LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಗರ್ಭಿಣಿ ಪ್ರಕರಣಗಳ ತಡೆಗಟ್ಟಲು ಸಹಾಯವಾಣಿ 1098, “ಅಕ್ಕಾ ಪಡೆ”


ಬೆಂಗಳೂರು,ಆಗಸ್ಟ್ 13 (ಕರ್ನಾಟಕ ವಾರ್ತೆ)


ಬಾಲಗರ್ಭಿಣಿ ಪ್ರಕರಣಗಳನ್ನು ತಡೆಗಟ್ಟಲು ಮಕ್ಕಳ ಸಹಾಯವಾಣಿ 1098 ಸಂಖ್ಯೆ 24/7 ಮಕ್ಕಳ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿದೆ. ಮಕ್ಕಳ ರಕ್ಷಣೆಗಾಗಿ ಕೆಲವು ಜಿಲ್ಲೆಗಳಲ್ಲಿ “ಅಕ್ಕಾ ಪಡೆ”ಯನ್ನು ರಚಿಸಲಾಗಿದೆ.  ಕೆಲವು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಅಕ್ಕಾಪಡೆಯು ಕಾರ್ಯಚರಣೆ ಕೆಲಸ ಪ್ರಾರಂಭಿಸಿದೆ. ಆಗಸ್ಟ್ 15 ರಿಂದ ಇಡೀ ರಾಜ್ಯದಲ್ಲಿ ಅಕ್ಕಾ ಪಡೆಯು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್  ಅವರು ತಿಳಿಸಿದರು.


ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಸದಸ್ಯರಾದ  ಸುರೇಶ್ ಬಾಬು ಇವರ ಚುಕ್ಕೆ ಗುರುತಿನ ಪ್ರಶ್ನೆಗೆ  ಉತ್ತರಿಸಿದ  ಸಚಿವರು, ಬಾಲಗರ್ಭಿಣಿ ಪ್ರಕರಣಗಳನ್ನು ತಡೆಗಟ್ಟಲು ಮಕ್ಕಳ ಸಹಾಯವಾಣಿ 1098, 24*7 ಮಕ್ಕಳ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಸ್ವೀಕೃತವಾದರೂ ತಕ್ಷಣ ಮಗುವನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿರುತ್ತಾರೆ.  ಪ್ರತಿ ಜಿಲ್ಲೆಯಲ್ಲೂ ಮಕ್ಕಳ ಕಲ್ಯಾಣ ಸಮಿತಿ, ಬಾಲ ನ್ಯಾಯಮಂಡಳಿ, ಮಕ್ಕಳ ವಿಶೇಷ ಪೊಲೀಸ್ ಘಟಕ, ಮಕ್ಕಳ ಪಾಲನಾ ಸಂಸ್ಥೇ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು, ಪಾಲನೆ / ಪೋಷಣೆ ಅವಶ್ಯಕತೆ ಇರುವ ಮಕ್ಕಳು ಮತ್ತು ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳ ಪುನರ್ವಸತಿಗೋಸ್ಕರ ಕಾರ್ಯ ನಿರ್ವಹಿಸುತ್ತಿದೆ.  ಬಾಲ್ಯವಿವಾಹ ಪ್ರಕರಣಗಳನ್ನು ತಡೆಯುವ ತಾಲ್ಲೂಕು ಮಟ್ಟದ ಸಮನ್ವಯ ಹಾಗೂ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ಆಯಾ ತಾಲ್ಲೂಕು ತಹಸೀಲ್ದಾರರನ್ನು ಸರ್ಕಾರವು ನೇಮಿಸಿದೆ.  ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಗೃಹ  ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿದೆ ಎಂದು ತಿಳಿಸಿದರು.


ಆಸ್ಪತ್ರೆಗಳಲ್ಲಿ ದಾಖಲಾಗುವ ಗರ್ಭಿಣಿಯರ ಮಾಹಿತಿಯನ್ನು ಆರ್.ಸಿ.ಹೆಚ್. ಪೋರ್ಟಲ್ ನಲ್ಲಿ ದಾಖಲಿಸಲಾಗುತ್ತಿದೆ. ಸದರಿ ಪೋರ್ಟಲ್ ನಲ್ಲಿ ಗುರುತಿಸಲಾದ ಬಾಲ ಗರ್ಭಿಣಿಯ ಪ್ರಕರಣಗಳನ್ನು ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಿ ಕ್ರಮ ವಹಿಸಲಾಗುತ್ತಿದೆ. ಬಾಲಗರ್ಭಿಣಿಯ ಪೋಷಕರ ಒಟ್ಟಿಗೆ ಹೋಗಲು ಇಚ್ಛಿಸಿದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮಂಡಿಸಿ ಆದೇಶದಂತೆ ಪೋಷಕರ ವಶಕ್ಕೆ ನೀಡಲಾಗುತ್ತಿದೆ. ಬಾಲಗರ್ಭಿಣಿಯರು ಪುನರ್ವಸತಿ ಕೋರಿದ್ದಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಿಸಿ ಅವರಿಗೆ ರಕ್ಷಣೆ ಮತ್ತು ಪೋಷಣೆಯನ್ನು ನೀಡಲಾಗುತ್ತಿದೆ. ಬಾಲಗರ್ಭಿಣಿಯರು ವಿದ್ಯಾಭ್ಯಾಸ ಮುಂದುವರೆಸಲು ಇಚ್ಛಿಸಿದಲ್ಲಿ ಶಾಲೆಗೆ ದಾಖಲಿಸಿ ವಿದ್ಯಭ್ಯಾಸವನ್ನು ಮುಂದುವರೆಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸದನದಲ್ಲಿ ತಿಳಿಸಿದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ