LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆನರಾ ಬ್ಯಾಂಕ್‍ನಿಂದ ಉಚಿತ ಕಂಪ್ಯೂಟರ್ ಶಿಕ್ಷಣ

ಕೆನರಾ ಬ್ಯಾಂಕ್ ಸಂಸ್ಥೆಯು ನಿರುದ್ಯೋಗಿ ಯುವಕ-ಯುವತಿಯರಿಗೆ ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಶನ್ ಹಾಗೂ ಹಾರ್ಡ್ ವೇರ್ ಮತ್ತು ನೆಟ್‍ವರ್ಕ್ ಅಡ್ಮಿನಿಸ್ಟ್ರೇಶನ್, ಮೈಕ್ರೋಸಾಫ್ಟ್ ಆಫೀಸ್, ಟ್ಯಾಲಿ, ಡಿಟಿಪಿ (ಕೋರೆಲ್ ಡ್ರಾ, ಪೋಟೀಶಾಪ್) ಸ್ಪೋಕನ್ ಇಂಗ್ಲೀಷ್, ವ್ಯಕ್ತಿತ್ವ ವಿಕಸನ, ಬ್ಯಾಂಕಿಂಗ್ ಉತ್ಪನ್ನಗಳ ಪರಿಚಯ  ಸೇರಿದಂತೆ ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ಶಿಕ್ಷಣವನ್ನು ನೀಡಲಿದೆ. ಕಂಪ್ಯೂಟರ್ ತರಬೇತಿಯು 2025 ಜುಲೈ 1 ರಂದು ಪ್ರಾರಂಭವಾಗಲಿದೆ.

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಪಿಯುಸಿ, ಡಿಗ್ರಿ, ಡಿಪೆÇ್ಲಮಾ ಹೊಂದಿದವವರಿಗೆ ಆದ್ಯತೆ ನೀಡಲಾಗುವುದು ಮತ್ತು ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ / ವರ್ಗದವರಿಗೆ ಗರಿಷ್ಟ ವಯಸ್ಸು 35 ನಿಗದಿಪಡಿಸಲಾಗಿದೆ.

ತರಬೇತಿಗೆ ಸೇರ ಬಯಸುವವರು ನೇರ ಸಂದರ್ಶನಕ್ಕೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ಹಾಜರಾಗಬೇಕು. ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನಗಳು ನಡೆಯಲ್ಲಿದ್ದು, ಅರ್ಜಿ ಫಾರಂಗಳನ್ನು ಪರೀಕ್ಷೆಗೆ ಹಾಜರಾಗುವ ಸಂದರ್ಭದಲ್ಲಿ ಪಡೆಯಬಹುದಾಗಿದೆ. ತರಬೇತಿ ಅವಧಿಯು ಮೂರು ತಿಂಗಳಾಗಿದ್ದು, ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ನಡೆಯಲಿದೆ. ತರಬೇತಿ ಅವಧಿಯಲ್ಲಿ ಮಧ್ಯಾಹ್ನದ ಉಪಹಾರ ನೀಡಲಾಗವುದು.


ಹೆಚ್ಚಿನ ವಿವರಗಳಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆ, ಚಿತ್ರಾಪುರ ಭವನ, 3 ನೇ ಮಹಡಿ, 15 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-560055 ಹಾಗೂ ದೂರವಾಣಿ ಸಂಖ್ಯೆ: 080-23440036 / 23463580 / 94485 38107 ಅಥವಾ ಇ-ಮೇಲ್ [email protected][email protected] ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ