LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯ ಮುಕ್ತ ವಿ.ವಿ. ಪ್ರವೇಶಾತಿ ಪ್ರಾರಂಭ

ಬೆಂಗಳೂರು, ಜೂನ್ 30, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ., ಬಿ.ಲಿಬ್.ಐ. ಎಸ್ಸಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಸ್ಸಿ., ಎಂ.ಲಿಬ್.ಐ. ಎಸ್ಸಿ. ಹಾಗೂ ಯುಜಿ/ PG Diploma ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ 2025 ರ ಜುಲೈ 1 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್  www.ksoumysuru.ac.in  ದಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳನ್ನು ನೀಡಲಾಗಿದೆ.

ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣ ಕ್ರಮಗಳಿಗೆ Online Admission Portal ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿದರೆ ಪ್ರವೇಶಾತಿ ಪೂರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಅಥವಾ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು.

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98805-26439 / 90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ