LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ನೋವನ್ನು ಮಲ್ಲಿಕಾರ್ಜುನ ಖರ್ಗೆ ಹೊರಹಾಕಿದ ಕ್ಷಣ – ಬಿಎಲ್‌ಡಿ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾವೋದ್ಗಾರ

ವಿಜಯಪುರ, ಜುಲೈ 27 – ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಎಲ್‌ಡಿ ಸಂಸ್ಥೆಯ ಕಾರ್ಯಕ್ರಮದಲ್ಲಿ ಮಾತನಾಡುವಾಗ, ತಮ್ಮ ರಾಜಕೀಯ ಜೀವನದಲ್ಲಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಅವಕಾಶ ಕೈ ತಪ್ಪಿದ ದುಃಖವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು.


1999 ರಲ್ಲಿ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದ್ದಾಗ ಅದು ಕೈ ತಪ್ಪಿದ್ದು, “ನಾನು ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತಿದ್ದೆ. ಆದರೆ ಕೇವಲ ನಾಲ್ಕು ತಿಂಗಳ ಹಿಂದೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿ ಆಯ್ಕೆಯಾದರು,” ಎಂದು ಅವರು ಹೇಳಿದರು.


"ನನ್ನ ಸೇವೆ ನೀರಲ್ಲಿ ಹೋಯಿತು" ಎಂಬ ಖರ್ಗೆಯ ವಾಕ್ಯ:


ಖರ್ಗೆ ಮುಂದುವರೆದು, “ನಾನು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಅಪಾರ ಶ್ರಮಪಟ್ಟೆ. ಆದರೆ ನನ್ನ ಸೇವೆ ನೀರಲ್ಲಿ ಹೋಯಿತು,” ಎಂದು ಸ್ವಾಮೀಜಿಗಳ ಸಮ್ಮುಖದಲ್ಲಿ ಭಾವುಕರಾಗಿ ಹೇಳಿದರು. “ನಾನು ಬ್ಲಾಕ್ ಅಧ್ಯಕ್ಷನಿಂದ ಆರಂಭಿಸಿ ಇಂದು ಎಐಸಿಸಿ ಅಧ್ಯಕ್ಷನಾಗಿದ್ದೇನೆ. ನಾನು ಅಧಿಕಾರದ ಬೆನ್ನು ಹತ್ತಿ ಓಡಲಿಲ್ಲ, ಅದು ನನ್ನ ಬಳಿಗೆ ಸ್ವತಃ ಬಂದಿದೆ. ಇದು ನನ್ನ ಶ್ರಮದ ಫಲ,” ಎಂದರು.


ರಜಾಕರ ಹಾವಳಿಯ ಹಿನ್ನಲೆ ನೆನೆಸಿದ ಖರ್ಗೆ:


ಖರ್ಗೆ ಅವರು ತಮ್ಮ ಬಾಲ್ಯದ ಭೀತಿದಾಯಕ ಅನುಭವವನ್ನೂ ಹಂಚಿಕೊಂಡರು. “ರಜಾಕರ ಹಾವಳಿಯ ಸಮಯದಲ್ಲಿ ನನ್ನ ತಾಯಿ, ತಂಗಿ ಮತ್ತು ದೊಡ್ಡಪ್ಪ ಅವರನ್ನು ಕಳೆದುಕೊಂಡೆ. ನಮ್ಮ ತಂದೆ ನನ್ನನ್ನು ಪಣೆ ಇಲ್ಲಿನ ಪುಣೆಯ ಮಹಾರ್ ರೆಜಿಮೆಂಟ್‌ನಲ್ಲಿದ್ದ ಚಿಕ್ಕಪ್ಪನ ಮನೆಗೆ ಕಳುಹಿಸಿದರು. ಸ್ವಾತಂತ್ರ್ಯ ನಂತರ ಅವರು ಅಲ್ಲಿಂದ ತೆರಳಿದಾಗ ನಾವು ಗುಲ್ಬರ್ಗಾಕ್ಕೆ ಬಂದು ನೆಲೆಸಬೇಕಾಯಿತು,” ಎಂದು ಅವರು ಹೇಳಿದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ