LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಲೆಮಾರಿಗಳ ವಿಮೋಚನಾ ದಿನಾಚರಣೆ


ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅಲೆಮಾರಿಗಳ ವಿಮೋಚನಾ ದಿನಾಚರಣೆ ಕಾರ್ಯಕ್ರಮದ ನಿರ್ಣಯಗಳು ಇಂತಿವೆ.


೧. ಅಲೆಮಾರಿ ಸಮುದಾಯಗಳ ಇತಿಹಾಸ, ಅಸ್ಮಿತೆ, ಘನತೆ ಮತ್ತು ಪ್ರಗತಿಯ ದೃಷ್ಟಿಯಿಂದ ಆಗಸ್ಟ್ 31 ರಂದು "ಅಲೆಮಾರಿಗಳ ವಿಮೋಚನಾ ದಿನಾಚರಣೆ"  ಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಬೇಕು. ಮುಂದಿನ ವರ್ಷ ರಾಜ್ಯ ಸರ್ಕಾರವೇ ಆಚರಣೆ ಮಾಡಬೇಕು.


೨. ಅಲೆಮಾರಿ ಸಮುದಾಯಗಳ ಮಾನವ ಹಕ್ಕುಗಳ ದಮನ ಮಾಡಲು ದುರ್ಬಳಕೆ ಆಗುತ್ತಿರುವ Habitual offenders act-1952 ಅನ್ನು ತಿದ್ದುಪಡಿ ಮಾಡಬೇಕು.


೩. ವಿಮುಕ್ತ ಅಲೆಮಾರಿ ಸಮುದಾಯಗಳ ಶಿಕ್ಷಣ, ಉದ್ಯೋಗ ಮತ್ತು ಅರ್ಥಿಕ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ವಿಮುಕ್ತ ಅಲೆಮಾರಿಗಳ ಶಾಶ್ವತ ಆಯೋಗ ಸ್ಥಾಪನೆ ಮಾಡಬೇಕು. ಕೇಂದ್ರ ರಾಜ್ಯ ಸರ್ಕಾರಗಳು ಈ ಸಮುದಾಯಗಳಿಗೆ ವಿಷೇಶ ಪ್ಯಾಕೇಜ್ ನೀಡಬೇಕು.


೪. ರಾಜ್ಯದ ವಿಮುಕ್ತ ಅಲೆಮಾರಿ ಸಮುದಾಯಗಳು  SC, ST, OBC ಪಟ್ಟಿಗಳಲ್ಲಿ ಹಂಚಿಹೊಗಿದ್ದಾರೆ. ಈ ಸಮುದಾಯಗಳನ್ನು ಎಲ್ಲಾ ಹಂತದಲ್ಲಿ ಸಂಘಟಿಸಲು ಯೋಜನೆ ರೂಪಿಸಲಾಗುವುದು.


೫. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಿದೆ. ಬಂಜಾರ, ಬೋವಿ, ಕೊರಮ ಜಾತಿಗಳ ಒಳಗೊಂಡ ಪ್ರವರ್ಗ-ಸಿ ಗುಂಪಿನಲ್ಲಿ ಕೊರಚ ಸೇರಿದಂತೆ ಐವತ್ತಕ್ಕೂ ಹೆಚ್ಚು ಸೂಕ್ಷ್ಮ, ಅತಿ ಸೂಕ್ಷ್ಮ ಜಾತಿಗಳನ್ನು ಸೇರಿಸಿ ಶೇಕಡಾ 5 ರಷ್ಟು  ಮೀಸಲಾತಿ ಹಂಚಿಕೆ ಮಾಡಿದೆ. ಸೂಕ್ಷ್ಮ ಸಮುದಾಯಗಳು ಸಿ ಗುಂಪಿನಲ್ಲಿ ಇರಲು ಇಚ್ಚಿಸದಿದ್ದರೆ ಅವರಿಗೆ ಪ್ರತ್ಯೇಕ ಗುಂಪು ಮಾಡಿ ಹೆಚ್ಚುವರಿ ಮೀಸಲಾತಿ ಹಂಚಿಕೆ ಮಾಡಬೇಕು.

6. ವೀರಶೈವ ಲಿಂಗಾಯತ ಜಂಗಮರು ಸಮುದಾಯಗಳ ಜನರು ಪರಿಶಿಷ್ಟ ಜಾತಿಯ ಸುಳ್ಳು ಜಾತಿ ಪ್ರಮಾಣಪತ್ರ ಗಳನ್ನು ಪಡೆದಿದ್ದಾರೆ. ಪರಿಶಿಷ್ಟರ ಸೌಲಭ್ಯಗಳನ್ನು ಕಬಳಿಸುತ್ತಿದ್ದಾರೆ. ಅಂತಹವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಅವರುಗಳ ಜಾತಿ ಪ್ರಮಾಣಪತ್ರ ಮುಟ್ಟುಗೋಲು ಹಾಕಿಕೊಳ್ಳಬೇಕು. ಮೀಸಲಾತಿ ಮತ್ತಿತರ ಸಮಸ್ಯೆಗಳ ಪರಿಹಾರಕ್ಕಾಗಿ ತಕ್ಷಣ ಪರಿಶಿಷ್ಟ ಜಾತಿಗಳ ಶಾಶ್ವತ ರಾಜ್ಯ ಆಯೋಗವನ್ನ ಪ್ರಾರಂಭಿಸಬೇಕು.


ಕಾರ್ಯಕ್ರಮವನ್ನು ಉಪಸಭಾಪತಿ ರುದ್ರಪ್ಪ ಲಮಾಣಿ ಉದ್ಘಾಟಿಸಿದರು. ನ್ಯಾಯವಾದಿ ಎನ್ ಅನಂತನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಆದರ್ಶ ಯಲ್ಲಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ನ್ಯಾಯವಾದಿ ಸುಭಾಷ್ ರಾಠೋಡ್ ವಿಷಯ ಮಂಡನೆ ಮಾಡಿದರು. ಮಾಜಿ ಸಚಿವೆ ಡಾ ಬಿ ಟಿ ಲಲಿತನಾಯ್ಕ, ನಿವೃತ್ತ ನ್ಯಾಯಾಧೀಶ ವೆಂಕಟೇಶ ವೊರ್ಸೆ, ಶಿವರುದ್ರಸ್ವಾಮಿ, ಕೃಷ್ಣಪ್ಪ ಕೊರಚ, ಹನುಮಂತ ದೊಂಬರ, ಎನ್ ಆರ್ ನಾಯ್ಕ, ಸಿದ್ದಾನಾಯ್ಜ, ಅಂಜನಪ್ಪ, ಮಹೇಶ್ ನಾಯ್ಕ, ಬಸವರಾಜ್ ರಾಠೋಡ್, ಕುಬೇರ ನಾಯ್ಕ, ಗೋಪಾಲ ನಾಯ್ಕ, ಶಾಂತನಾಯ್ಕ ಚನ್ನಗಿರಿ, ಚಂದ್ರಿಕಾ, ಕೊಟ್ರಮ್ಮ ಮತ್ತಿತರರು ಭಾಗವಹಿಸಿ ಮಾತನಾಡಿದರು.



Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ