ಬೆಂಗಳೂರು: ನಮ್ಮ ಹೆಮ್ಮೆಯ ರಾಜ್ಯದ ನಂದಿನಿ ಉತ್ಪನ್ನಗಳನ್ನು ಕಡೆಗಣಿಸಿ, ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಮಳಿಗೆಗಳನ್ನು ತೆರೆಯಲು ನಮ್ಮ ಮೆಟ್ರೋ ಮುಂದಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣದಲ್ಲಿ 20 ನಂದಿನಿ ಮಳಿಗೆಗಳನ್ನು ರಿಯಾಯಿತಿ ದರದಲ್ಲಿ ತೆರೆಯಲು ಬಿ.ಎಂ.ಆರ್.ಸಿ.ಎಲ್. ಒಪ್ಪಿದೆ.
ಃಒಖಅಐ ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಅಮೂಲ್ ಸಂಸ್ಥೆಯ ಕಿಯೋಸ್ಕ÷್ಗಳನ್ನು ತೆರೆಯಲು ಅವಕಾಶ ಕೊಟ್ಟಿತ್ತು. ಈ ಬಗ್ಗೆ ಗುಜರಾತ್ ಮಿಲ್ಕ್ ಫೆಡರೇಶನ್ ಜೊತೆ ಒಪ್ಪಂದಕ್ಕೆ ಸಹಿ ಕೂಡ ಹಾಕಿತ್ತು. ರಾಜ್ಯದ ರೈತರ ಹೆಮ್ಮೆಯ ಕೆಎಂಎಫ್ ನಂದಿನಿಗೆ ಮಣೆ ಹಾಕಿರಲಿಲ್ಲ.
ಬಿ.ಎಂ.ಆರ್.ಸಿ.ಎಲ್. ನಿರ್ಧಾರದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಗೊಂಡ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಪ್ರವೇಶಿಸಿ, ಬಿ.ಎಂ.ಆರ್.ಸಿ.ಎಲ್.ಗ್ಲೋಬಲ್ ಟೆಂಡರ್ ಕರೆದಿದ್ದÄಂಟು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿ.ಎಂ.ಆರ್.ಸಿ.ಎಲ್. ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಹಾಗೂ ಕೆಎಂಎಫ್ ಎಂಡಿ ಶಿವಸ್ವಾಮಿ ಉನ್ನತ ಮಟ್ಟದ ಸಭೆ ನಡೆಸಿದ್ದರು. ಡಿ.ಕೆ. ಶಿವಕುಮಾರ್ ಅವರು ಹೇಳಿದಂತೆ 8 ಕಡೆ ನಂದಿನಿ ಮಳಿಗೆಗಳು ಓಪನ್ ಮಾಡಲು ಹಾಗೂ ಸರ್ಕಾರದ ನಿರ್ದೇಶನದಂತೆ 2 ಕಡೆಗಳಲ್ಲಿ ಮಾತ್ರ ಅಮೂಲ್ಗೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
ಕೆಎAಎಫ್ನ ಶಿವಸ್ವಾಮಿ ಅವರು ಮಾತನಾಡಿ, ನಗರದ 20 ಮೆಟ್ರೋ ನಿಲ್ದಾಣದಲ್ಲಿ ರಿಯಾಯಿತಿ ದರದಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ಕೊಡ್ತೇವೆ. ಈ ಹಿಂದೆ 2020-22ರ ಅವಧಿಯಲ್ಲಿ ಮೆಟ್ರೋ ನಿಲ್ದಾಣದಲ್ಲಿ ಮಳಿಗೆ ತೆರೆಯಲು ಬಿ.ಎಂ.ಆರ್.ಸಿ.ಎಲ್. ಟೆಂಡರ್ ಕರೆದಿತ್ತು. ಆಗ ಕೆಎಂಎಫ್ ಈ ಟೆಂಡರ್ನಲ್ಲಿ ಭಾಗಿ ಆಗಿರಲಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ಕೂಡಾ ಇರಲಿವೆ ಎಂದು ತಿಳಿಸಿದ್ದಾರೆ.