LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿ ವಿದ್ಯಾರ್ಥಿಗಳಿಗೆ ಬಿಸಿಯೂಟ ಬಡಿಸಿದ ರಾಜ್ಯಪಾಲರು

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಅನ್ನಪೂರ್ಣೇಶ್ವರಿ ಆಹಾರ ಸಮಿತಿ ವತಿಯಿಂದ ವಿತರಿಸುತ್ತಿರುವ ಬಿಸಿಯೂಟ ವಿತರಣಾ ಕೇಂದ್ರಕ್ಕೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ಭೇಟಿಕೊಟ್ಟು, ವಿದ್ಯಾರ್ಥಿಗಳಿಗೆ ತಾವೇ ಊಟ ಬಡಿಸುವ ಮೂಲಕ ಯೋಜನೆಗೆ ಮೆಚ್ಚುಗೆ ಸೂಚಿಸಿದರು.

ಪಾವಗಡ ರಾಮಕೃಷ್ಣ ಸೇವಾಶ್ರಮ ಹಾಗೂ ಶಿರಡಿ ಸಾಯಿಮಂದಿರ ಆದರ್ಶನಗರ ತುಮಕೂರು ಸಹಯೋಗದಲ್ಲಿ ಅನ್ನಪೂರ್ಣೇಶ್ವರಿ ಆಹಾರ ಸಮಿತಿಯವರು ಮಾಡುತ್ತಿರುವ ಕಾರ್ಯ ಅತ್ಯಂತ ಮಹತ್ವದ್ದಾಗಿ ಎಂದು ಶ್ಲಾಘಿಸಿದ ರಾಜ್ಯಪಾಲರು, ತಮ್ಮ ಘಟಿಕೋತ್ಸವ ಭಾಷಣದಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡಿ ರಾಜ್ಯದಲ್ಲಿ ಬೇರೆ ಯಾವ ವಿವಿಯಲ್ಲೂ ಇಂತಹ ಯೋಜನೆ ಕಂಡಿಲ್ಲ.  ತುಮಕೂರು ವಿವಿಯಲ್ಲಿ ಕೇವಲ ೫ ರೂಪಾಯಿಗೆ ಮಕ್ಕಳಿಗೆ ಊಟ ಕೊಡುತ್ತಿರುವುದು ಮಾದರಿಯಾಗಿದೆ ಎಂದು ಪ್ರಶಂಸಿಸಿದರು.

ಈ ವೇಳೆ ಯೋಜನೆ ಕುರಿತು ರಾಜ್ಯಪಾಲರಿಗೆ ವಿವರಿಸಿದ ಪಾವಗಡ ರಾಮಕೃಷ್ಣ ಸೇವಾಶ್ರಮದ ಮುಖ್ಯಸ್ಥರಾದ ಸ್ವಾಮಿ ಜಪಾನಂದಜೀ ಹಾಗೂ ಕುಲಪತಿ ಪ್ರೊ.ಎಂ.ವೆoಕಟೇಶ್ವರಲು ಅವರು ಕಳೆದ ಮೂರು ವರ್ಷಗಳಿಂದ ದಾನಿಗಳ ಸಹಕಾರ, ಸಮಿತಿ ಸದಸ್ಯರ ನಿಸ್ಪೃಹ ಕಾರ್ಯ ಬದ್ಧತೆಯಿಂದಾಗಿ ಯೋಜನೆ ಅನೂಚಾನವಾಗಿ ನಡೆದುಬಂದಿದ್ದು, ಪ್ರಸಕ್ತ ಊಟದ ಯೋಜನೆ ಪ್ರಯೋಜನ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ  ೪೦೦೦ಕ್ಕೆ ವಿಸ್ತರಣೆಯಾಗಿದೆ. ವಿವಿಯ ನೂತನ ಜ್ಞಾನಸಿರಿ ಕ್ಯಾಂಪಸ್‌ನ ವಿದ್ಯಾರ್ಥಿಗಳಿಗೂ ಊಟ ವಿತರಿಸುತ್ತಿದ್ದು, ದೂರದ ಊರುಗಳಿಂದ ಬೆಳಿಗ್ಗೆ ಹಸಿದು ಬರುವ ವಿದ್ಯಾರ್ಥಿಗಳಿಗೆ ಬಿಸಿಯೂಟ ಅನುಕೂಲವಾಗಿದೆ ಎಂದರು.

ಅನ್ನಪೂರ್ಣೆಶ್ವರಿ ಆಹಾರ ಸಮಿತಿ ಸದಸ್ಯರಾದ ಡಾ. ಎಸ್.ನಾಗಣ್ಣ , ಡಾ.ಎಚ್.ಜಿ.ಚಂದ್ರಶೇಖರ್, ಡಾ.ರಮೇಶ್‌ಬಾಬು, ನಟರಾಜಶೆಟ್ಟಿ, ಕುಲಸಚಿವರುಗಳು, ಕಾಲೇಜಿನ ಪ್ರಾಂಶುಪಾಲೆ ಪ್ರೊ.ದ್ರಾಕ್ಷಾಯಿಣಿ, ಹಾಜರಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ