LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಿಕೋದ್ಯಮ ಜನಪರವಾಗಿರಬೇಕು-ಸಿಎಂ

ಬೆಂಗಳೂರು: ಪ್ರಜಾಪ್ರಭುತ್ವದ 4 ನೇ ಅಂಗ ಎಂದು ಪರಿಗಣಿಸಲಾಗುವ ಪತ್ರಿಕೋದ್ಯಮವು ಯಾವುದೇ ಪಕ್ಷ ಪರ ನಿಲುವು ತಾಳದೇ ಜನಪರವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು,
ವಾರ್ತಾಸೌಧದಲ್ಲಿಂದು ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಪತ್ರಿಕಾ ದಿನಾಚರಣೆ 2025 ಹಾಗೂ ನಿಜ ಸುದ್ದಿಯಾಗಿ ಸಮರ ಸಂವಾದವನ್ನು ಉದ್ಘಾಟಿಸಿ ಪತ್ರಕರ್ತರು ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಪೂರ್ವದ ಪತ್ರಿಕೋದ್ಯಮ ಮತ್ತು ಇಂದಿನ ಪತ್ರಿಕೋದ್ಯಮದ ಸುದ್ದಿ ಪ್ರಸಾರದಲ್ಲಿ ಸಾಕಷ್ಟು ಬದಲಾವಣೆಯಾಗಿದೆ, ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚಿರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು, ಸಂವಿಧಾನದ ಮೌಲ್ಯಗಳು ಮತ್ತು ಸತ್ಯವನ್ನು ಮರೆಮಾಚುವ ಕೆಲಸ ಆಗಬಾರದು,
ಪತ್ರಕರ್ತರು ನಿರ್ಭೀತಿಯಿಂದ ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಬೇಕು, ಸುಳ್ಳು ಸುದ್ದಿ ಹರಡಿ ಮತ್ತೆ ಬದಲಾಯಿಸುವುದು ಇದ್ಯಾವ ರೀತಿಯ ಪತ್ರಿಕೋದ್ಯಮ ಎಂದು ಸಿಎಂ ಪ್ರಶ್ನಿಸಿದರು, ಯಾವುದೇ ಊಹಾಪೋಹಗಳಿಗೆ ಮಾಧ್ಯಮಗಳು ಆದ್ಯತೆ ನೀಡಬಾರದು, ಸುಳ್ಳು ಸುದ್ದಿ ಹರಡವುದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ, ತನಿಖೆ ಮಾಡಿ ಸುದ್ದಿ ಮಾಡಿ ಎಂದು ಕಿವಿಮಾತು ಹೇಳಿದ ಸಿಎಂ ಸುಳ್ಳು ಮತ್ತು ದ್ವೇಷದ ಸುದ್ದಿ ಹರಡುವವರ ವಿರುದ್ಧ ಕಾನೂನು ತರಲು ಮುಂದಾಗಿದ್ದೇವೆ ಎಂದು ಸಿಎಂ ಇದೇ ವೇಳೆ ತಿಳಿಸಿದರು,
ದ್ವೇಷ ಹರಡುವ ಪ್ರಯತ್ನಕ್ಕೆ ಯಾವುದೇ ಸಹಾಯ ಮಾಡಬಾರದು, ದೇಶದ ಆಡಳಿತ ಹಿಡಿದಿರುವವರ ಬಗ್ಗೆಯಾಗಲಿ ನನ್ನ ಪರವಾಗಿಯೂ ಮಾತನಾಡಬಾರುದ, ಸತ್ಯವನ್ನೇ ಪತ್ರಕರ್ತರು ಜನರ ಮುಂದಿಡಬೇಕು,ಎಲ್ಲರಿಗೂ ಸಮಾನವಾದ ಅವಕಾಶ ಇರುವಂತಹ ಸಮಾಜ ನಿರ್ಮಾನವಾಗಬೇಕು, ಮಾನವೀಯ ಸಮಾಜಬೇಕು, ಪರಸ್ಪರ ಪ್ರೀತಿಸುವಂತಹ ಸಮಾಜಬೇಕು ಎಂದು ಸಿಎಂ ಪ್ರತಿಪಾದಿಸಿದರು,
ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಊಹಾ ಪತ್ರಿಕೋದ್ಯಮ ಪ್ರತಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ ತಂದೊಡುತ್ತವೆ, ಮಾಧ್ಯಮ ಸ್ವತಂತ್ರವಾಗಿ ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು ಎಂದು ಸಿಎಂ ಹೇಳಿದರು,
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ