LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೃಚ್ಛಕಟಿಕ ನಾಟಕ ಬನ್ನಂಜೆ ಗೋವಿಂದಾಚಾರ್ಯರ ಅನುವಾದದಲ್ಲಿ ಪ್ರಯೋಗಿಸುತ್ತಿರುವುದು ಸಂತಸ ತಂದಿದೆ

ಕರ್ನಾಟಕ ರಾಜ್ಯದಲ್ಲಿ ತುಮಕೂರು ಕಲೆಯ ತವರೂರಿನಂತಿದೆ. ಹಾಗೆಯೇ ತುಮಕೂರು ಜಿಲ್ಲೆಯಲ್ಲಿ ಮೆಳೇಹಳ್ಳಿ ಕಲೆಯ ತವರೂರಾಗಿದೆ. ಇಲ್ಲಿ ನಿರಂತರವಾಗಿ ನಾಡಿನ ಎಲ್ಲ ಮೂಲೆಗಳಿಂದ ಕಲಾತಂಡಗಳು ಬಂದು ಪ್ರಯೋಗ ನೀಡಿ ಹೋಗುತ್ತಿರುವುದು ಬಹಳ ವಿಶೇಷ. ಇಂದು ದೃಶ್ಯರಂಗ ತಂಡ, ಬೆಂಗಳೂರು ಇವರು ಸಂಸ್ಕøತ ಮೂಲದ ಶೂದ್ರಕ ಕವಿಯ ಮೃಚ್ಛಕಟಿಕ ನಾಟಕವನ್ನು ಬನ್ನಂಜೆ ಗೋವಿಂದಾಚಾರ್ಯರ ಅನುವಾದದಲ್ಲಿ ಪ್ರಯೋಗಿಸುತ್ತಿರುವುದು ಸಂತಸದ ವಿಷಯ ಎಂದು ನಿವೃತ್ತ ಶಿಕ್ಷಕ ಪ್ರಸಾದ್ ಅಭಿಪ್ರಾಯಪಟ್ಟರು.



ದಿನಾಂಕ 11-07-2025ನೇ ಶುಕ್ರವಾರ ಸಂಜೆ 6.30ಕ್ಕೆ ಮೆಳೇಹಳ್ಳಿಯ ವಿ.ರಾಮಮೂರ್ತಿ ರಂಗಸ್ಥಲದಲ್ಲಿ ಕೇಂದ್ರ ಸಂಸ್ಕøತಿ ಸಚಿವಾಲಯದ ನೆರವಿನೊಂದಿಗೆ ಪ್ರಯೋಗ ಆಯೋಜಿಸಲಾಗಿತ್ತು. ಪ್ರೇಕ್ಷಕ ಗಣ್ಯರಾಗಿ, ನಿರ್ದೇಶಕರಾಗಿ ದಾಕ್ಷಾಯಿಣಿ ಭಟ್, ನಿವೃತ್ತ ಶಿಕ್ಷಕ ನಟರಾಜು, ದೇಸಿ ರಂಗನಿರ್ದೇಶಕ ಮೆಳೇಹಳ್ಳಿ ದೇವರಾಜ್ ಹಾಗೂ ಮುದ್ದುರಂಗಪ್ಪ ಉಪಸ್ಥಿತರಿದ್ದರು.

ಬೌದ್ಧ ಧರ್ಮದ ಪ್ರಭಾವವಿರುವ ಕವಿ, ಹೆಣ್ಣು, ಹೊನ್ನು, ಅಧಿಕಾರಕ್ಕಿಂತ ಪ್ರೀತಿ, ವಿಶ್ವಾಸ, ನಂಬಿಕೆಗಳು ಧೀರ್ಘವಾಗಿ ಉಳಿಸುತ್ತಿವೆ ಮತ್ತು ಮನುಷ್ಯನನ್ನು ಉಳಿಸುತ್ತವೆ. ಆಸೆ ಒಂದು ಆಟದ ಬಂಡಿಯಂತೆ. ಅದನ್ನು ನಿಯಂತ್ರಿಸುವ ಹೊಣೆ ಚಾಲಕನದೇ. ಧರ್ಮದ ಪರವಾದವನಿಗೆ ಜಯ ದೊರಕೇ ದೊರಕುತ್ತದೆ ಎಂಬುದನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ. ನಿರ್ದೇಶಕರು ಹೆಚ್ಚು ರಂಗಸಜ್ಜಿಕೆ, ಪರಿಕರಗಳನ್ನು ಬಳಸದೇ ನಟರನ್ನೇ ದುಡಿಸಿಕೊಂಡು ಕಟ್ಟಿಕೊಟ್ಟಿದ್ದಾರೆ. ಪ್ರಯೋಗ ಮರುಪ್ರಯೋಗಗೊಳ್ಳಲೆಂದು ಆಶಿಸೋಣ.

ಡಮರುಗ ಉಮೇಶ್

 

 


 
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ