LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವಕ್ಕೆಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ

ರಾಯಚೂರು : ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿಯಾದ ಸುಬುದೇಂಧ್ರತೀರ್ಥ ಸ್ವಾಮೀಜಿ ಧ್ವಜಾರೋಹಣ ನೆರವೇರಿಸುವ ಮೂಲಕ ಶುಕ್ರವಾರ ಸಂಜೆ ಚಾಲನೆ ನೀಡಿದರು.



ಇದಕ್ಕೂ ಪೂರ್ವದಲ್ಲಿ ರಾಯರ ಮೂಲವೃಂದಾವನಕ್ಕೆ ಪೂಜೆ ಸಲ್ಲಿಸಿದರು. ನಂತರ ಗೋಪೂಜೆ, ಅಶ್ವಪೂಜೆ ನೆರವೇರಿಸಿ, ಯೋಗೇಂದ್ರ ಮಂಟಪದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಸಪ್ತರಾತ್ರೋತ್ಸವಕ್ಕೆ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿ, ಇಂದಿನಿಂದ ಏಳು ದಿನಗಳ ಕಾಲ ಸಪ್ತರಾತ್ರೋತ್ಸವ ಅತ್ಯಂತ ವೈಭವದಿಂದ ಜರುಗಲಿದೆ ಎಂದರು.

ದೇಶವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದು ಅವರಿಗೆಲ್ಲ ವಸತಿ, ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿದೆ. ಆಗಮಿಸುವ ಭಕ್ತರು ಗುರುರಾಘವೇಂದ್ರರ ಕೃಪೆಗೆ ಪಾತ್ರರಾಗಬೇಕೆಂದು ಹೇಳಿದರು.

ಪ್ರಥಮದಿನದ ಅಂಗವಾಗಿ ಮಾಲೂರಿನ ಪ್ರಸನ್ನ ಕೊರ್ತಿ ದಾಸವಾಣಿ ಪ್ರಸ್ತುತ ಪಡಿಸಿದರು. ಧರ್ಮಾವರಂನ ಲಲಿತಾ ಕಲಾನಿಕೇತನ ಇವರು ಕುಚಪುಡಿ ಸೇವೆ ಸಲ್ಲಿಸಿದರು.

ನಂತರ ರಜತ ರಥೋತ್ಸವ, ಸುವರ್ಣ ರಥೋತ್ಸವ, ಆನೆ ಅಂಬಾರಿ ಸೇವೆ ಜರುಗಿತು. ಮಠದ ಕಂಬಗಳಿಗೆ ಸುವರ್ಣ ಲೇಪಿತ ಕವಚಗಳನ್ನು ಅಳವಡಿಸಲಾಯಿತು.
೦-೦-೦-೦

 
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ