LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೈಪುಣ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಗೆ ಹೆಚ್ಚಿನ ಮಾನ್ಯತೆ: ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್

ಕರ್ನಾಟಕ ಸರ್ಕಾರವು ಶಿಕ್ಷಣವನ್ನು ಉದ್ಯಮಕ್ಕೆ ಹೊಂದಿಕೊಳ್ಳುವ ರೀತಿಯಲ್ಲಿ ರೂಪಿಸಲು ಕ್ರಮ ಕೈಗೊಂಡಿದೆ. ಕಳೆದ ವರ್ಷ ಆರಂಭಿಸಿದ ಶೈಕ್ಷಣಿಕ ಯೋಜನೆಯ ಮುಂದುವರಿಕೆ ಎಂಬoತೆ, ಶಿಷ್ಯವೃತ್ತಿ ಜೊತೆಯಾದ ವಿಶಿಷ್ಟ ಪದವಿ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಈಗ ಶಿಕ್ಷಣವನ್ನು ಉದ್ಯಮ ಉನ್ನತೀಕರಿಸಲು ಮತ್ತಷ್ಟು ಹೆಜ್ಜೆ ಇಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಬೆಂಗಳೂರು ನಗರದಲ್ಲಿ ನಡೆದ ಜಾಗತಿಕ ಮಹಿಳಾ ಉದ್ಯಮಶೀಲತೆ ಸಮ್ಮೇಳನ ಸಮಾರೋಪ ಕಾರ್ಯಕ್ರಮದಲ್ಲಿ ಹೇಳಿದರು.
ಸಚಿವರು ಮಾತನಾಡುವಾಗ, ಈ ಪದವಿ ಕಾರ್ಯಕ್ರಮವನ್ನು ನಾಲ್ಕು ಕ್ಷೇತ್ರಗಳಲ್ಲಿ ರೂಪಿಸಲಾಗಿದ್ದು ಲಾಜಿಸ್ಟಿಕ್ಸ್ ರಿಟೇಲ್ ಇ ಕಾಮರ್ಸ್ ಮತ್ತು ಬ್ಯಾಂಕಿoಗ್ ಮತ್ತು ಫೈನಾನ್ಸ್ನಲ್ಲಿ ಬಿಕಾಂ. ವಿದ್ಯಾರ್ಥಿಗಳು ಐದನೇ ಮತ್ತು ಆರನೇ ಸೆಮಿಸ್ಟರ್‌ಗಳಲ್ಲಿ ಉದ್ಯಮದಲ್ಲಿ ಶಿಷ್ಯ ವೇತನ ಪಡೆಯಲಿದ್ದಾರೆ. ಇದರಿಂದ ಅವರು ಉದ್ಯಮಗಳಿಗೆ ಸಿದ್ಧರಾಗುತ್ತಾರೆ ಎಂದು ತಿಳಿಸಿದರು. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ನೈಪುಣ್ಯಾಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ಪಠ್ಯಕ್ರಮವನ್ನು ಉದ್ಯಮದ ಅಗತ್ಯಗಳಿಗೆ ತಕ್ಕಂತೆ ಮಾಡಿಕೊಳ್ಳಲು, ಸರಕಾರ ಉದ್ಯಮಗಳೊಂದಿಗೆ ಸೇರಿಕೊಂಡು ಕೆಲಸ ಆರಂಭಿಸಿದೆ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಮಹಿಳಾ ಉದ್ಯಮಶೀಲರ ಸಂಖ್ಯೆಯಲ್ಲಿ ಕಂಡುಬರುತ್ತಿರುವ ಗಣನೀಯ ಏರಿಕೆ ಕುರಿತು ಮಾತನಾಡಿದ ಸಚಿವರು, ಪುರುಷಾಧಿಪತ್ಯದ ಸಮಾಜದಲ್ಲಿ ಮಹಿಳೆಯರು ಅಪಾರ ಯಶಸ್ಸು ಗಳಿಸುತ್ತಿರುವುದು ಖುಷಿಯ ವಿಷಯ ಎಂದು ಹೇಳಿದರು. ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಿoದ ಪದವಿ ಪಡೆಯುವ ಹುಡುಗಿಯರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಯಾವುದೇ ಶಿಕ್ಷಣ ಸಂಸ್ಥೆಯಲ್ಲಿಯಾದರೂ ಸುಮಾರು 70% ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡುತ್ತಿದ್ದಾರೆ, ಉನ್ನತ ಪದಕಗಳನ್ನು ಪಡೆದು ಹೊರ ಬರುತ್ತಿದ್ದಾರೆ ಎಂದು ತಿಳಿಸಿದರು.
ಇದು ಮುಂದೆಯೂ ಮುಂದುವರಿಯಲಿದೆ ಮತ್ತು ಇನ್ನಷ್ಟು ಮಹಿಳಾ ಉದ್ಯಮಶೀಲರು ಬರಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಮಹಿಳೆಯರ ಸಬಲಿಕರಣದ ದೃಷ್ಟಿಯಿಂದ ಇದು ಶ್ರೇಷ್ಠ ಬೆಳವಣಿಗೆಯಾಗಿದೆ. ಪಠ್ಯಕ್ರಮ ನಿಶ್ಚಿತವಾಗಿರದೆ ಸದಾ ನವೀಕರಿಸಬೇಕಾದ ಅವಶ್ಯಕತೆ ಇದೆ. ಇದಕ್ಕಾಗಿ ಉದ್ಯಮದ ಅಭಿಪ್ರಾಯಗಳು ಅತ್ಯಗತ್ಯ ಎಂದರು.
ಬೆoಗಳೂರು ನಗರವು ಈಗಾಗಲೇ ನಾವೀನ್ಯತೆಗಾಗಿ ಅಗತ್ಯ ಮೂಲಸೌಕರ್ಯಗಳನ್ನು ಹೊಂದಿದ್ದು, ಹಲವಾರು ಸ್ಟಾರ್ಟ್ಅಪ್‌ಗಳು ಮತ್ತು ಐಟಿ ಉದ್ಯಮಗಳ ಬೆಳವಣಿಗೆಯಿಂದ ಇದು ಸ್ಪಷ್ಟವಾಗಿದೆ. ಆದಾಗ್ಯೂ, ತಂತ್ರಜ್ಞಾನ ಕ್ಷಿಪ್ರವಾಗಿ ಮುಂದುವರಿಯುತ್ತಿರುವುದರಿoದ, ನಮ್ಮ ಶೈಕ್ಷಣಿಕ ಸಂಸ್ಥೆಗಳು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗಳಿಗೆ ಹೆಜ್ಜೆಗೂ ಹೆಜ್ಜೆ ಹಾಕಬೇಕಾಗಿದೆ ಎಂದು ಅವರು ಹೇಳಿದರು.
ಜಾಗತಿಕ ಮಹಿಳಾ ಉದ್ಯಮಶೀಲತೆ ಸಮ್ಮೇಳನದಲ್ಲಿ ವಿಶ್ವದ ವಿವಿಧ ಭಾಗಗಳಿಂದ ಬಂದ ಮಹಿಳೆಯರು ಭಾಗವಹಿಸಿದ್ದರು. ಈ ಸಮ್ಮೇಳನದ ಕುರಿತು ಮಾತನಾಡಿದ ಇಮರ್ಜ್ (ಇಂಜಿನಿಯರಿoಗ್ ಮ್ಯಾನುಫ್ಯಾಕ್ಚರರ್ಸ್ ಎಂಟರ್‌ಪ್ರನರ್ಸ್ ರಿಸೋರ್ಸ್ ಗ್ರೂಪ್) ಅಧ್ಯಕ್ಷೆ ರಾಧಿಕಾ ಶೆಟ್ಟಿ, ಈ ವೇದಿಕೆಯಿಂದ ಮಹಿಳೆಯರನ್ನು ವ್ಯಾಪಾರ ಕ್ಷೇತ್ರದಲ್ಲಿ ಇನ್ನಷ್ಟು ಸಬಲಗೊಳಿಸುವ ಅವಕಾಶ ಸಿಕ್ಕಿತು ಎಂದು ಹೇಳಿದರು.
ಇಮರ್ಜ್ ಸ್ಥಾಪಕಿ ಮತ್ತು ಮಾಜಿ ಅಧ್ಯಕ್ಷೆ ಉಮಾ ರೆಡ್ಡಿ ಮಾತನಾಡುತ್ತಾ, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಭಾಗವಹಿಸಲು ಇಮರ್ಜ್ ತೆಗೆದುಕೊಳ್ಳುತ್ತಿರುವ ಕಾರ್ಯಕ್ರಮಗಳನ್ನು ವಿವರಿಸಿದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ