LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

'ಕೂಡ್ಲಿಗಿ ವಿಸ್ಮಯ' ಅಭಿವೃದ್ಧಿ ಪತ್ರಿಕೋದ್ಯಮ ಕೃತಿ ಬಿಡುಗಡೆ*

ಬೆಂಗಳೂರು: ಸುದ್ದಿ ಗುರುತಿಸುವ ಚಾಕಚಕ್ಯತೆ ವರದಿಗಾರರಲ್ಲಿದ್ದಾಗ ಗ್ರಾಮೀಣ ಪರಿಸರದ ವಿಶೇಷ ವರದಿಗಳು ಕೂಡಾ ಹಲವಾರು ಬಾರಿ ರಾಜ್ಯಮಟ್ಟದ ಚಿಂತನೆಗೆ ಪೂರಕವಾಗುತ್ತದೆ ಎಂದು ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಅಭಿಪ್ರಾಯಪಟ್ಟರು.


ಕರ್ನಾಟಕ‌ ಕಾರ್ಯನಿರತ ಪತ್ರಕರ್ತರ ಸಂಘದ (ಕೆ.ಯೂ.ಡಬ್ಲ್ಯೂ.ಜೆ) ಆಶ್ರಯದಲ್ಲಿ ನಡೆದ ಪತ್ರಕರ್ತ ಭೀಮಣ್ಣ ಗಜಾಪುರ ಅವರು ರಚಿಸಿದ 'ಕೂಡ್ಲಿಗಿ ವಿಸ್ಮಯ-ಅಭಿವೃದ್ಧಿ ಪತ್ರಿಕೋದ್ಯಮ" ಎಂಬ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಪರ್ತಕರ್ತರೂ ತಂತ್ರಜ್ಞಾನದ ಬೆಳವಣಿಗೆಗೆ ತಕ್ಕಂತೆ ಇವತ್ತಿನ ಕಾಲಘಟ್ಟಕ್ಕೆ ತಮ್ಮ ಬುದ್ದಿಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದರು. ಪತ್ರಿಕೋದ್ಯಮವನ್ನು ನಾವು ಅವಸರದ ಸಾಹಿತ್ಯ ಎಂದೇ ಪರಿಗಣಿಸಿದ್ದೇವೆ, ಆದರೆ ಪತ್ರಿಕೆಯ ವಿಶೇಷ ವರದಿಗಳು ಅಂತ್ಯವಲ್ಲದ ಸಾಹಿತ್ಯ ಎಂದು ಅವರು ಹೇಳಿದರು.


ಇಂದಿನ ಪತ್ರಿಕೋದ್ಯಮವು ಬದಲಾವಣೆಯ ತಂತ್ರಜ್ಞಾನಕ್ಕೆ ತಕ್ಕಂತೆ ವೇಗವಾಗಿ ಸಾಗುತ್ತಿದೆ. ಹಾಗಾಗಿ ಪತ್ರಕರ್ತರೆಲ್ಲರೂ ವೇಗದ ಆ ಬೆಳವಣಿಗೆಗೆ ತಕ್ಕಂತೆ ವೃತ್ತಿಯಲ್ಲಿ ಹೊಂದಿಕೊಳ್ಳುವ ಅಗತ್ಯವಿದೆ ಎಂದರು. ಗ್ರಾಮೀಣ ಮಟ್ಟದ ಪತ್ರಕರ್ತರ ಸಾಮಥ್ಯ೯ವನ್ನು ಗುರುತಿಸಿ ಮುನ್ನೆಲೆಗೆ ತರುತ್ತಿರುವ ನಿಟ್ಟಿನಲ್ಲಿ ತಗಡೂರು ಅವರ ನೇತೃತ್ವದ ಕೆ.ಯೂ.ಡಬ್ಲ್ಯೂ.ಜೆ ತಂಡ ಮಾಡುತ್ತಿರುವ ಕಾರ್ಯವು ನಿಜಕ್ಕೂ ಶ್ಲಾಘನೀಯ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಗ್ರಾಮೀಣ ಸಮಸ್ಯೆಗಳಿಗೆ ಕನ್ನಡಿಯಂತಿರುವ ವಿಶೇಷ ವರದಿಗಾರಿಕೆ ಕೂಡಾ ಇಂದು ಪತ್ರಿಕೋದ್ಯಮಕ್ಕೆ ಅತ್ಯಗತ್ಯ. ಸುದ್ದಿಯ ವಿವಿಧ ಆಯಾಮಗಳನ್ನು ಕಂಡುಕೊಳ್ಳುವಲ್ಲಿ ಭೀಮಣ್ಣ ಗಜಾಪುರ ಅವರು ನಿಜಕ್ಕೂ ನಿಷ್ಣಾತರು ಎಂಬುದನ್ನು ಅವರ ಈ ಕೃತಿ ತಿಳಿಸಿಕೊಡುತ್ತದೆ ಎಂದರು.

ಭಾರತೀಯ ಕಾರ್ಯನಿರತ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮಾತನಾಡಿ, ಪತ್ರಕರ್ತರಲ್ಲಿ ವಿಷಯಗಳಿಗೆ ಪೂರಕವಾಗಿ ಅಧ್ಯಯನಶೀಲತೆ ಹೆಚ್ಚಾದ್ದಲ್ಲಿ ಮಾತ್ರ ವೃತ್ತಿಯಲ್ಲಿ ಯಶಸ್ಸು ಸಾಧ್ಯ ಎಂದರು. ಕೆಯೂಡಬ್ಲ್ಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್ ಮಾತನಾಡಿ,

ಪತ್ರಕರ್ತ ಭೀಮಣ್ಣ ಗಜಾಪುರ ಸ್ವಸಾಮಥ್ಯ೯ದಿಂದ ವೃತ್ತಿಯಲ್ಲಿ ಗುರುತಿಸಿಕೊಂಡವರು ಎಂದರು. ಕೃತಿಯ ಕರ್ತೃ ಭೀಮಣ್ಣ ಗಜಾಪುರ ಮಾತನಾಡಿ, ತಾನು ಶಿಕ್ಷಕ ವೃತ್ತಿಯನ್ನು ತ್ಯಜಿಸಿ, ಸಮಾಜದ ವ್ಯವಸ್ಥೆಗೆ ಪೂರಕವಾಗಿರುವ ಪತ್ರಿಕೋದ್ಯಮ ವೃತ್ತಿ ಆಯ್ಕೆ ಮಾಡಿಕೊಂಡಿರುವ ಕಾರಣ ಬಹಳಷ್ಟು ಅನುಭವ ಪಾಠವನ್ನು ಕಲಿಯುವಂತಾದೆ ಎಂದರು. ಇದೇ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನೂ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಕೆ.ಯೂ.ಡಬ್ಲ್ಯೂ.ಜೆ ಕಾರ್ಯದರ್ಶಿ ಮತ್ತೀಕೆರೆ ಜಯರಾಮ, ರಾಜ್ಯ ಕಾರ್ಯದರ್ಶಿ ಸೋಮಶೇಖರ ಕೆರೆಗೋಡು ಸ್ವಾಗತಿಸಿ, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ ವೇದಿಕೆಯಲ್ಲಿದ್ದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಸ್. ಸೋಮಶೇಖರ ಗಾಂಧಿ, ಆರ್. ದೇವರಾಜ್, ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಸತ್ಯನಾರಾಯಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಉಪಾಧ್ಯಕ್ಷರಾದ ಎನ್. ಶ್ರೀನಾಥ್, ಕೆ.ಎಂ.‌ ಜಿಕ್ರಿಯಾ, ಕಾರ್ಯದರ್ಶಿ ಬಸವರಾಜು, ಸಮಿತಿ ಸದಸ್ಯ‌ ಎ.ಬಿ. ಶಿವರಾಜು ಸೇರಿದಂತೆ ಹಲವು ಸದಸ್ಯರು, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ರಮೇಶ್ ಮತ್ತು ಕೂಡ್ಲಿಗಿ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಭಾಗವಹಿಸಿದ್ದರು. ಪತ್ರಕರ್ತ ಹುಡೇಂ ಕೃಷ್ಣಮೂರ್ತಿ ಕಾರ್ಯಕ್ರಮ ನಿರೂಪಣೆ ಮಾಡಿದರು.

ಅಗಲಿದ ಪತ್ರಕರ್ತರಿಗೆ ಶ್ರದ್ದಾಂಜಲಿ:

ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅಗಲಿದ ಮೈಸೂರುಮಿತ್ರ ಸಂಪಾದಕ ಗಣಪತಿ, ಅರಸೀಕೆರೆಯ ಕನ್ನಡಪ್ರಭ ವರದಿಗಾರ ಶಾಂತಕುಮಾರ್ ಸೇರಿದಂತೆ ಹಲವರಿಗೆ ಒಂದು ನಿಮಿಶ ಮೌನಾಚರಣೆ ಮಾಡಿ ಶ್ರದ್ದಾಂಜಲಿ ಸಲ್ಲಿಸಲಾಯಿತು.








Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ