LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆ ಐ ಎ ಡಿ ಬಿ ವತಿಯಿಂದ ಬೃಹತ್ ಮೆರವಣಿಗೆ: ಮಾದಿಗ ದಂಡೋರ ಸಂಘಟನೆಯಿಂದ ಸಂಪೂರ್ಣ ಬೆಂಬಲ

ಶಿಡ್ಲಘಟ್ಟ : ಜೂನ್ 30 ಸೋಮವಾರದಂದು ಕೆ ಐ ಎ ಡಿ ಬಿ ವತಿಯಿಂದ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನೆಯನ್ನು ದಲಿತ ಪರ ಸಂಘಟನೆಗಳು ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಪರ ಸಂಘಟನೆಗಳು ಹಮ್ಮಿಕೊಂಡಿರುವ ಪ್ರತಿಭಟನೆಗೆ ಮಾದಿಗ ದಂಡೋರ ಸಂಘಟನೆಯಿಂದ ಸಂಪೂರ್ಣ ಬೆಂಬಲ ಇದೆ ಎಂದು ಮಾದಿಗ ದಂಡೋರ ಜಿಲ್ಲಾ ಸದಸ್ಯ ದೇವರ ಮಳ್ಳೂರು ಕೃಷ್ಣಪ್ಪ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ ದಂಡೋರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜಂಗಮಕೋಟೆ ಹೋಬಳಿಯ 13 ಹಳ್ಳಿಗಳಿಗೆ ಸೇರಿದ ಕೆ ಐ ಎ ಡಿ ಬಿ ಗೆ ಸಂಬಂಧಿಸಿದಂತೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವು ಬಹಳ ಹಿಂದುಳಿದಿದ್ದು ಅನೇಕ ಯುವಕರು ವರರಾಜ್ಯ ಹಾಗೂ ಅವರ ಜಿಲ್ಲೆಗಳಿಗೆ ಉದ್ಯೋಗವನ್ನರಸಿ ತೆರಳುತ್ತಿದ್ದಾರೆ. ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆಕರಣ ಆದರೆ ನಮ್ಮ ಶಿಡ್ಲಘಟ್ಟ ಜನತೆಗೆ ಉದ್ಯೋಗ ಸಿಗುತ್ತದೆ, ತಾಲೂಕಿನಲ್ಲಿ ಅತಿ ಹೆಚ್ಚು ಬಡತನವನ್ನು ಹೊಂದಿದ್ದರೆ ಬಡತನ ನಿರ್ಮೂಲವಾಗಬೇಕಾದರೆ, ನಮ್ಮ ತಾಲೂಕಿಗೆ ಕೈಗಾರಿಕೆಗಳು ಅತ್ಯವಶ್ಯಕವಾಗಿವೆ. ಹಿಂದುಳಿದ ತಾಲೂಕಾಗಿರುವ ಶಿಡ್ಲಘಟ್ಟವು ಅಭಿವೃದ್ಧಿಯತ್ತ ಸಾಗುತ್ತದೆ.
ಸೋಮವಾರ ದಲಿತ ಪರ ಸಂಘಟನೆಗಳು ಕನ್ನಡ ಪರ ಸಂಘಟನೆಗಳು ಹಮ್ಮಿಕೊಂಡಿರುವ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನೆಗೆ ನಮ್ಮ ರಾಜ್ಯ ಪ್ರಧಾನ ಕಾರ್ಯದರ್ಶಿ ಜಂಗಮ ಶೀಗಹಳ್ಳಿ ದೇವರಾಜ್ ಅವರ ಸೂಚನೆಯಂತೆ ನಾವು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಮಾದಿಗ ದಂಡೋರ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಅಲಸೂರದಿನ್ನೇ ಅಂಜಿ ಮಾತನಾಡಿ ದಲಿತ ಪರ ಸಂಘಟನೆಗಳು ಕನ್ನಡಪರ ಸಂಘಟನೆಗಳು ಹಾಗೂ ವಿವಿಧಪರ ಸಂಘಟನೆಗಳು ಸೋಮವಾರ ಮೆರವಣಿಗೆ ಹಾಗು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಕೆ ಐ ಎ ಡಿಬಿ ಸಂಸ್ಥೆಯು ಜಂಗಮಕೋಟೆಯ 13 ಹಳ್ಳಿಗಳ ಭೂಮಿಯನ್ನು ಪಡೆದುಕೊಂಡು ಆದಷ್ಟು ಬೇಗ ಕಾರ್ಖಾನೆಗಳನ್ನು ಸ್ಥಾಪಿಸಬೇಕು ಹಾಗೂ ಈ ಭಾಗದ ಹೆಚ್ಚು ವಿದ್ಯಾವಂತ ಯುವಕರಿದು ಅಂತವರಿಗೆ ನಿರುದ್ಯೋಗವನ್ನು ನೀಗಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ನಮ್ಮ ಸಂಘಟನೆಯಿಂದ ಸಂಪೂರ್ಣ ಬೆಂಬಲ ಸಿಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಮಂಜುನಾಥ್ ಎ ಎನ್, ತಾಲೂಕು ಅಧ್ಯಕ್ಷ ನರಸಿಂಹಪ್ಪ, ಚಾಲಕರ ಘಟಕದ ಅಧ್ಯಕ್ಷ ವೇಣು,ತಾಲೂಕು ಖಜಾಂಚಿ ಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಿ ನಾರಾಯಣಸ್ವಾಮಿ, ಆಟೋ ಘಟಕ ಅಧ್ಯಕ್ಷ ಮುನಿರಾಜು,
ನಲಪ್ಪ, ಕೃಷ್ಣಪ್ಪ ಮತ್ತು ಇತರರು ಹಾಜರಿದ್ದರು.

*ವರದಿ ಚಿಕ್ಕತೇಕಹಳ್ಳಿ ಡಿ ಶಿವಕುಮಾರ್*
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ