LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಿಎಂ ಜಗನ್ ಕಾರಿಗೆ ಸಿಕ್ಕಿ ವೃದ್ಧನ ಸಾವು ಪ್ರಕರಣ : ಕಾರು ಚಾಲಕ ಪೊಲೀಸ್ ವಶಕ್ಕೆ

ಹೈದರಾಬಾದ್: ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ರ‍್ಯಾಲಿ ಒಂದರಲ್ಲಿ ಘಟಿಸಿದ ದುರಂತದಲ್ಲಿ 65 ರ ಪ್ರಾಯದ ವೃದ್ಧ ಕಾರಿನ ಚಕ್ರದಡಿ ಸಿಲುಕಿ ಸಾವನ್ನಪ್ಪಿದ ಘಟನೆ ಸಂಭವಿಸಿತ್ತು. ಈ ವಿಷಯಕ್ಕೆ ಸಂಬ0ಧಿಸಿದ0ತೆ ಮಾಜಿ ಸಿ.ಎಂ. ಜಗನ್ ವಿರುದ್ಧ ಈಗಾಗಲೇ ಎಫ್‌ಐಆರ್ ಕೂಡಾ ದಾಖಲಾಗಿದೆ. ಕಾರು ಚಾಲಕ ರಮಣ ರೆಡ್ಡಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು,ಕಾರಿನ ಮಾಲೀಕ ಕೃಷ್ಣ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ ಎನ್ನಲಾಗಿದೆ.
ಇದೇ ದಿನಾಂಕ ತಿಂಗಳ 18 ರಂದು ಪಲ್ನಾಡು ಜಿಲ್ಲೆಯ ಸತ್ತೇನಹಳ್ಳಿಯಲ್ಲಿ ಜಗನ್ ಅವರು ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಸಂದರ್ಭದಲಿ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಇದೇ ವೇಳೆ 65 ವರ್ಷದ ಸಂಗಯ್ಯ ಎಂಬ ವೃದ್ಧ ಅಸುನೀಗಿದ್ದಾರೆ. ಪ್ರಕರಣಕ್ಕೆ ಸಂಬ0ಧಿಸಿದ0ತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾರು ಚಾಲಕ ರಮಣ ರೆಡ್ಡಿಯನ್ನು ಎ1 ಆರೋಪಿಯಾಗಿ, ಜಗನ್ ಮೋಹನ್ ರೆಡ್ಡಿಯನ್ನು ಎ2 ಆರೋಪಿಯಾಗಿ ಮತ್ತು ಕಾರ್ ಮಾಲಿಕ ಕೃಷ್ಣನನ್ನು 3ನೇ ಆರೋಪಿಯಾಗಿ ಪರಿಗಣಿಸಲಾಗಿದೆ. ರಮಣ ರೆಡ್ಡಿಯನ್ನು ಬಂಧಿಸಲಾಗಿದೆ.
ಸಂಗಯ್ಯನ ಸಾವಿನ ಘಟನೆಗೆ ಸಂಬAಧಿಸಿದAತೆ, ಕಾರ್ಯಕರ್ತರು ಮತ್ತು ಸಾರ್ವಜನಿಕರು ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರ‍್ಯಾಲಿಗಳಂತಹ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಸರಕಾರ ಮತ್ತು ಆಯೋಜಕರು ಹೆಚ್ಚಿನ ಮುತುವರ್ಜಿಯನ್ನು ವಹಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿರುವರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ