LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ನಗರ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವ: ರಾಜ್ಯಪಾಲರಿಂದ ಕಿವಿಮಾತು

"ವೈಯಕ್ತಿಕ ಜೀವನದ ಜೊತೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಮುಂದಾಗಿ"
ಬೆಂಗಳೂರು 11.06.2025: "ವಿದ್ಯಾವಂತ ಯುವಕರು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಬಹುದು. ನೀವು ಯಾವುದೇ ಕ್ಷೇತ್ರಕ್ಕೆ ಹೋದರೂ - ಅದು ವಿಜ್ಞಾನ ಕ್ಷೇತ್ರವಾಗಿರಲಿ, ತಂತ್ರಜ್ಞಾನ ಕ್ಷೇತ್ರವಾಗಿರಲಿ, ವ್ಯವಹಾರ, ಕಲೆ ಅಥವಾ ಸಮಾಜ ಸೇವೆಯ ಕ್ಷೇತ್ರವಾಗಿರಲಿ, ನಿಮ್ಮ ಪ್ರಯತ್ನಗಳಿಂದ ದೇಶವು ಪ್ರಗತಿ ಸಾಧಿಸುತ್ತದೆ" ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟತ್ ಅವರು ಹೇಳಿದರು.

ಬೆಂಗಳೂರಿನಲ್ಲಿ ನಡೆದ ಬೆಂಗಳೂರು ನಗರ ವಿಶ್ವವಿದ್ಯಾಲಯದ 4 ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮತಾನಾಡಿದರು. " ಮಹಾನ್ ವಿಜ್ಞಾನಿ ಮತ್ತು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಹೇಳಿದ್ದರು "ಕನಸು ಎಂದರೆ ನೀವು ಮಲಗಿರುವಾಗ ನೋಡುವುದಲ್ಲ, ಅದು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲ." ಎಂದು. ಕನಸುಗಳನ್ನು ನನಸಾಗಿಸಲು "ಶಿಕ್ಷಣವು ಅತ್ಯಂತ ದೊಡ್ಡ ಕೊಡುಗೆಯಾಗಿದೆ. ಶಿಕ್ಷಣವು ವ್ಯಕ್ತಿಯ ಜೀವನವನ್ನು ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತೆಗಳಿಂದ ತುಂಬುವ ನಿರಂತರ ಪ್ರಯಾಣವಾಗಿದೆ. ಶಿಕ್ಷಣವು ನಮಗೆ ಉದ್ಯೋಗದ ಜೊತೆಗೆ ನೈತಿಕತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ನೀಡುತ್ತದೆ" ಎಂದು ತಿಳಿಸಿದರು.

"ಯಾವುದೇ ರಾಷ್ಟ್ರದ ಅಭಿವೃದ್ಧಿಗೆ ಯುವ ಶಕ್ತಿಯೇ ಆಧಾರ ಎಂದು ಸ್ವಾಮಿ ವಿವೇಕಾನಂದರು ನಂಬಿದ್ದರು. ಅವರು ಯುವಕರನ್ನು ಸ್ವಾವಲಂಬಿ, ಧೈರ್ಯಶಾಲಿ ಮತ್ತು ಆತ್ಮವಿಶ್ವಾಸದಿಂದ ಕೂಡಿರಲು ಪ್ರೇರೇಪಿಸಿದರು. ವಿದ್ಯಾವಂತ ಯುವಕರು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಬಹುದು. ನೀವು ಯಾವುದೇ ಕ್ಷೇತ್ರಕ್ಕೆ ಹೋದರೂ - ಅದು ವಿಜ್ಞಾನ ಕ್ಷೇತ್ರವಾಗಿರಲಿ, ತಂತ್ರಜ್ಞಾನ ಕ್ಷೇತ್ರವಾಗಿರಲಿ, ವ್ಯವಹಾರ, ಕಲೆ ಅಥವಾ ಸಮಾಜ ಸೇವೆಯ ಕ್ಷೇತ್ರವಾಗಿರಲಿ, ನಿಮ್ಮ ಪ್ರಯತ್ನಗಳಿಂದ ದೇಶವು ಪ್ರಗತಿ ಸಾಧಿಸುತ್ತದೆ" ಎಂದು ಹೇಳಿದರು.

ಪ್ರಾಚೀನ ಕಾಲದಿಂದಲೂ ಭಾರತವು ಬೌದ್ಧಿಕ ಸಂಪತ್ತಿನಲ್ಲಿ ಶ್ರೀಮಂತವಾಗಿದೆ. ವೇದಕಾಲದಿಂದ ಇಂದಿನವರೆಗೆ, ಭಾರತೀಯರು ಎಲ್ಲಾ ಕ್ಷೇತ್ರಗಳಲ್ಲಿ ಅನುಪಮ ಜ್ಞಾನವನ್ನು ಗಳಿಸಿದ್ದಾರೆ. ಖಗೋಳಶಾಸ್ತ್ರದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳವರೆಗೆ, ಭಾರತೀಯರ ಕೊಡುಗೆ ಇಡೀ ಜಗತ್ತಿಗೆ ಮುಖ್ಯವಾಗಿದೆ. ಗಣಿತದಲ್ಲಿ ಶೂನ್ಯ ಮತ್ತು ದಶಮಾಂಶವನ್ನು ಭಾರತೀಯ ಗಣಿತಜ್ಞರು ಮತ್ತು ಖಗೋಳಶಾಸ್ತ್ರಜ್ಞರು ಕಂಡುಹಿಡಿದರು. ನಮ್ಮ ಪ್ರಾದೇಶಿಕ ಭಾಷೆಗಳಿಗೆ ಪ್ರಾಮುಖ್ಯತೆ ನೀಡುವ ಮೂಲಕ ನಾವು ಮತ್ತೆ "ವಿಶ್ವ ಗುರು" ಆಗಬಹುದು. ಈ ದಿಕ್ಕಿನಲ್ಲಿ ಕೆಲಸ ಮಾಡುತ್ತಾ, ಭಾರತ ಸರ್ಕಾರವು ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ, ಇದರಲ್ಲಿ ಸ್ಥಳೀಯ ಭಾಷೆ ಮತ್ತು ಮಾತೃಭಾಷೆಯನ್ನು ಪ್ರಮುಖ ಶಿಕ್ಷಣ ಮಾಧ್ಯಮವನ್ನಾಗಿ ಮಾಡುವತ್ತ ವಿಶೇಷ ಒತ್ತು ನೀಡಲಾಗಿದೆ. ಶಿಕ್ಷಣವನ್ನು ಹೆಚ್ಚು ಸಮಗ್ರ, ಪರಿಣಾಮಕಾರಿ ಮತ್ತು ಪ್ರಾಯೋಗಿಕವಾಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ಗುರಿಯಾಗಿದೆ. ರಾಷ್ಟ್ರೀಯ ಅಭಿವೃದ್ಧಿಗೆ ನಾಯಕತ್ವ ನೀಡುವುದು ನಿಮ್ಮ ಕರ್ತವ್ಯ. ನಿಮ್ಮ ಜ್ಞಾನ ಮತ್ತು ದೃಢಸಂಕಲ್ಪದ ಬಲದಿಂದ, ನಿಮ್ಮ ವೈಯಕ್ತಿಕ ಜೀವನದ ಜೊತೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ನೀವು ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಮಾರಂಭದಲ್ಲಿ ಪಾಟ್ನಾ ಹೈಕೋರ್ಟ್‌ನ ಗೌರವಾನ್ವಿತ ನ್ಯಾಯಾಧೀಶರಾದ ನ್ಯಾಯಮೂರ್ತಿ ಪಿ.ಬಿ. ಬಜಂತ್ರಿ, ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಕೆ.ಆರ್. ಜಲಜಾ ಭಾಗವಹಿಸಿದ್ದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ