LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ -ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ

ಶಿಡ್ಲಘಟ್ಟ : ಅಪರಾಧಗಳ ಸ್ವರೂಪ ಈಗ ಡಿಜಿಟಲ್ ರೂಪ ಪಡೆದಿದೆ, ಡಿಜಿಟಲ್ ಅರೆಸ್ಟ್ ಮೂಲಕ ಹೆದರಿಸಿ ಹಣ ಕೀಳುವ, ಮೋಸ ಮಾಡುವ ಕೃತ್ಯಗಳು ಹೆಚ್ಚಾಗಿವೆ. ಬಣ್ಣದ ಮಾತು ಹೇಳಿ ಅನೇಕ ರೀತಿಯಲ್ಲಿ ಮೋಸ ನಡೆಯುತ್ತಿದ್ದು ಈ ರೀತಿ ಕಾನೂನಿನಲ್ಲಿ ಯಾವುದೇ ರೀತಿಯ ಕ್ರಮ ಜರುಗಿಸುವುದಿಲ್ಲ ಎಂದು ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ತಿಳಿಸಿದರು.



ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲಾ ಕಾಲೇಜು ಆವರಣದಲ್ಲಿ ಆಯೋಜಿಸಿದ ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಂದು ಪೊಲೀಸ್‌ ಠಾಣೆಗಳ ಇ–ಬೀಟ್‌ ವ್ಯವಸ್ಥೆ ಅನ್ವಯ ವಿಂಗಡಿಸಲಾದ ಪ್ರದೇಶದಲ್ಲಿರುವ ಮನೆಗಳ ಪಟ್ಟಿ ಮಾಡಿಕೊಂಡು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಭೇಟಿ ನೀಡಿ, ಅಹವಾಲು ಆಲಿಸಲಿದ್ದಾರೆ. ಪೊಲೀಸರು ಮನೆ ಮನೆಗೆ ಭೇಟಿ ನೀಡುವುದರಿಂದ ಅಪರಾಧ ಪ್ರಕರಣಗಳನ್ನು ಕಡಿವಾಣ ಹಾಕಬಹುದು. ಜನರಲ್ಲಿ ಸುರಕ್ಷತಾ ಮನೋಭಾವವನ್ನು ಬೆಳೆಸಬಹುದು.ಪೊಲೀಸ್ ಇಲಾಖೆ ನೆರವು ಪಡೆಯುವ ವಿಧಾನ ಸೇರಿದಂತೆ ಇಲಾಖೆಯ ಸಮಗ್ರ ಸೇವೆಗಳ ಬಗ್ಗೆ ಅರಿವು ಮೂಡಿಸಲಾಗುವುದು. ಈ ಹಿಂದೆ ದೂರುದಾರರು ಠಾಣೆಗೆ ಬಂದು ದೂರು ನೀಡಿದಾಗ ಅದನ್ನು ದಾಖಲಿಸಿ ಮುಂದಿನ ಕ್ರಮಕ್ಕೆ ಮುಂದಾಗುತ್ತಿದ್ದರು, ಈಗ ಪೊಲೀಸರು ಸಾರ್ವಜನಿಕರ ಮನೆಗೆ ಹೋಗಿ ಅಹವಾಲು ಆಲಿಸುವ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆ ಸ್ನೇಹಮಯಿಯಾಗಿದೆ, ಪೊಲೀಸರು ಮನೆಗೆ ಬಂದಾಗ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಆರಕ್ಷಕ ಉಪ ನಿರೀಕ್ಷಕಿ ಶ್ಯಾಮಲ, ಮನೆಮನೆಗೆ ಪೊಲೀಸ್‌ ಭೇಟಿ ಕಾರ್ಯಕ್ರಮ ಯಶಸ್ವಿಯಾಗಬೇಕು ಎಂದಾದರೆ ಸಾರ್ವಜನಿಕರ ಸಹಕಾರ ಸಹಭಾಗಿತ್ವ ಅವಶ್ಯಕ. ಕಾನೂನು ವ್ಯವಸ್ಥೆ ಕಾಪಾಡಲು ಅಪರಾಧ ತಡೆಗಟ್ಟಲು ಪೊಲೀಸರೊಂದಿಗೆ ಕೈಜೋಡಿಸಿ. ಸಮಾಜದ ಸುರಕ್ಷತೆ ಹಾಗೂ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ, ಸಮಾಜದಲ್ಲಿ ಆಗಬಹುದಾದ ಅಪರಾಧ ಪ್ರಕರಣಗಳನ್ನು ತಡೆಗಟ್ಟಲಿದ್ದಾರೆ.
ಇದೇ ಸಂದರ್ಭದಲ್ಲಿ ಬಶೆಟ್ಟಹಳ್ಳಿಯನ್ನು ಮಾದರಿ ಪೊಲೀಸ್ ಗ್ರಾಮ ಎಂದು ಗುರುತಿಸಿ ಗ್ರಾಮದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದಿಸಿ ಪುಸ್ತಕಗಳನ್ನು ಓದುವಂತೆ ಪ್ರೇರೇಪಿಸಿ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದರು.

ಪೊಲೀಸ್ ಅಂದರೆ ಭಯವಲ್ಲ, ಭರವಸೆ ಎಂಬ ವಿಶ್ವಾಸವಿದ್ದರೆ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ. ಹೊಸ ಯೋಜನೆಯಡಿ ಪ್ರತಿ ದಿನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಜನರೊಂದಿಗೆ ಬೆರೆತು, ಜನರ ಸಮಸ್ಯೆಗಳನ್ನು ಆಲಿಸಿ, ತ್ವರಿತ ಪರಿಹಾರ ಕ್ರಮ ಕೈಗೊಳ್ಳುತ್ತಾರೆ. ಮಾದಕ ವಸ್ತು ಬಳಕೆ ಜಾಗತಿಕ ಸಮಸ್ಯೆಯಾಗಿದೆ. ಇಂದು ಲಕ್ಷಾಂತರ ಜನರು ಇಂತಹ ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ಮಾದಕ ವ್ಯಸನಮುಕ್ತ ಜಗತ್ತನ್ನು ನಿರ್ಮಾಣ ಮಾಡುವಲ್ಲಿ ಜನರ ಸಹಕಾರ ಅತ್ಯಗತ್ಯ.

- ಕುಶಲ್ ಚೌಕ್ಸೆ,ಜಿಲ್ಲಾ ವರಿಷ್ಠಾಧಿಕಾರಿ

ಈ ಸಂದರ್ಭದಲ್ಲಿ ಎ ಎಸ್ ಪಿ ಜಗನ್ನಾಥ್ ರೈ,ಡಿವೈಎಸ್ ಪಿ ಮುರಳೀಧರ್,ಸರ್ಕಲ್ ಇನ್ಸ್‌ಪೆಕ್ಟರ್ ಎಂ ಶ್ರೀನಿವಾಸ್,ಸಬ್ ಇನ್ಪೆಕ್ಟರ್ ಶ್ಯಾಮಲ,ವೇಣುಗೋಪಾಲ್,ಗ್ರಾಮ ಪಂಚಾಯತಿ ಅಧ್ಯಕ್ಷ ಡಿಬಿ ವೆಂಕಟೇಶ್, ತಾಪಂ ಮಾಜಿ ಅಧ್ಯಕ್ಷ ಬಿವಿ ನಾರಾಯಣಸ್ವಾಮಿ,ಗೌಡನಹಳ್ಳಿ ಮಂಜುನಾಥ್, ಶಿವಣ್ಣ,ಶಾಲಾ ಕಾಲೇಜು ಪ್ರಾಂಶುಪಾಲರು,ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಶಿಡ್ಲಘಟ್ಟ
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ