LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೈತ್ಯ ಸಂಸ್ಥೆಗಳಿಂದ ಸಣ್ಣಪುಟ್ಟ ವ್ಯಾಪಾರಿಗಳ ಮೇಲೆ ಗದಾ ಪ್ರಹಾರ -:-ಶಾಸಕ ಎಸ್. ಮುನಿರಾಜು

ಬೆಂಗಳೂರು,ಆ.3: ನಗರೀಕರಣದಿಂದ ಗ್ರಾಮೀಣ ಸಂತೆ ಸಂಸ್ಕೃತಿ ನಶಿಸುತ್ತಿದ್ದು, ಜನ ಸಾಮಾನ್ಯರ ಆದ್ಯತೆಗಳನ್ನು ಪೂರೈಸಲು ಇದೀಗ ಸೂಪರ್ ಮಾರ್ಕೆಟ್ ಯುಗ ಆರಂಭವಾಗಿದೆ. ಮೆಟ್ರೋದಂತಹ ದೈತ್ಯ ಸಂಸ್ಥೆಗಳು ಸಣ್ಣಪುಟ್ಟ ವ್ಯಾಪಾರಿಗಳ ಮೇಲೆ ಗದಾ ಪ್ರಹಾರ ಮಾಡುತ್ತಿವೆ ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಮುನಿರಾಜು ಹೇಳಿದ್ದಾರೆ.

ಸುಂಕದಕಟ್ಟೆಯ ಹೆಗ್ಗನಹಳ್ಳಿಯಲ್ಲಿ “ಸ್ಮಾರ್ಟ್ ಕ್ವಿಕ್ ಸೂಪರ್ ಮಾರ್ಕೆಟ್” ಉದ್ಘಾಟಿಸಿ ಮಾತನಾಡಿದ ಅವರು, ಆಹಾರ, ವಿಹಾರ, ವಾಹನಗಳಿಂದ ಹಿಡಿದು ಪ್ರತಿಯೊಂದು ಇದೀಗ ಸ್ಮಾರ್ಟ್ ಆಗುತ್ತಿದೆ. ಆಂಧ್ರಪ್ರದೇಶದ ಉದ್ಯಮಿಗಳು ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ಆದರೆ ಬಹುರಾಷ್ಟ್ರೀಯ ಕಂಪೆನಿಗಳಿಗೆ ಪೈಪೋಟಿ ನೀಡಲು ಕನ್ನಡಿಗರೊಬ್ಬರು ಸೂಪರ್ ಮಾರ್ಕೆಟ್ ಆರಂಭಿಸಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ. ನಂಜಾವಧೂತ ಸ್ವಾಮೀಜಿ ಮಾತನಾಡಿ, ಯಾವುದೇ ವ್ಯಾಪಾರದಲ್ಲಿ ಗ್ರಾಹಕರ ಹಿತರಕ್ಷಣೆ ಅತ್ಯಂತ ಮುಖ್ಯವಾಗಿದ್ದು, ಗ್ರಾಹಕರೇ ದೇವರು. ನಮ್ಮ ಯುವ ಸಮೂಹ ಮಾಲ್ ಗಳು, ಸೂಪರ್ ಮಾರ್ಕೆಟ್ ಗಳನ್ನು ಸ್ಥಾಪಿಸುತ್ತಿರುವುದು ಶ್ಲಾಘನೀಯ. ಗ್ರಾಮೀಣ ಭಾಗದಿಂದ ಬಂದಿರುವ ದೀಪು ಗೌಡ ಅವರು ರಾಜಸ್ಥಾನ, ದೆಹಲಿಯಲ್ಲಿಯೂ ಯಶಸ್ವಿ ಉದ್ದಿಮೆಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಮಾರ್ಟ್ ಕ್ವಿಕ್ ಸೂಪರ್ ಮಾರ್ಕೆಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಅಧ್ಯಕ್ಷ ದೀಪುಗೌಡ ಮಾತನಾಡಿ, ನಮ್ಮ ಲಾಭಾಂಶದಲ್ಲಿ ಶೇ 80 ರಷ್ಟು ಪಾಲು ಗ್ರಾಹಕರಿಗೆ ಕ್ಯಾಶ್ ಬ್ಯಾಕ್ ಮೂಲಕ ಹಿಂತಿರುಗಿಸುತ್ತೇವೆ. ಬೇರೆ ಇ ಕಾಮರ್ಸ್ ಕಂಪೆನಿಗಳಿಗೆ ಹೋಲಿಸಿದರೆ ನಮ್ಮಲ್ಲಿ ಹೆಚ್ಚಿನ ರಿಯಾಯಿತಿ, ಗುಣಮಟ್ಟದ ವಸ್ತುಗಳನ್ನು ನೀಡುತ್ತೇವೆ. ಮೂರು ವರ್ಷಗಳಲ್ಲಿ ನೂರು ಸೂಪರ್ ಮಾರ್ಕೆಟ್ ಗಳನ್ನು ಸ್ಥಾಪಿಸಿ ಕನ್ನಡಿಗರು ಒಳಗೊಂಡಂತೆ ದೇಶದ ಜನರಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಉದ್ಯಮಿ ಕೆ.ಎಸ್. ವೆಂಕಟೇಶ್, ಸುದೀಪ್ ಗೌಡ, ಶಿವುಗೌಡ, ಉದಯ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ