LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಿರು ಹೊತ್ತಿಗೆಗಳ ಬರವಣಿಗೆಗೆ ಆಹ್ವಾನ – ಲೇಖಕರಿಗೆ ವಿಶಿಷ್ಟ ಅವಕಾಶ

ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ತನ್ನ ಪ್ರಸ್ತುತ ಸಾಲಿನ ಯೋಜನೆಯಲ್ಲಿ ಬಂಜಾರ ಸಮುದಾಯದ ಕಲೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯ ವಿವಿಧ ಆಯಾಮಗಳನ್ನು ದಾಖಲಿಸಲು ಉದ್ದೇಶಿಸಿರುವ ಮಹತ್ವದ ಯೋಜನೆಯ ಭಾಗವಾಗಿ, ಕನಿಷ್ಠ 25 ಪುಟಗಳ 100 ವಿಭಿನ್ನ ವಿಷಯಗಳಿಗೆ ಸಂಬಂಧಿಸಿದಂತೆ ಕೃತಿಗಳನ್ನು ಪ್ರಕಟಣೆ ಮಾಡಲು ಬಂಜಾರ ಅಕಾಡೆಮಿ ನಿರ್ಧರಿಸಿದೆ.


ಆರಂಭಿಕ ಹಂತದಲ್ಲಿ,  ಆಯ್ಕೆ ಸಮಿತಿಯ ಶಿಫಾರಸ್ಸು ಮೇರೆಗೆ 50 ಕಿರು ಹೊತ್ತಿಗೆಗಳ ರಚನೆಗಾಗಿ ಲೇಖಕರನ್ನು ಆಯ್ಕೆ ಮಾಡಲಾಗುವುದು.


ಈ ಯೋಜನೆಯ ಅಡಿಯಲ್ಲಿ ಲೇಖಕರು ತಮ್ಮ ಕೃತಿಗಳನ್ನು ಈ ಕೆಳಗಿನ ಪ್ರಮುಖ ವಿಷಯಗಳಲ್ಲಿ ರಚಿಸಬಹುದು:




  • ಬಂಜಾರ ಕಲಾ ಪರಂಪರೆ.

  • ಬಂಜಾರ ಭಾಷೆ ಮತ್ತು ಸಾಹಿತ್ಯ ಮೌಖಿಕ ಸಾಹಿತ್ಯ.

  • ಬಂಜಾರ ಜನಜೀವನ ಮತ್ತು ಸಂಪ್ರದಾಯಗಳು, ಆಚರಣೆಗಳು, ಹಬ್ಬಗಳು ಇತರೆ.

  • ಬಂಜಾರ ಸಮುದಾಯದ ಹಿರಿಯ ಸಾಧಕರು, ಸಾಹಿತಿಗಳು, ಕಲಾವಿದರು ಹಾಗೂ ತಜ್ಞರು, ರಾಷ್ಟ್ರ-ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತರು.

  • ಬಂಜಾರ ಹೋರಾಟಗಾರರು ಮತ್ತು ಪ್ರಮುಖ ಸಾಮಾಜಿಕ, ಸಾಂಸ್ಕೃತಿಕ ಪ್ರಮುಖ ಮುಖಂಡರು.

  • ಬಂಜಾರ ಪ್ರಮುಖ ಶ್ರದ್ಧಾ ಕೇಂದ್ರಗಳು.

  • ಬಂಜಾರ ಐತಿಹಾಸಿಕ ತಾಣಗಳು.

  • ಬಂಜಾರ ಸಮಾಜಶಾಸ್ತ್ರ,

  • ಬಂಜಾರ ಶಿಕ್ಷಣ.

  • ಬಂಜಾರ ನೃತ್ಯ,

  • ಬಂಜಾರ ಸಂಗೀತ,

  • ಬಂಜಾರ ನಾಟಕಗಳು ಹಾಗೂ ಪ್ರಯೋಗಗಳು ಮೊದಲಾದ ಕ್ಷೇತ್ರಗಳು.


ಈ ಅಕಾಡೆಮಿಯ ಮಹತ್ವದ ಕೆಲಸದಲ್ಲಿ ಲೇಖಕರು ಕೈಜೋಡಿಸಿ ಭಾಗವಹಿಸಲು ಕೋರುತ್ತೇನೆ. ಆಸಕ್ತ ಬಂಜಾರ ಹಾಗೂ ಇತರೆ ಲೇಖಕರು ತಮ್ಮ ಕೃತಿಗಳ ಶೀರ್ಷಿಕೆಗಳ, ಸಾರಾಲೇಖ ಹಾಗೂ ಸ್ವವಿವರಗಳನ್ನು ದಿನಾಂಕ:19.07.2025 ರ ಒಳಗಾಗಿ ಬಂಜಾರ  ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಕಚೇರಿಗೆ ನೊಂದಾಯಿಸಿಕೊಳ್ಳಲು ಅಥವಾ ಕಚೇರಿಗೆ ಖುದ್ದಾಗಿ ಅರ್ಚಿ ಸಲ್ಲಿಸಲು ಅಥವಾ ಅಂಚೆ, ಕೋರಿಯರ್‌ ಮೂಲಕ ಸ್ವವಿವರದೊಂದಿಗೆ ಹೆಸರನ್ನು ನೊಂದಾಯಿಸಿಕೊಳ್ಳಲು ಕೋರಿದೆ. ಯುವ ಬಂಜಾರ ಸಂಶೋಧಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಲೇಖಕರಿಗೆ ನಿಯಮಾನುಸಾರ ಗೌರವ ಸಂಭಾವನೆ ಪಾವತಿಸಲಾಗುವುದು.


ವಿಳಾಸ: ರಿಜಿಸ್ಟ್ರಾರ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಕನ್ನಡ ಭವನ , 1 ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560002


ಹೆಚ್ಚಿನ ಮಾಹಿತಿಗಾಗಿ   :  080-29917745

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ