರ್ಶಿಸಬೇಕಾಗಿದೆ.   " ಸ್ವಾತಂತ್ರ್ಯ ದಿನಾಚರಣೆ"  ಎನ್ನುವುದು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದ ನಾವೆಲ್ಲರು ಒಂದೇ ಎಂಬ ಭಾವನೆಯನ್ನು ಗಟ್ಚಿಗೊಳಿಸೋಣ ಸ್ವಾತಂತ್ರ್ಯ ದಿನಾಚರಣೆಯ ಎಲ್ಲಾರು ಸಡಗರ ಸಂಭ್ರಮದಿಂದ ಆಚರಿಸೋಣ.

             - ವಿ.ಎಂ.ಎಸ್.ಗೋಪಿ ✍

               ಲೇಖಕರು

                   ಬೆಂಗಳೂರು.










Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ