LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀಟ್ ಪರೀಕ್ಷೆಯಲ್ಲಿ 107 ನೇ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿಯ ಅಂಕಪಟ್ಟಿಯೇ ನಕಲಿ!

ಉಡುಪಿ: ಪರೀಕ್ಷೆಗಳ ನಕಲಿ ಅಂಕಪಟ್ಟಿಯ ಭೂತ ಇದೀಗ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆಯುವ ನೀಟ್ ಪರೀಕ್ಷೆಯಲ್ಲೂ ದೊಡ್ಡ ಸದ್ದು ಮಾಡಿದ್ದು, ನಕಲಿ ಅಂಕಪಟ್ಟಿ ತಯಾರಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ಜಾಲ ಸದ್ದಿಲ್ಲದೇ ಕಾರ್ಯನಿರ್ವಹಣೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ,
ಉಡುಪಿಯಲ್ಲಿ ಈ ವಿಚಾರ ಬೆಳಕಿಗೆ ಬಂದಿದ್ದು, ನೀಟ್ ನಲ್ಲಿ ದೇಶದಲ್ಲಿಯೇ 107 ನೇ ರ್ಯಾಂಕ್ ಎಂದು ಬಿಂಬಿಸಿದ್ದ ವಿದ್ಯಾರ್ಥಿಯ ನಿಜವಾದ ರ್ಯಾಂಕ್ 17,62,258 ಎಂದು ಗೊತ್ತಾಗಿದೆ,
ನಕಲಿ ಅಂಕಪಟ್ಟಿಯಲ್ಲಿ ಅಷ್ಟೊಂದು ಅಚ್ಚುಕಟ್ಟಾಗಿ ಅಂಕಿ ಸಂಖ್ಯೆಗಳನ್ನು ತ್ತಿದ್ದಲಾಗಿದ್ದು, ಆತನ ಪೋಷಕರು ನಕಲಿ ಅಂಕಪಟ್ಟಿಯನ್ನೇ ಕಾಲೇಜಿನ ಮೂಲಕ ಪ್ರಚಾರ ತಂತ್ರಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ,
ಇತ್ತೀಚೆಗಷ್ಟೇ 2025 ನೀಟ್ ಫಲಿತಾಂಶ ಪ್ರಕಟಗೊಂಡಿತ್ತು, ಅದರಲ್ಲಿ ರಾಜ್ಯದ ಹಲವು ವಿದ್ಯಾರ್ಥಿಗಳು 200 ಬ್ಯಾಂಕ್ ನೊಳಗೆ ಸಾಧನೆ ಮಾಡಿದ್ದರು, ಇದರ ಮಧ್ಯೆ ವಿದ್ಯಾರ್ಥಿಯೊಬ್ಬನ ಪರವಾಗಿ ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯ ಮಟ್ಟದಲ್ಲಿ ಎಂಟನೇ ಸ್ಧಾನ ಎಂದು ಹೇಳಲಾಗಿತ್ತು, ಈತನ ಸಾಧನೆ ಬಗ್ಗೆ ಇತರ ವಿದ್ಯಾರ್ಥಿಗಳಿಗೆ ಸಂಶಯ ಬಂದು ಪರಿಶೀಲಿಸಿದಾಗ ಅದು ನಕಲಿ ಅಂಕಪಟ್ಟಿ ಎಂಬುದು ಗೊತ್ತಾಗಿದೆ,
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಕಲಿ ಅಂಕಪಟ್ಟಿ ದಂಧೆಯ ಜಾಲವನ್ನು ಬೇಧಿಸಬೇಕು, ಅಲ್ಲದೆ ಸಮಗ್ರ ತನಿಖೆಗೆ ಆಗ್ರಹ ಕೇಳಿಬಂದಿದೆ,
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ