LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೊದಲ ಬಾರಿಗೆ ಆರ್‌ಬಿಐ `ಚಿನ್ನದ ಖಜಾನೆ’ ಅನಾವರಣ

ಮುಂಬೈ: ಮೊದಲ ಬಾರಿಗೆ ಭಾರತದ ಕೇಂದ್ರೀಯ ಬ್ಯಾಂಕ್ ಆರ್‌ಬಿಐ  ಸಾಕ್ಷ್ಯಚಿತ್ರವೊಂದನ್ನು ಹೊರತಂದಿದೆ. ಈ ಮೂಲಕ ತನ್ನ ಚಿನ್ನದ ಖಜಾನೆಯೊಂದನ್ನು ಅನಾವರಣಗೊಳಿಸಿದೆ, ಇಲ್ಲಿಯವರೆಗೆ ಸಾರ್ವಜನಿಕರಿಗೆ ಆರ್‌ಬಿಐ ದೇಶದ ಸಂಪತ್ತನ್ನು ನಗದು ರೂಪದಲ್ಲಿ ಮಾತ್ರವಲ್ಲದೆ ಚಿನ್ನದ ರೂಪದಲ್ಲೂ ಇಟ್ಟುಕೊಂಡಿರುತ್ತದೆ ಎಂಬುದಷ್ಟೇ ತಿಳಿದಿತ್ತು. ಆದರೆ ಇದೇ ಮೊದಲ ಬಾರಿಗೆ ಸಾಕ್ಷ್ಯಚಿತ್ರವೊಂದರ  ಮೂಲಕ ಆರ್‌ಬಿಐನ ಚಿನ್ನ ಸಂಗ್ರಹಗಾರದ ಆಳ-ಅಗಲ ಬಹಿರಂಗಗೊಳಿಸಿದೆ, ಓಟಿಟಿ ವೇದಿಕೆಯಾದ ಜಿಯೋ ಹಾಟ್‌ಸ್ಟಾರ್‌ನಲ್ಲಿ 5  ಭಾಗಗಳಲ್ಲಿ ಪ್ರಸಾರವಾಗುತ್ತಿರುವ `ಆರ್‌ಬಿಐ ಅನ್‌ಲಾಕ್ಡ್‌: ಬಿಯಾಂಡ್ ದ ರುಪಿ’ ಎಂಬ ಡಾಕ್ಯುಮೆಂಟರಿಯ ಮೂಲಕ ಆರ್‌ಬಿಐ ಬಳಿ ಇರುವ ಅಗಾಧ ಸಂಪತ್ತಿನ ಅನಾವರಣ ಮಾಡಲಾಗಿದೆ. ಸದ್ಯ 4 ಭಾಗಗಳು ರಿಲೀಸ್ ಆಗಿದ್ದು, ಇನ್ನೂ ಒಂದು ಭಾಗ ರಿಲೀಸ್ ಆಗಬೇಕಷ್ಟೆ. ಆರ್‌ಬಿಐ ಸ್ಥಾಪನೆಯಾಗಿ 90 ವರ್ಷ ತುಂಬಿರುವ ಹೊತ್ತಿನಲ್ಲೇ ಈ ಡಾಕ್ಯುಮೆಂಟರಿ ಹೊರಬಂದಿದೆ.

ಚಾಕ್‌ಬೋರ್ಡ್ ಎಂಟರ್‌ಟೇನ್‌ಮೆಂಟ್ (Chalkboard Entertainment) ನಿರ್ಮಿಸಿರುವ ಈ ಡಾಕ್ಯುಮೆಂಟರಿಯಲ್ಲಿ, ಕಳೆದ 90 ವರ್ಷಗಳಲ್ಲಿ ಆರ್‌ಬಿಐನ ಕಾರ್ಯವೈಖರಿಯನ್ನು ವಿವರಿಸಲಾಗಿದೆ. ತಲಾ 12.5 ಕೆ.ಜಿ. ತೂಗುವ ಚಿನ್ನದ ಗಟ್ಟಿಗಳ ಅಟ್ಟಿಯನ್ನು ಬಿಗಿಭದ್ರತೆಯಲ್ಲಿ ಇರಿಸಿರುವುದನ್ನು ತೋರಿಸಲಾಗಿದೆ. ಇವುಗಳ ಮೌಲ್ಯ ಕೋಟಿಯಷ್ಟಿದ್ದು, ಭಾರತದಲ್ಲಿ ಒಟ್ಟು 870 ಟನ್ ಚಿನ್ನದ ಸಂಗ್ರಹವಿದೆ ಎಂಬುದು ಬಹಿರಂಗಪಡಿಸಿದೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ