LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಮಸಮುದ್ರಂ : ಮನೆ ಕಳವು ಪ್ರಕರಣದ ಆರೋಪಿ ಬಂಧನ, ಮಾಲು ವಶ

ಕೆಜಿಎಫ್.: ಕಾಮಸಮುದ್ರಂ ಪೊಲೀಸರು ಕಾಮಸಮುದ್ರಂ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಕಳವು ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸಿ, ಆತನಿಂದ ಸುಮಾರು ರೂ.6,70,000/-(ರೂಪಾಯಿ ಆರು ಲಕ್ಷದ ಎಪ್ಪತ್ತು ಸಾವಿರ ಮಾತ್ರ) ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.



ಏ. 04 ರಂದು ದೂರುದಾರರಾದ ಪೊಲೇನಹಳ್ಳಿ ಗ್ರಾಮದ ಮುನಿವೆಂಕಟಪ್ಪ ಎಂಬುವರು ತನ್ನ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಕಾಮಮುದ್ರಂ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿ, ತನಿಖೆ ನಡೆಸಲಾಗುತ್ತಿತ್ತು. ಪ್ರಕರಣದಲ್ಲಿ ಆರೋಪಿ ಮತ್ತು ಮಾಲನ್ನು ಪತ್ತೆ ಮಾಡಲು ಡಿವೈಎಸ್‌ಪಿ ಎಸ್.ಪಾಂಡುರAಗ ಅವರ ಮಾರ್ಗದರ್ಶನದಲ್ಲಿ ಕಾಮಸಮುದ್ರಂ ಸಿಪಿಐ ಜಿ.ಸಿ.ನಾರಾಯಣಸ್ವಾಮಿ ಮತ್ತು ಪಿಎಸ್‌ಐ ಕಿರಣ್‌ಕುಮಾರ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು.

ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಗಾರಪೇಟೆ ತಾಲ್ಲೂಕು ಶಿವಲಿಂಗ ಗ್ರಾಮದ ವಾಸಿ ಚಂದ್ರಪ್ಪ (48 ವರ್ಷ) ಎಂಬುವರನ್ನು ಬಂಧಿಸಿ, ಆತನಿಂದ ಕಾಮಸಮುದ್ರಂ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಯ ಒಟ್ಟು ಎರಡು ಪ್ರಕರಣಗಳಲ್ಲಿ ಕಳ್ಳತನ ಮಾಡಲಾಗಿದ್ದ ರೂ.6,70,000/- ಮೌಲ್ಯದ 69 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಕಾಮಸಮುದ್ರಂ ಪಿ.ಎಸ್.ಐ ಬಿ.ವಿ.ಕಿರಣ್‌ಕುಮಾರ್, ವಿಶೇಷ ಅಪರಾಧ ಪತ್ತೆ ತಂಡದ ಸಿಬ್ಬಂದಿಗಳಾದ ಮಂಜುನಾಥರೆಡ್ಡಿ, ಮುನಾವರ್‌ಪಾಷ, ರಾಮರಾವ್, ರಾಮಕೃಷ್ಣಾರೆಡ್ಡಿ, ಮಂಜುನಾಥ, ಮಾರ್ಕೊಂಡ, ಲಕ್ಷö್ಮಣತೇಲಿ ಹಾಗೂ ಜೀಪ್ ಚಾಲಕ ಗುರುಮೂರ್ತಿ ರವರ ಉತ್ತಮ ಕೆಲಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾAತರಾಜು ಅವರು ಪ್ರಶಂಶಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ