LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈರುಳ್ಳಿ ಕೈಗೆಟುಕುವ ಬೆಲೆಗೆ ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ

*ಈರುಳ್ಳಿ ಸಂಗ್ರಹ, ಕ್ರಯ-ವಿಕ್ರಯದ ಮೇಲೆ ಕೇಂದ್ರ ಕಣ್ಣು*

* ಆಹಾರ ಸಚಿವ ಪ್ರಲ್ಹಾದ ಜೋಶಿ ಸಮ್ಮುಖದಲ್ಲಿ ಸಭೆ, ಚರ್ಚೆ
* ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಈರುಳ್ಳಿ ಸುಲಭ ಲಭ್ಯತೆಗೆ ಕ್ರಮ

ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದಾರೆ.

ಸೆಪ್ಟೆಂಬರ್‌, ಅಕ್ಟೋಬರ್‌ ಮಾಹೆ ಹಾಗೂ ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಹರಿದಿನಗಳು ಇರುವುದರಿಂದ ಜನಸಾಮಾನ್ಯರಿಗೆ ʼಈರುಳ್ಳಿʼ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅಧಿಕಾರಿಗಳಿಗೆ ನಿರ್ದೇಶನ ಸಹ ನೀಡಿದ್ದಾರೆ.

*ಈರುಳ್ಳಿ ಕ್ರಯ-ವಿಕ್ರಯ ಸುಗಮಕ್ಕೆ ಮಾರ್ಗಸೂಚಿ:* ದೇಶದೆಲ್ಲೆಡೆ ಈರುಳ್ಳಿ ಸುಗಮ ಕ್ರಯ-ವಿಕ್ರಯಕ್ಕೆ ಮಾರ್ಗಸೂಚಿ ಹೊರಡಿಸುವಂತೆ ಸೂಚಿಸಿದ ಸಚಿವರು, ಉತ್ತಮ ಗುಣಮಟ್ಟದ ಈರುಳ್ಳಿ ಖರೀದಿ, ಸಂಗ್ರಹಣೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳ ತಂಡ ಎಲ್ಲಾ FPOಗಳು ಮತ್ತು FPCಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ಆದೇಶಿಸಿದರು.

ಈರುಳ್ಳಿ ಖರೀದಿಯಲ್ಲಿ ಪಾರದರ್ಶಕ ಮತ್ತು ಪರಿಣಾಮಕಾರಿ ಸಂಗ್ರಹಣೆ ಕುರಿತಂತೆ DOCAಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರಲ್ಲದೆ, ಈರುಳ್ಳಿ ಖರೀದಿ ಪ್ರಕ್ರಿಯೆ ಸುಗಮಗೊಳಿಸಲು ಮತ್ತು ವೈಜ್ಞಾನಿಕವಾಗಿ ಸಂಗ್ರಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

*ಪ್ರಾಥಮಿಕ ವರದಿ ಸಲ್ಲಿಕೆ:* ಪ್ರಸ್ತುತದಲ್ಲಿ ಈರುಳ್ಳಿ ಖರೀದಿ ಸ್ಥಿತಿಗತಿ ಪರಿಶೀಲನೆ, ಖರೀದಿ ಕೇಂದ್ರಗಳು ಮತ್ತು FPO/FPCಗಳ ಸಂಗ್ರಹಣಾ ಕೇಂದ್ರಗಳಿಗೆ ಪರಿಶೀಲನಾ ತಂಡಗಳು ಭೇಟಿ ನೀಡಿ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ ಎಂದಿರುವ ಸಚಿವರು, ಎಲ್ಲೆಡೆಯೂ ಗ್ರಾಹಕರಿಗೆ ಈರುಳ್ಳಿ ಸುಗಮವಾಗಿ ಲಭ್ಯವಾಗುವಂತೆ ಕಟ್ಟೆಚ್ಚರ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.

*ಮುನ್ನೆಚ್ಚರಿಕೆ ವಹಿಸಲು ಸಲಹೆ:*
ಹಬ್ಬಳಗಳು ಇರುವುದರಿಂದ ಹಾಗೂ ಎಲ್ಲೆಡೆ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರಿಳಿತ ಆಗುತ್ತಿರುತ್ತದೆ. ಅಲ್ಲದೇ, ಕೆಲ ವರ್ತಕರು ಅಗತ್ಯಕ್ಕಿಂತ ಹೆಚ್ಚು ದಾಸ್ತಾನು ಇರಿಸಿಕೊಳ್ಳುತ್ತಾರೆ. ಇದರಿಂದ ಸಹಜವಾಗಿ ಕೃತಕ ಅಭಾವ ಎದುರಾಗುತ್ತದೆ. ಹಾಗಾಗಿ ಅಧಿಕಾರಿಗಳ ತಂಡ ಇದೆಲ್ಲದರ ಮೇಲೆ ನಿಗಾ ವಹಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಸಲಹೆ ನೀಡಿದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ