LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Banjara Film Board: ಬಂಜಾರ ಚಲನಚಿತ್ರ ಮಂಡಳಿ ಉದ್ಘಾಟನೆ, ಸೂಕ್ತ ಪ್ರೋತ್ಸಾಹ ನೀಡಲು ಸಿಎಂ ಸಿದ್ದರಾಮಯ್ಯಗೆ ಮನವಿ

ಕರ್ನಾಟಕ ಬಂಜಾರ ಚಲನಚಿತ್ರ ಮಂಡಳಿಯು (Karnataka Banjara Film Board) ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿತು. ಬೆಂಗಳೂರಿನಲ್ಲಿ ಭಾನುವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಮಂಡಳಿಯು ಉದ್ಘಾಟನೆಗೊಂಡಿತು. ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ (Karnataka Banjara Cultural & Language Academy) ಅಧ್ಯಕ್ಷರಾದ ಡಾ. ಎ. ಆರ್. ಗೋವಿಂದಸ್ವಾಮಿ (Dr. Govinda Swamy AR) ಅವರು ಮಂಡಳಿಯನ್ನು ಉದ್ಘಾಟಿಸಿದರು. ಮಂಡಳಿಯ ಉದ್ಘಾಟನಾ ಸಮಾರಂಭದ ಅಂಗವಾಗಿ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ ಮಾತನಾಡಿದ ಗೋವಿಂದಸ್ವಾಮಿ ಅವರು ಹೊಸದಾಗಿ ಜಾರಿಗೆ ಬಂದಿರುವ ಕರ್ನಾಟಕ ಬಂಜಾರ ಚಲನಚಿತ್ರ ಮಂಡಳಿಗೆ ಶುಭ ಕೋರಿದರು. ಭಾರತೀಯ ಕರ್ನಾಟಕ ಬಂಜಾರ ಸಿನಿಮಾ ಆರಂಭವಾಗಿ ರಜತ ಮಹೋತ್ಸವ ಕಾಣುತ್ತಿದೆ. ಬಂಜಾರ ಸಾಹಿತ್ಯ ಹಾಗೂ ಸಂಸ್ಕೃತಿ ಬೆಳವಣಿಗೆಗೆ ಅದ್ಭುತವಾದ ಅವಕಾಶವಿದ್ದು ಎಲ್ಲಾ ಕಲಾವಿದರು, ತಂತರಜ್ಞರು ಈ ಅವಕಾಶ ಉಪಯೋಗಿಸಿಕೊಂಡು ಸಾಂಸ್ಕೃತಿಕ ರಾಯಭಾರಿಗಳಾಗಿ ಕೆಲಸ ಮಾಡಬೇಕು ಎಂದು ಕರೆ ಕೊಟ್ಟರು.



ಇಂದಿನ ಡಿಜಿಟಲ್‌ ಯುಗದಲ್ಲಿ ಹಾಗೂ ಕೃತಿಕ ಬುದ್ಧಿಮತ್ತೆ ಸಮ್ಮುಖದಲ್ಲಿ ನಾವಿದ್ದು, ಇದನ್ನು ನಾವು ಸಾಮಾಜಿಕ ಹಾಗೂ ಜನಪರ ಮಾಧ್ಯಮದ ಯುಗವಾಗಿಸಬೇಕಾದ ಅನಿವಾರ್ಯವಿದೆ. ಬಂಜಾರ ಅಕಾಡೆಮಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯಾಗಾರಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಮುಂದೆ ಆಯೋಜಿಸಲಿದೆ. ಬಂಜಾರ ಸಮುದಾಯದವರು (Banjara community) ಈ ಅವಕಾಶವನ್ನು ಬಳಸಿಕೊಂಡು ಸಾಂಸ್ಕೃತಿಕವಾಗಿ ಹಾಗೂ ಆರ್ಥಿಕವಾಗಿ ಪ್ರಬಲವಾಗಿ ಬೆಳೆಯಬೇಕು ಎಂದು ಗೋವಿಂದಸ್ವಾಮಿ ಆಶಿಸಿದರು.

ಬಂಜಾರ ಸಿನಿಮಾ ಹಾಗೂ ತಂತ್ರಜ್ಞರಿಗೆ ಪ್ರತ್ಯೇಕ ಸಬ್ಸಿಡಿ, ರಾಜ್ಯ ಪ್ರಶಸ್ತಿ ಹಾಗು ಬಂಜಾರ ಚಲನಚಿತ್ರಗಳ ಉತ್ಸವಕ್ಕೆ ಸೂಕ್ತ ಪ್ರಮಾಣದಲ್ಲಿ ಬಜೆಟ್ ಒದಗಿಸಿ, ಸಹಕಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರುವುದಾಗಿ ಗೋವಿಂದಸ್ವಾಮಿ ತಿಳಿಸಿದರು.

ಮಂಡಳಿಯ ಅಧ್ಯಕ್ಷರಾದ ಜೆ ಮಂಜುನಾಥ್, ಎನ್ ಅನಂತ ನಾಯ್ಕ್ ಪದಾಧಿಕಾರಿಗಳಾದ ಡಿ ಆರ್ ಗಿರೀಶ್, ವಿ ಚಂದ್ರಕಾಂತ್, ಆರ್ ಎನ್ ಶಶಿಕುಮಾರ್, ಎಸ್ ರಂಗನಾಥ್ ನಾಯ್ಕ್, ಶಶಿಕುಮಾರ್, ಬಂಜಾರ ನಟಿ ಅನು, ಕರಿಷ್ಮಾ, ಭೈರವಿ ಮತ್ತಿತತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ