LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ದೂರುಗಳ ಪ್ರಾಧಿಕಾರದ ಆದೇಶ ತೀರ್ಪುಗಳನ್ನು ಕನ್ನಡದಲ್ಲಿ ಹೊರಡಿಸಿ -ಮೋಹನ್ ಕುಮಾರ್ ದಾನಪ್ಪ

 

ಬೆಂಗಳೂರು: 06, ರಾಜ್ಯದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯಲೋಪ ಮತ್ತು ಗಂಭೀರ ದುರ್ನಡತೆ, ಅಧಿಕಾರ ದುರ್ಬಳಕೆ ಸೇರಿದಂತೆ ಪೊಲೀಸ್ ದೌರ್ಜನ್ಯ ವಿರುದ್ದ ಸಲ್ಲಿಸುವ ದೂರುಗಳ ಆದೇಶಗಳನ್ನು ಕನ್ನಡದಲ್ಲೇ ಹೊರಡಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷರಾದ ಜಸ್ಟೀಸ್ ಎನ್.ಕೆ.ಸುಧೀಂದ್ರ ರಾವ್ ರವರಿಗೆ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ!

ರಾಜ್ಯದಿಂದ ದೂರುಸಲ್ಲಿಸುವ ದೂರುದಾರರು ಬಹುತೇಕ ಕೆಳ ಮತ್ತು ಮಧ್ಯಮ ವರ್ಗದವರಾಗಿದ್ದು ಬಹುತೇಕ ಜನರು ಪೂರಕ ಶಿಕ್ಷಣ ಪಡೆದವರಾಗಿದ್ದು ಗ್ರಾಮೀಣ ಭಾಗದವರಾಗಿರುತ್ತಾರೆ, ಕೆಲವರು ದೂರು ಬರೆಯಲು ಶಕ್ತರಾದರೆ ಇನ್ನು ಕೆಲವರು ಶಿಕ್ಷಣವಂತರ ಹಾಗೂ ವಕೀಲರ ಸಹಾಯದಿಂದ ದೂರು ಬರೆಯಿಸಿ ಪ್ರಾಧಿಕಾರದಲ್ಲಿ ಸಲ್ಲಿಸುತ್ತಿದ್ದು, ವಿಚಾರಣೆ ಕೈಗೊಂಡ ಸಂದರ್ಭದಲ್ಲಿ ಆಂಗ್ಲ ಭಾಷೆಯಲ್ಲಿ ಆದೇಶ ಘೋಷಣೆ ಮತ್ತು ದೂರಿನ ಅಂತಿಮ ಆದೇಶ/ನಡಾವಳಿಗಳನ್ನು ಆಂಗ್ಲಭಾಷೆಯಲ್ಲಿ ಹೊರಡಿಸುತ್ತಿರುವುದರಿಂದ ದೂರುದಾರರಿಗೆ ಅರ್ಥವಾಗದೇ ನಡಾವಳಿಯಲ್ಲಿನ ವಿಷಯ ತಿಳಿಯಲು ಕಷ್ಟಕರವಾಗಿರುತ್ತದಲ್ಲದೆ  ಮತ್ತೊಬ್ಬರನ್ನು ಆಶ್ರಯಿಸಬೇಕಾದ ಅನಿವಾರ್ಯತೆಯಿದ್ದು ಸಾರ್ವಜನಿಕ ಹಿತಾದೃಷ್ಟಿಯಿಂದ ಪ್ರಾಧಿಕಾರದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಂತೆ ಪ್ರಸ್ತುತ ಬಾಕಿ ಇರುವ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಆದೇಶ/ತೀರ್ಪುಗಳನ್ನು ಕನ್ನಡದಲ್ಲೇ ಹೊರಡಿಸುಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಒತ್ತಾಯಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ