LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಗತ್ತಿನ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ ಭಾರತ- ಪ್ರಲ್ಹಾದ್ ಜೋಶಿ

ಶೀಘ್ರವೇ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗುವ ವಿಶ್ವಾಸ


ಬೆಂಗಳೂರು: ಭಾರತವು ಇದೀಗ ಜಗತ್ತಿನ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ 11 ವರ್ಷಗಳ ಸಾಧನೆ ಸಂಬಂಧ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಟ್ರಿಲಿಯನ್ ದೇಶವಾಗಲು ಸುಮಾರು 30-40 ವರ್ಷ ಬೇಕಾಯಿತು. 2 ಟ್ರಿಲಿಯನ್ ದೇಶವಾಗಲು ಸುಮಾರು 62-63 ವರ್ಷವೇ ಬೇಕಾಯಿತು. ಸ್ಥಿರತೆಯ ಪರಿಣಾಮವಾಗಿ 2 ಟ್ರಿಲಿಯನ್‍ನಿಂದ 4 ಟ್ರಿಲಿಯನ್ ಗೂ ಹೆಚ್ಚು ಸಾಧನೆ ಮಾಡಿದ್ದೇವೆ ಎಂದು ವಿವರಿಸಿದರು. ಸ್ಥಿರ ಸರಕಾರದ ಪರಿಣಾಮವಾಗಿ ಸಮರ್ಥ ಸರಕಾರ- ಆಡಳಿತ ನೀಡಲು ಸಾಧ್ಯವಾಗಿದೆ. ಸ್ಥಿರ ಸರಕಾರವು ಎಲ್ಲ ಕ್ಷೇತ್ರಗಳಲ್ಲಿ ಸಾಧನೆಗೆ ಕಾರಣವಾಗಿದೆ ಎಂದು ವಿಶ್ಲೇಷಿಸಿದರು.


ರಕ್ಷಣಾ ವ್ಯವಸ್ಥೆಯ ಸುಧಾರಣೆ
ರಕ್ಷಣಾ ವ್ಯವಸ್ಥೆಯ ಸುಧಾರಣೆಯೂ ಪ್ರಮುಖ ಸಂಗತಿ. ರಕ್ಷಣಾ ವಿಭಾಗದ ಮುಖ್ಯಸ್ಥರ ಹುದ್ದೆ (ಸಿಡಿಎಸ್) ಕುರಿತಂತೆ ನಿರ್ಧರಿಸಲಾಗದ ಸರಕಾರ ಹಿಂದೆ ನಮ್ಮಲ್ಲಿತ್ತು. ಗಡಿ ಭಾಗದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಮಾಡಿದರೆ ಅದನ್ನು ನಮ್ಮ ಶತ್ರು ದೇಶಗಳು ಬಳಸಿಕೊಳ್ಳುತ್ತವೆ ಎಂದು ಅಂತೋಣಿಯವರು ಸಂಸತ್ತಿನಲ್ಲೇ ಅಧಿಕೃತ ಹೇಳಿಕೆ ನೀಡಿದ್ದರು. ಗಡಿ ಭಾಗದ ಮೂಲಸೌಕರ್ಯದಿಂದ ಸಿಡಿಎಸ್ ವರೆಗೆ ಸಮರ್ಥ ನಿರ್ಧಾರ ಮಾಡಿದ್ದೇವೆ. ಸಿಡಿಎಸ್ ಪರಿಣಾಮವಾಗಿ ಆಪರೇಷನ್ ಸಿಂದೂರ, ಈ ಕಾರ್ಯಾಚರಣೆ ಬಳಿಕ ಪಾಕಿಸ್ತಾನದ ನಡವಳಿಕೆಗೆ ದಿಟ್ಟ ಉತ್ತರ ನೀಡಲು ಸಾಧ್ಯವಾಯಿತು ಎಂದು ಪ್ರಲ್ಹಾದ್ ಜೋಶಿ ಅವರು ಹೇಳಿದರು.
3 ರಕ್ಷಣಾ ದಳಗಳ ಸಮನ್ವಯತೆಯ ಮೂಲಕ ಭಯೋತ್ಪಾದನೆಗೆ ಸಂಬಂಧಿಸಿದ 9 ಸ್ಥಳಗಳನ್ನು ಗುರುತಿಸಿ ಅದೇ ಜಾಗಕ್ಕೆ ಕ್ಷಿಪಣಿ ದಾಳಿ ಮಾಡಲು ಸಾಧ್ಯವಾಗಿದೆ. ರಕ್ಷಣಾ ಕ್ಷೇತ್ರದ ಎಲ್ಲ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಈಗ ನಾವು 5 ಸಾವಿರ ಉತ್ಪನ್ನಗಳನ್ನು ಮೇಡ್ ಇನ್ ಇಂಡಿಯ, ಮೇಕ್ ಇನ್ ಇಂಡಿಯದಲ್ಲಿ ಉತ್ಪಾದಿಸುತ್ತಿದ್ದೇವೆ. 25 ಸಾವಿರ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಮತ್ತಿತರ ಉತ್ಪನ್ನಗಳನ್ನು ರಫ್ತು ಮಾಡಿದ್ದು, ಈ ದೇಶದಲ್ಲಿ ಇದೇ ಮೊದಲು ಎಂದು ನುಡಿದರು.

ಕಡು ಬಡತನ ಪ್ರಮಾಣವು ಶೇ 21ರಿಂದ ಶೇ 5ಕ್ಕೆ ಇಳಿದಿದೆ. 26 ಕೋಟಿ ಜನರು ಕಡು ಬಡತನ ರೇಖೆಯಿಂದ ಹೊರಕ್ಕೆ ಬಂದಿದ್ದಾರೆ. ಇದು ಭಾರತದ ಏಜೆನ್ಸಿಗಳ ಅಂಕಿ ಅಂಶವಲ್ಲ; ಇದು ವಿಶ್ವ ಬ್ಯಾಂಕಿನ ಅಂಕಿ ಅಂಶಗಳು ಎಂದು ಸ್ಪಷ್ಟಪಡಿಸಿದರು. ಸಮರ್ಥ ನಾಯಕತ್ವ, ಸ್ಥಿರ ಸರಕಾರದ ಪರಿಣಾಮವಾಗಿ ದೇಶದ ರಕ್ಷಣಾ ವ್ಯವಸ್ಥೆ ಬಗ್ಗೆ ಕೂಡ ನಿರ್ದಿಷ್ಟ- ದಿಟ್ಟ ಹೆಜ್ಜೆ ಇಟ್ಟಿದ್ದೇವೆ ಎಂದು ವಿವರ ನೀಡಿದರು. ಇದಕ್ಕೆ ಇತ್ತೀಚಿನ ಆಪರೇಷನ್ ಸಿಂದೂರ ಒಂದು ಉದಾಹರಣೆ ಎಂದು ತಿಳಿಸಿದರು.
ಶೂನ್ಯತೆಯತ್ತ ಭಯೋತ್ಪಾದನಾ ಕೃತ್ಯಗಳು..
ದೇಶದ ಗಡಿ ಪ್ರದೇಶ ಹೊರತುಪಡಿಸಿ ಇತರೆಡೆಗಳಲ್ಲಿ ಭಯೋತ್ಪಾದನಾ ಕೃತ್ಯಗಳು ಬಹುತೇಕ ಶೂನ್ಯವಾಗಿವೆ. ಕಾಶ್ಮೀರದಲ್ಲಿ ಇಂಥ ಘಟನೆಗಳು ನಡೆಯುತ್ತಿವೆ. ಅವುಗಳಿಗೆ ಅತ್ಯಂತ ಪ್ರಖರ- ಸ್ಪಷ್ಟ ಉತ್ತರ ಕೊಟ್ಟಿದ್ದೇವೆ ಎಂದು ಹೇಳಿದರು. ನೇಪಾಳದ ಪಶುಪತಿಯಿಂದ ತಿರುಪತಿವರೆಗೆ ರೆಡ್ ಕಾರಿಡಾರ್ ಮೂಲಕ ಭಾರತದ ಆಡಳಿತವನ್ನು ನೆಲಕಚ್ಚಿಸುವ ತೀರ್ಮಾನ ಉಗ್ರರದ್ದಾಗಿತ್ತು. ಇವತ್ತು ದೇಶದಲ್ಲಿ ಶೇ 70ರಷ್ಟು ನಕ್ಸಲಿಸಂ ಕಡಿಮೆ ಆಗಿದೆ. 2026ರ ಮಾರ್ಚ್ ವೇಳೆಗೆ ಈ ದೇಶದಲ್ಲಿ ನಕ್ಸಲಿಸಂ ಅನ್ನು ಸಂಪೂರ್ಣವಾಗಿ ತೊಡೆದುಹಾಕುವ ಕುರಿತು ನಮ್ಮ ಗೃಹ ಸಚಿವರು ಪ್ರಕಟಿಸಿದ್ದಾರೆ ಎಂದು ವಿವರ ನೀಡಿದರು.

ಕೋವಿಡ್ ನಂತರದÀ ಬೆಳವಣಿಗೆ..
ಜಗತ್ತಿನ ಎಲ್ಲಿಯೇ ಭಾರತೀಯರಿಗೆ ತೊಂದರೆ ಆದರೆ, ಅವರನ್ನು ರಕ್ಷಿಸಿದ್ದೇವೆ. ರಷ್ಯಾ- ಉಕ್ರೇನ್ ಯುದ್ಧ, ಅಪsÀಘಾನಿಸ್ತಾನದ ಸಮಸ್ಯೆ ಆದಾಗ ನಮ್ಮ ಜನರನ್ನು ವಾಪಸ್ ಕರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಕೋವಿಡ್ ಸಂದರ್ಭದಲ್ಲಿ ಭಾರತದಲ್ಲಿ ಕೋಟ್ಯಂತರ ಜನರ ಸಾವು ಸಂಭವಿಸುವ ಹಾಗೂ ದೇಶವು ನೆಲಕಚ್ಚುವ ಮಾತುಗಳು ಕೇಳಿ ಬರುತ್ತಿದ್ದವು. ಮೋದೀಜೀ ಅವರ ಹೇಳಿಕೆಯಂತೆ, ಭಾರತವು ಕೋವಿಡೋತ್ತರ ದಿನಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುವ ದೇಶವಾಗಿ ಹೊರಹೊಮ್ಮಿದೆ; ಈಗಲೂ ಅದು ಮುಂದುವರೆದಿದೆ ಎಂದು ವಿಶ್ಲೇಷಿಸಿದರು.
140 ಕೋಟಿ ಜನರಿಗೆ 240 ಕೋಟಿಗಿಂತ ಹೆಚ್ಚು ಡೋಸ್ ಲಸಿಕೆ ಕೊಟ್ಟ ಏಕೈಕ ದೇಶ ಭಾರತ; ಇದಲ್ಲದೆ ರಫ್ತು ಮಾಡಲೂ ಸಾಧ್ಯವಾಗಿದೆ ಎಂದು ತಿಳಿಸಿದರು. ಭಾರತವು ಶೀಘ್ರವೇ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
2024ರಲ್ಲಿ ಡಿಜಿಟಲ್ ವ್ಯವಹಾರವು 24 ಲಕ್ಷ ಕೋಟಿಗೆ ಏರಿಕೆ ಕಂಡಿದೆ. ಇದರಲ್ಲಿ ಯುಪಿಐ ಖಾತೆಗಳ ಪಾಲು ಶೇ 83 ಎಂದರು. ಹಿಂದಿನ ಹಣಕಾಸು ಸಚಿವರು ಈ ವಿಷಯದಲ್ಲಿ ಮೋದಿಯವರನ್ನು ಗೇಲಿ ಮಾಡಿದ್ದರು. ಜನ್ ಧನ್, ಆಧಾರ್ ಮತ್ತು ಮೊಬೈಲ್ ಲಿಂಕ್ ಮೂಲಕ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಫಲಾನುಭವಿಗಳಿಗೆ 44 ಲಕ್ಷ ಕೋಟಿ ರೂಪಾಯಿ ಡಿಬಿಟಿ ಮೂಲಕ ನೇರವಾಗಿ ಖಾತೆಗೆ ವರ್ಗಾವಣೆ ಆಗುತ್ತಿದೆ ಎಂದು ಹೇಳಿದರು. ಇತರ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆ ಕುರಿತು ಅವರು ಮಾಹಿತಿ ನೀಡಿದರು.

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ಸಂಸದ ಪಿ.ಸಿ. ಮೋಹನ್, ರಾಜ್ಯಸಭಾ ಸದಸ್ಯ ಜಗ್ಗೇಶ್, ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಉಪಾಧ್ಯಕ್ಷ ರಾಜು ಗೌಡ ನಾಯಕ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಮತ್ತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಉಪಸ್ಥಿತರಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ